ಸಂತ ಸೇವಾಲಾಲ ಮಹಾರಾಜರ ತತ್ವ, ಸಂದೇಶಗಳನ್ನುನಾವೇಲ್ಲರೂ ಪಾಲಿಸೋಣ- ಸಂಸದ ಸಾಗರ ಈಶ್ವರ ಖಂಡ್ರೆ

ಬೀದರ.16.ಫೆಬ್ರುವರಿ.25: – ಸಂತ ಸೇವಾಲಾಲ್ ಮಾಹಾರಾಜರ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಾವೇಲ್ಲರೂ ಮುನ್ನಡೆಯಬೇಕೆಂದು ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ ಹೇಳಿದರು.


ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಡೆದ 286ನೇ ಸಂತ ಸೇವಾಲಾಲ್ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಸಂತ ಸೇವಾಲಾಲ ಮಹಾರಾಜರು ಮಹಾನ್ ಪವಾಡ ಪುರುಷರಾಗಿದ್ದರು, ಅವರು ಜನರ ಸಮಸ್ಯೆಗಳನ್ನು ಆಲಿಸಿಸುತ್ತಿದ್ದರು, ಮೂಡನಂಬಿಕೆ, ಕೆಟ್ಟ ಆಚರಣೆಗಳ ವಿರುದ್ಧ ಧ್ವನಿ ಎತ್ತಿದರು ಮತ್ತು ಜನರಿಗೆ ತಿಳಿವಳಿಕೆ ಮೂಡಿಸಿದರು. ಸಮಾಜದ ಐಕ್ಯತೆ ಮತ್ತು ಸಹಬಾಳ್ವೆಗೆ ಪ್ರೇರೆಪಿಸಿದರು. ಬ್ರೀಟಿಷರು ತೆರಿಗೆ ಹೆಚ್ಚಳ ಮಾಡಿದಾಗ ವೀರ ಸೇನಾನಿಯಾಗಿ ಹೋರಾಡಿದರು. ಯಾವುದೇ ಮಹಾನ ಪುರುಷರು ಒಂದೆ ಜಾತಿಗೆ ಸಿಮಿತವಿಲ್ಲ.

ಅವರು ಮಾನವ ಕುಲಕ್ಕೆ ಸುಧಾರಣೆಗೆ ಪ್ರಯತ್ನಿಸಿದವರು ಎಂದು ತಿಳಿಸಿದರು.


ಬೀದರ ಕವಿರತ್ನ ಕಾಳಿದಾಸ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ರಾಜಕುಮಾರ ಥಾವರಾ ಖೋಲಾ ಅವರು ತಮ್ಮ ಅತಿಥಿ ಉಪನ್ಯಾಸದಲ್ಲಿ ಮಾತನಾಡಿ, ಸಂತ ಸೇವಾಲಾಲ ಅವರು ದಾವಣಗೆರೆ ಜಿಲ್ಲೆಯ ಸುರಗೊಂಡನ ಕೊಪ್ಪದಲ್ಲಿ 1739ರ ಫೆಬ್ರವರಿ 15 ರಂದು ಶಿರಿಸಿಯ ಮಾರಿಕಾಂಬಾ ದೇವಿಯ ಕೃಪಾದಿಂದ ಜನಿಸಿದರು.

ಹೆಂಗಸರು, ಗಂಡಸರು ಭಾಯಿ(ಅಣ್ಣ) ಎನ್ನುವುದರಿಂದಾಗಿ ಆ ಜನ್ಮ ಬ್ರಹ್ಮಚಾರಿ ಜೀವನ ಕಳೆದರು. ಸಂತ ಪರಂಪರೆಯ ಕಡೆಗೆ ಒಲವು ಹೊಂದಿದ್ದ ಸೇವಾಲಾಲ ತನ್ನ ಪವಾಡಗಳಿಂದ ಸೇವಾ ಭಾಯಿ ಎಂದೇ ಪ್ರಸಿದ್ಧರಾದರು.

ಭವ್ಯ ಸಂಸ್ಕೃತಿ ಹೊಂದಿರುವ ಬಂಜಾರ ಸಮುದಾಯವನ್ನು ಲಂಬಾಣಿ, ಲಮಾಣಿ, ಸುಗಾಲಿ, ಸುಕಾಲಿ ಗೋರ್, ಢಾಡಿ, ಢಾಲ್ಯ, ಸೋನಾರ್, ಲೋಹಾರ್ ಮುಂತಾದ ಅನೇಕ ಉಪನಾಮಗಳಿಂದ ಕರೆಯಲಾಗುತ್ತದೆ ಎಂದು ತಿಳಿಸಿದರು.


ಕಾರ್ಯಕ್ರಮಕ್ಕೂ ಮುಂಚಿತವಾಗಿ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಶ್ರೀ ಸಂತ ಸೇವಾಲಾಲ ಮಹಾರಾಜನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಸೇವಲಾಲ ಮಾಹಾರಾಜರ ಭಾವಚಿತ್ರ ಮೆರವಣಿಗೆ ಪ್ರರಾಂಭಗೊಂಡು ಶಿವಾಜಿ ವೃತ್ತ, ಭಗತಸಿಂಗ್ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ, ಜನರಲ್ ಕರಿಯಪ್ಪ ವೃತ್ತದಿಂದ ರಂಗಮಂದಿರದ ವರೆಗೆ ನಡೆಯಿತು.


ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಸಹಾಯಕ ಆಯುಕ್ತರಾದ ಮಹಮ್ಮದ ಶಕೀಲ, ಬಂಜಾರ ಶಕ್ತಿ ಪೀಠ ಸೇವಾ ನಗರದ ಗುರುಗಳಾದ ರಾಮ ಚೈತನ್ಯ ಮಹಾರಾಜರು , ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಪರಮೇಶ್ವರ್ ನಾಯಕ್, ಸಮಾಜದ ಮುಖಂಡರಾದ ಗೋವರ್ಧನ ರಾಥೋಡ್, ಬಸವರಾಜ ಪವಾರ್, ರಮೇಶಕುಮಾರ್ ಜಾಧವ, ಮಾಣಿಕರಾವ ಪವಾರ್ ಮತ್ತು ಇತರೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

3 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

11 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

11 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

11 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

11 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

12 hours ago