07/08/2025 5:52 PM

Translate Language

Home » ಲೈವ್ ನ್ಯೂಸ್ » ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ:ಅದ್ಧೂರಿಯಾಗಿ ಆಚರಿಸಲು ನಿರ್ಧಾರ: ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ

ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ:ಅದ್ಧೂರಿಯಾಗಿ ಆಚರಿಸಲು ನಿರ್ಧಾರ: ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ

Facebook
X
WhatsApp
Telegram


ಬೀದರ.05.ಮಾರ್ಚ.25: – ಬೀದರ್ ಜಿಲ್ಲೆಮಾರ್ಚ್.16 ರಂದು ನಡೆಯುವ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ತಿಳಿಸಿದರು.


ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಾರ್ಚ.16 ರಂದು ನಡೆಯುವ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ ಕುರಿತು ಕರೆದ ಪೂರ್ವ ಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


ಮಹಾತ್ಮರು ಮತ್ತು ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿಯನ್ನು ಜಿಲ್ಲಾಡಳಿತದಿಂದ ಬೇಕಾದ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗುವುದು. ಅಂದು ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಹಾಗೂ ಗ್ರಾಮ ಪಂಚಾಯತಗಳಲ್ಲಿ ಮಹಾತ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು ಹಾಗೂ ಎಲ್ಲಾ ಸರ್ಕಾರಿ ಕಛೇರಿಗಳ ಮೇಲೆ ಹಾಗೂ ಎಲ್ಲಾ ಸರ್ಕಲ್‍ಗಳಲ್ಲಿ ದೀಪಾಲಂಕಾರ ಮಾಡಬೇಕೆಂದು ಹೇಳಿದರು.


ಅಂದು ಬೆಳಿಗ್ಗೆ 9:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ರಥ ಮೆರವಣಿಗೆಗೆ ಚಾಲನೆ ನೀಡಲಾಗುವುದು, ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಶಿವಾಜಿ ಸರ್ಕಲ್, ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್, ಕರಿಯಪ್ಪ ಸರ್ಕಲ್ ಮೂಲಕ ಪೂಜ್ಯ ಶ್ರೀ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ 11:30 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.


ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾದ ವೈಜಿನಾಥ ಕಂಠಾಣೆ ಅವರು ಮಾತನಾಡಿ, ಸಮಾಜದ ಒಳಿತಿಗಾಗಿ ಮತ್ತು ಸಮಾಜದ ಸುಧಾರಣೆಗಾಗಿ ದುಡಿದಿರುವ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಕೇವಲ ಒಂದು ಜಾತಿಗೆ ಸೀಮಿತವಾಗದೆ ಎಲ್ಲರೂ ಒಂದಾಗಿ ಜಯಂತಿಯನ್ನು ಆಚರಿಸೋಣ, ಮೆರವಣಿಗೆಯಲ್ಲಿ ಡಿಜೆ ಬಳಸಲಾಗುವುದಿಲ್ಲ ಅದರ ಬದಲಿಗೆ ಸಿದ್ಧಾಂತ ಶಿಖಾಮಣಿ ಪುಸ್ತಕವನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವಯ್ಯ ಸ್ವಾಮಿ, ಶಿವಶರಣಪ್ಪ ವಾಲಿ, ಬಿ.ಜಿ. ಸೆಟ್ಕಾರ್, ಕುಶಾಲ್ ಪಾಟೀಲ್ ಖಾನಾಪುರ, ರಾಮಕೃಷ್ಣ ಸಾಳೆ, ಸಿದ್ದರಾಮಯ್ಯ ಸ್ವಾಮಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD