ಬೆಂಗಳೂರು.06.ಏಪ್ರಿಲ್.25:- ಬೀದರ್ ಲೋಕಸಭಾ ಸಂಸದರಾದ ಶ್ರೀ ಸಾಗರ್ ಖಂಡ್ರೆ ಅವರ ಬೆಂಗಳೂರಿನ ನಿವಾಸ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಕೃಷ್ಣ ಅಪಾರ್ಟಮೆಂಟ್ನ ಮ್ಯಾನೇಜರ್ ಚಂದ್ರಕುಮಾರ್ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹಿಸಲಾಗಿದೆ. ಸಂಸದ ಸಾಗರ್ ಖಂಡ್ರೆ ಅವರ ಮನೆಯ ನವೀಕರಣ ವೇಳೆಯಲ್ಲಿ ಈ ಘಟನೆ ನಡೆದಿದೆ.
ಕೃಷ್ಣ ಅಪಾರ್ಟ್ ಮೆಂಟ್ನ ಮ್ಯಾನೇಜರ್ ಚಂದ್ರಕುಮಾರ್ ಅವರು ಯಾವುದೋ ಸಣ್ಣ ವಿಚಾರಕ್ಕೆ ಅಲ್ಲಿನ ಕಟ್ಟಡ ಕಾರ್ಮಿಕರನ್ನು ಅಡ್ಡಹಾಕಿ ಮನಸ್ಸೋ ಇಚ್ಚೆಯಂತೆ ಬೈದಿದ್ದಾರೆ.
ಈ ಬಗ್ಗೆ ಮನೆಯ ಮಾಲೀಕರಾದ ಸಾಗರ್ ಖಂಡ್ರೆ ಅಥವಾ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡದೇ ಏಕಾಏಕಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.
ಈ ವಿಚಾರವಾಗಿ ಮ್ಯಾನೇಜರ್ ಅವರು ಸಚಿವರ ಆಪ್ತ ಸಹಾಯಕ ಬಳಿ ದೂರವಾಣಿ ಮೂಲಕ ವಿಚಾರಿಸಿದಾಗ ಕೃಷ್ಣ ಅಪಾರ್ಟ್ ಮೆಂಟ್ ಸೆಕ್ರಟರಿ ಆದೇಶದಂತೆ ವಿದ್ಯುತ್ ಸ್ಥಗಿತ ಮಾಡಲಾಗಿದೆ ಎಂದು ಹೇಳಿ ತಕ್ಷಣ ಪೋನ್ ಸ್ವಿಚ್ ಆಫ್ ಮಾಡಿದ್ದಾರೆ. ಹೀಗಾಗಿ ಅನವಶ್ಯಕವಾಗಿ ತಕರಾರು ತೆಗೆದು ತೊಂದರೆ ನೀಡುತ್ತಿರುವ ಕೃಷ್ಣ ಅಪಾರ್ಟ್ ಮೆಂಟ್ ಮ್ಯಾನೇಜರ್ ಹಾಗೇ ವಿದ್ಯುತ್ ಸ್ಥಗಿತ ಮಾಡಲು ಹೇಳಿದವರ ವಿರುದ್ದ ಕಾನೂನು ಕ್ರಮ ತೆಗದುಕೊಳ್ಳುವಂತೆ ದೂರಿನಲ್ಲಿ ಹೇಳಲಾಗಿದೆ.
ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ…
ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ…
ಹೊಸ ದೆಹಲಿ.14.ಜೂನ್.25:- UGC NET 2025 ಪರೀಕ್ಷೆಯನ್ನು ಜೂನ್ 25 ರಿಂದ ಜೂನ್ 29, 2025 ರವರೆಗೆ ದೇಶಾದ್ಯಂತ ವಿವಿಧ…
ಕೊಪ್ಪಳ. ಜೂನ್. 14.( ಕರ್ನಾಟಕ ವಾರ್ತೆ):- ಕಾನೂನು. ನ್ಯಾಯ. ಮಾನವ ಹಕ್ಕುಗಳು. ಸಂಸದೀಯ ವ್ಯವಹಾರ. ಶಾಸನ ರಚನೆ ಹಾಗೂ ಪ್ರವಾಸೋದ್ಯಮ…
ನೆದರ್ಲ್ಯಾಂಡ್ಸ್ನ ಆಮ್ಸ್ಟೆಲ್ವೀನ್ನಲ್ಲಿರುವ ವ್ಯಾಗೆನರ್ ಹಾಕಿ ಕ್ರೀಡಾಂಗಣದಲ್ಲಿ ನಿನ್ನೆ ಸಂಜೆ ನಡೆದ ಎಫ್ಐಎಚ್ ಹಾಕಿ ಪ್ರೊ ಲೀಗ್ನಲ್ಲಿ ಭಾರತ ತಂಡವು ಅರ್ಜೆಂಟೀನಾ…
ನಿನ್ನೆ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ, ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ನ 2ನೇ ದಿನದ ಅಂತ್ಯಕ್ಕೆ…