ಬೆಂಗಳೂರು.06.ಏಪ್ರಿಲ್.25:- ಬೀದರ್ ಲೋಕಸಭಾ ಸಂಸದರಾದ ಶ್ರೀ ಸಾಗರ್ ಖಂಡ್ರೆ ಅವರ ಬೆಂಗಳೂರಿನ ನಿವಾಸ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಕೃಷ್ಣ ಅಪಾರ್ಟಮೆಂಟ್ನ ಮ್ಯಾನೇಜರ್ ಚಂದ್ರಕುಮಾರ್ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹಿಸಲಾಗಿದೆ. ಸಂಸದ ಸಾಗರ್ ಖಂಡ್ರೆ ಅವರ ಮನೆಯ ನವೀಕರಣ ವೇಳೆಯಲ್ಲಿ ಈ ಘಟನೆ ನಡೆದಿದೆ.
ಕೃಷ್ಣ ಅಪಾರ್ಟ್ ಮೆಂಟ್ನ ಮ್ಯಾನೇಜರ್ ಚಂದ್ರಕುಮಾರ್ ಅವರು ಯಾವುದೋ ಸಣ್ಣ ವಿಚಾರಕ್ಕೆ ಅಲ್ಲಿನ ಕಟ್ಟಡ ಕಾರ್ಮಿಕರನ್ನು ಅಡ್ಡಹಾಕಿ ಮನಸ್ಸೋ ಇಚ್ಚೆಯಂತೆ ಬೈದಿದ್ದಾರೆ.
ಈ ಬಗ್ಗೆ ಮನೆಯ ಮಾಲೀಕರಾದ ಸಾಗರ್ ಖಂಡ್ರೆ ಅಥವಾ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡದೇ ಏಕಾಏಕಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.
ಈ ವಿಚಾರವಾಗಿ ಮ್ಯಾನೇಜರ್ ಅವರು ಸಚಿವರ ಆಪ್ತ ಸಹಾಯಕ ಬಳಿ ದೂರವಾಣಿ ಮೂಲಕ ವಿಚಾರಿಸಿದಾಗ ಕೃಷ್ಣ ಅಪಾರ್ಟ್ ಮೆಂಟ್ ಸೆಕ್ರಟರಿ ಆದೇಶದಂತೆ ವಿದ್ಯುತ್ ಸ್ಥಗಿತ ಮಾಡಲಾಗಿದೆ ಎಂದು ಹೇಳಿ ತಕ್ಷಣ ಪೋನ್ ಸ್ವಿಚ್ ಆಫ್ ಮಾಡಿದ್ದಾರೆ. ಹೀಗಾಗಿ ಅನವಶ್ಯಕವಾಗಿ ತಕರಾರು ತೆಗೆದು ತೊಂದರೆ ನೀಡುತ್ತಿರುವ ಕೃಷ್ಣ ಅಪಾರ್ಟ್ ಮೆಂಟ್ ಮ್ಯಾನೇಜರ್ ಹಾಗೇ ವಿದ್ಯುತ್ ಸ್ಥಗಿತ ಮಾಡಲು ಹೇಳಿದವರ ವಿರುದ್ದ ಕಾನೂನು ಕ್ರಮ ತೆಗದುಕೊಳ್ಳುವಂತೆ ದೂರಿನಲ್ಲಿ ಹೇಳಲಾಗಿದೆ.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…