ಬೀದರ.24.ಜನವರಿ.25:- ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಹಳ್ಳಿಖೇಡ (ಕೆ) ಮತ್ತು ಹುಮನಾಬಾದ ರೈಲು ನಿಲ್ದಾಣಗಳ ಮಧ್ಯ ಕೆಮ್ ನಂ. 49/7-8 ನೇದ್ದರಲ್ಲಿ ದಿನಾಂಕ: 22=12-2024 ರಂದು ಬೆಳಿಗ್ಗೆ 9.40 ಗಂಟೆಗೆ ಸುಮಾರು 45 ವಯಸ್ಸಿನ ಅಪರಿಚಿತ ಗಂಡು ಮನುಷ್ಯನ ಮೃತದೇಹವು ಪತ್ತೆಯಾಗಿದ್ದು ಈವರೆಗೆ ಮೃತನ ವಾರಸುದಾರರು ಯಾರೆಂದು ಇಲ್ಲಿಯವರೆಗೆ ಪತ್ತೆಯಾಗಿರುವುದಿಲ್ಲ ಎಂದು ಬೀದರ ರೈಲ್ವೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ ರೈಲು ನಿಲ್ದಾಣದ DY. S.S.SC RLY ಬೀದರ ಅವರ ಲಿಖಿತ ದೂರಿನನ್ವಯ ಬೀದರ ರೈಲ್ವೆ ಪೊಲೀಸ್ ಠಾಣೆಯ ಯುಡಿಆರ್ ಸಂ. 34/2024 ಕಲಂ 194 ನೇದ್ದರಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ. ಮೃತ ವ್ಯಕ್ತಿಯು 5 ಫೀಟ್ 6 ಇಂಚ್ ಎತ್ತರ ಇದ್ದು, ಅಗಲವಾದ ಹಣೆ, ಸಧೃಡ ಮೈಕಟ್ಟು, ಗೋಧಿ ಮೈಬಣ್ಣ, ತಲೆಯಲ್ಲಿ ಕಪ್ಪು ಉದ್ದನೆಯ ಕೂದಲು, ಮುಖದ ಮೇಲೆ ಉದ್ದನೆಯ ಗಡ್ಡ ಮತ್ತು ಮೀಸೆ ಇದ್ದು, ಮೇಮೇಲೆ ಒಂದು ಕಪ್ಪು ಬಣ್ಣದ ಜಾಕೇಟ್, ಒಂದು ಕಪ್ಪು ಬಣ್ಣದ ಪ್ಯಾಂಟ್, ಒಂದು ಕಂದು ಬಣ್ಣದ ಅಂಡರವೇರ, ಬೂದು ಬಣ್ಣದ ರೌಡ್ ನೇಕ್ ಟಿ-ಶರ್ಟಧರಿಸಿರುತ್ತಾನೆ.
ಈ ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಯಾರಾದರೂ ಇದ್ದಲ್ಲಿ ಅಥವಾ ವಾರಸುದಾರರ ಬಗ್ಗೆ ಯಾರಿಗಾದರು ಮಾಹಿತಿ ಅಥವಾ ಸುಳಿವು ಸಿಕ್ಕಲ್ಲಿ ಪೊಲೀಸ್ ಉಪ ನಿರೀಕ್ಷಕರು ರೈಲ್ವೆ ಪೊಲೀಸ್ ಠಾಣೆ ಬೀದರ ಅಥವಾ ದೂರವಾಣಿ ಸಂಖ್ಯೆ: 08482-226389, ಮೊಬೈಲ್ ಸಂಖ್ಯೆ: 9480802133, 7483095508, 7-19384645 ಗೆ ಸಂಪರ್ಕಿಸುವAತೆ ಅವರು ಕೋರಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…