ಬೀದರ.21.ಫೆಬ್ರುವರಿ.25:- ಸಂತಕವಿ ಸರ್ವಜ್ಞರ ತತ್ವಗಳನ್ನು ನಾವು ನಮ್ಮ ಜೀವನದಲ್ಲಿ ಪಾಲಿಸೋಣ ಅವರು ಹಾಕಿದ ಮಾರ್ಗದಲ್ಲಿ ಸಾಗೋಣ ಎಂದು ಅಪರ ಜಿಲ್ಲಾಧಿಕಾರಿ ಶಿವುಕುಮಾರ ಶೀಲವಂತ ಅವರು ಹೇಳಿದರು.
ಸರ್ವಜ್ಞ ಎಂದರೆ ಸರ್ವವನ್ನೂ ಬಲ್ಲವನು ಎಂದರ್ಥ, ಸರ್ವಜ್ಞ ಎಲ್ಲಾ ವಿಷಯಗಳ ಬಗ್ಗೆ ಜ್ಞಾನವನ್ನು ಹೊಂದಿದ್ದರು. ಸರಳವಾದ ಜನರು ಆಡುವ ಭಾμÉಯಲ್ಲಿಯೇ ಸಾಹಿತ್ಯವನ್ನು ರಚಿಸಿದ್ದಾರೆ.
ಡಾಂಭಿಕ ಜೀವನ, ಡಾಂಭಿಕ ಭಕ್ತಿಯನ್ನು ಕಟುವಾಗಿ ಖಂಡಿಸಿದರು, ಸರ್ವಜ್ಞ ಜನರು ಆಚಾರ-ವಿಚಾರಗಳು, ಸಮಾಜದ ವ್ಯವಸ್ಥೆಯನ್ನು ತಮ್ಮ ಸಾಹಿತ್ಯದಲ್ಲಿ ತಿಳಿಸಿಕೊಟ್ಟಿದ್ದಾರೆ. ನಾವು ಚಿಕ್ಕವರಿದ್ದಾಗ ಸರ್ವಜ್ಞನ ವಚನಗಳನ್ನು ಹಾಡುತ್ತ ಮನೆಗಳಿಗೆ ಬರುತ್ತಿದ್ದ ಸ್ವಾಮಿಗಳು ಅವರು ದವಸ ಧಾನ್ಯಗಳನ್ನು ತೆಗೆದುಕೊಂಡು ಹೋಗುತ್ತಿದ್ದರು.
ಸರ್ವಜ್ಞನವರೆ ಹೇಳಿದಂತೆ ಕೊಟ್ಟಿದ್ದು ತನಗೆ ಬಚ್ಚಿಟ್ಟಿದು ಪರರಿಗೆ ಎನ್ನುವಂತೆ ಅವರ ಹಲವಾರು ವಚನಗಳು ಬಹಳ ಅರ್ಥಪೂರ್ಣವಾಗಿ ಮತ್ತು ಅವು ಇಂದಿನ ಸಮಾಜಕ್ಕೆ ಬಹಳ ಪ್ರಸ್ತುತತೆ ಇವೆ ಎಂದರು.
ಯುವ ಸಾಹಿತಿ ಮತ್ತು ಪ್ರಾಧ್ಯಾಪಕರಾದ ಈಶ್ವರ ರುಮ್ಮಾ ಅವರು ಮಾತನಾಡಿ, ಸಂತಕವಿ ಸರ್ವಜ್ಞ ಅವರು 16ನೇ ಶತಮಾನದಲ್ಲಿ ಹಾವೇರಿ ಜಿಲ್ಲೆಯ ಅಂಬಲೂರಿನಲ್ಲಿ ಜನಿಸಿದರು. ತಂದೆ ಬಸವರಸ, ತಾಯಿ ಕುಂಬಾರ ಮಾಳೆ, ಇವರ ತಂದೆ ಕಾಶಿ ವಿಶ್ವನಾಥ ದೇಗುಲಕ್ಕೆ ಹೋಗಿ ಹರಿಕೆ ಮಾಡಿ ಇವರನ್ನು ಪಡೆದರು.
ಸರ್ವಜ್ಞ ಅವರ ಮೂಲ ಹೆಸರು ಪುಷ್ಪದತ್ತ. ಚಿಕ್ಕ ವಯಸ್ಸಿನಲ್ಲೇ ವೇದಗಳ ಬಗ್ಗೆ, ವಚನ ಸಾಹಿತ್ಯದ ಬಗ್ಗೆ ಅಧ್ಯಯನ ಮಾಡಿದರು. ಮುಂದೆ ಹಳ್ಳಿ ಹಳ್ಳಿಗೆ ಸಂಚಾರಿಸಿ ಜನರ ಸಮಸ್ಯೆಗಳನ್ನು ಅರಿತರು. ಜನರ ಆಡು ಭಾμÉಯಲ್ಲಿ ತ್ರಿಪದಿಗಳನ್ನು ರಚಿಸಿದರು. ಮೂಡನಂಬಿಕೆ, ಜಾತಿ ವ್ಯವಸ್ಥೆ, ಡಾಂಭಿಕ ಭಕ್ತಿಯನ್ನು ಕಟುವಾಗಿ ಖಂಡಿಸಿದರು ಎಂದು ಹೇಳಿದರು.
ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂತಕವಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿಗಳಾದ ಚಂದ್ರಕಾಂತ ಪೂಜಾರ ಹಾಗೂ ಸಮಾಜದ ಗಣ್ಯರಿಂದ ಪೂಜೆ ಸಲ್ಲಿಸಿ ನಂತರ ಮೆರವಣಿಗೆಗೆ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಚಾಲನೆ ನೀಡಲಾಯಿತು. ಬೀದರ ನಗರದ ವಿವಿಧ ವೃತ್ತಗಳ ಮೂಲಕ ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮಂದಿರದವರೆಗೆ ಸಂತಕವಿ ಸರ್ವಜ್ಞ ಭಾವಚಿತ್ರದ ಮೆರವಣಿಗೆ ನಡೆಯಿತು.
ಕಾರ್ಯಕ್ರಮದಲ್ಲಿ ಮಂಜುನಾಥ ಸ್ವಾಮಿ ಮತ್ತು ತಂಡದಿಂದ ಸಂತಕವಿ ಸರ್ವಜ್ಞ ಗಾಯನ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ವಿಜಯಕುಮಾರ್ ಸೊನರ್, ಸಮಾಜದ ಮುಖಂಡರಾದ ವಿಠಲ ಕುಂಬಾರ, ಪವನ ಕುಂಬಾರ, ಶಂಕರ ಶೆಟ್ಟಿ ಕುಂಬಾರ, ಮಲ್ಲಿಕಾರ್ಜುನ ಕುಂಬಾರ ಸೇರಿದಂತೆ ಸಮಾಜದ ಇತರೇ ಮುಖಂಡರುಗಳು ಉಪಸ್ಥಿತರಿದ್ದರು.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…