ಶಾಲಾ-ಕಾಲೇಜುಗಳಿಗೆ ರಜೆ, 7 ದಿನಗಳ ಕಾಲ ಶೋಕಾಚರಣೆ ಘೋಷಣೆ!

ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರ ನಿಧನದ ಹಿನ್ನಲೆ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಘೋಷಣೆ ಮಾಡಲಾಗಿದೆ.ಜೊತೆಗೆ ನಾಳೆ (ಶುಕ್ರವಾರ) ಸರ್ಕಾರಿ ರಜೆ ಘೋಷಿಸಲಾಗಿದೆ.

ಅಲ್ಲದೇ ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರ ಗಳ ಕಾಲ ರದ್ದು ಮಾಡೋದಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ. ಇದರ ನಡುವೆ ಮನಮೋಹನ್ ಸಿಂಗ್ ಅವರ ನಿಧನ ಹಿನ್ನಲೆ ನಾಳೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ರದ್ದು ಮಾಡಲಾಗಿದೆ.

7 ದಿನಗಳ ರಾಷ್ಟ್ರೀಯ ಶೋಕಾಚರಣೆ:

ನಾಳೆ ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದ್ದು, ಡಾ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 11 ಗಂಟೆಗೆ ಕೇಂದ್ರ ಸಚಿವ ಸಂಪುಟ ಸಭೆ ಸೇರಿ ಶ್ರದ್ಧಾಂಜಲಿ ಸಲ್ಲಿಸಲಿದೆ.

ಭಾರತ ಸರ್ಕಾರದ ಮೂಲಗಳ ಪ್ರಕಾರ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ವರದಿಯಾಗಿದೆ.

ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಶಾಲೆ. ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

prajaprabhat

Recent Posts

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

43 minutes ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

48 minutes ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

53 minutes ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

58 minutes ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

1 hour ago

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

6 hours ago