ಸಂಸದರಾದ ಸಾಗರ್ ಖಂಡ್ರೆ ಅವರು ಸಂಸತ್ತಿನಲ್ಲಿ ರೈಲ್ವೆ ಕುರಿತ ಪ್ರಮುಖ ಸಮಸ್ಯೆಗಳನ್ನು ಪ್ರಸ್ತಾಪಿಸಿದರು.!

✅ ರೈಲ್ವೆ ಅಪಘಾತಗಳ ಕುರಿತು:

ಹೊಸ ದೆಹಲಿ.18.ಮಾರ್ಚ.25:- ಕಳೆದ ದಶಕದಲ್ಲಿ ರೈಲ್ವೆ ಸಂಬಂಧಿತ ಅಪಘಾತಗಳಲ್ಲಿ 2.6 ಲಕ್ಷಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂಬ NCRB ಅಂಕಿಅಂಶ ಉಲ್ಲೇಖಿಸಿ, ಈ ಸಮಸ್ಯೆ ಪರಿಹಾರಕ್ಕಾಗಿ KAVACH ತಂತ್ರಜ್ಞಾನವನ್ನು ತ್ವರಿತಗತಿಯಲ್ಲಿ ಜಾರಿಗೆ ತರುವಂತೆ ಸರ್ಕಾರವನ್ನು ಒತ್ತಾಯಿಸಿದರು. ಅವರು ಈ ತಂತ್ರಜ್ಞಾನವನ್ನು ಜಾರಿಗೆ ತರುವಲ್ಲಿ ಈಗಾಗಲೇ 68,000 ಕಿಮೀ ರೈಲ್ವೆ ಮಾರ್ಗಗಳ ಪೈಕಿ ಕೇವಲ 3,700 ಕಿಮೀ ವ್ಯಾಪ್ತಿಯಲ್ಲಿಯೇ ಈ ತಂತ್ರಜ್ಞಾನ ಜಾರಿಗೆ ಬಂದಿರುವುದನ್ನು ಉಲ್ಲೇಖಿಸಿದರು.

✅ ಅಮೃತ ಭಾರತ ನಿಲ್ದಾಣ ಯೋಜನೆ:

ಈ ಯೋಜನೆ ಅತಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, 2024-25ರಲ್ಲಿ 450ಕ್ಕೂ ಅಧಿಕ ನಿಲ್ದಾಣಗಳನ್ನು ಪುನರ್ ಅಭಿವೃದ್ಧಿಪಡಿಸುವ ಯೋಜನೆಯಿದ್ದರೂ ಈವರೆಗೆ ಕೇವಲ ಒಂದು ನಿಲ್ದಾಣ ಮಾತ್ರ ಪೂರ್ಣಗೊಂಡಿರುವುದನ್ನು ಉಲ್ಲೇಖಿಸಿದರು. ಆದಷ್ಟು ಶೀಘ್ರ ರೈಲು ನಿಲ್ದಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದರು.

✅ ಬೀದರ ಲೋಕಸಭಾ ಕ್ಷೇತ್ರದ ಅಭಿವೃದ್ಧಿ:

ಕಮಲನಗರ ಹಾಗೂ ಭಾಲ್ಕಿ ರೈಲ್ವೆ ನಿಲ್ದಾಣಗಳನ್ನು ಮುಂದಿನ ಹಂತದ ಅಮೃತ ಭಾರತ ನಿಲ್ದಾಣ ಯೋಜನೆಗೆ ಸೇರ್ಪಡಿಸುವಂತೆ ಒತ್ತಾಯಿಸಿದರು.

ಬೀದರ-ಬೆಂಗಳೂರು ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಸೇರಿಸುವ ಮೂಲಕ ಪ್ರಯಾಣಿಕ ಸೌಲಭ್ಯವನ್ನು ಸುಧಾರಿಸುವಂತೆ ಮನವಿ ಮಾಡಿದರು.

ದಕ್ಷಿಣ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಹೈದರಾಬಾದ್‌ನಿಂದ ಬೀದರಕ್ಕೆ ವಿಸ್ತರಿಸುವಂತೆ ಪ್ರಸ್ತಾಪಿಸಿ, ದೆಹಲಿಗೆ ಉತ್ತಮ ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿದರು.

ಬೀದರ-ಬೆಂಗಳೂರು ವಂದೇ ಭಾರತ ರೈಲು ಆರಂಭಿಸುವಂತೆ ಆಗ್ರಹಿಸಿ, ಇದರಿಂದ ಪ್ರವಾಸಿಗರು ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ತಾಂಡೂರು ಸಿಮೆಂಟ್ ಕ್ಲಸ್ಟರ್ – ಜಹೀರಾಬಾದ್ ಹೊಸ ರೈಲು ಮಾರ್ಗವನ್ನು ಬೀದರ ಲೋಕಸಭಾ ಕ್ಷೇತ್ರದ ಚಿಂಚೋಳಿ ತಾಲ್ಲೂಕು ಮೂಲಕ ಮಾರ್ಗಚಾಲನೆ ಮಾಡುವಂತೆ ಒತ್ತಾಯಿಸಿದರು.

✅ ಮಾಧ್ಯಮ ರಿಯಾಯಿತಿ:

ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿರುವ ಮಾಧ್ಯಮ ಕ್ಷೇತ್ರಕ್ಕೆ ನೀಡಲಾಗುತ್ತಿದ್ದ 50% ರಿಯಾಯಿತಿ ಕೋವಿಡ್ ಬಳಿಕ ಸ್ಥಗಿತಗೊಂಡಿದ್ದು, ಅದನ್ನು ಮರುಪ್ರಾರಂಭಿಸುವಂತೆ ಒತ್ತಾಯಿಸಿದರು.

ಸಂಸದ ಸಾಗರ್ ಖಂಡ್ರೆ ಅವರು ಈ ಎಲ್ಲ ಬೇಡಿಕೆಗಳ ಕುರಿತು ಸರ್ಕಾರವು ತ್ವರಿತ ಕ್ರಮ ಕೈಗೊಂಡು ರೈಲ್ವೆ ಸುರಕ್ಷತೆ, ಮೂಲಸೌಕರ್ಯ, ಮತ್ತು ಪ್ರಯಾಣಿಕರ ಅನುಕೂಲತೆಗಳನ್ನು ಸುಧಾರಿಸುವಂತೆ ಆಗ್ರಹಿಸಿದರು.

prajaprabhat

Recent Posts

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

1 hour ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

3 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

3 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

3 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

4 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

4 hours ago