ಸಚಿನ್ ಪಾಂಚಾಳ ಕುಟುಂಬಕ್ಕೆ 10 ಲಕ್ಷ ಪರಿಹಾರ-ಸಚಿವ ಈಶ್ವರ ಖಂಡ್ರೆ

29ಡಿ24 ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತುಗಾಂವ ಗ್ರಾಮದ  ಗುತ್ತೇದಾರ್ ಸಚಿನ್ ಪಾಂಚಾಳ ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ ಗ್ರಾಮದ ನಿವಾಸಿ, ಪ್ರಥಮ ದರ್ಜೆ ಗುತ್ತಿಗೆದಾರ ಸಚಿನ್ ಮೌನಪ್ಪ ಪಾಂಚಾಳ (26) ಅವರ ಮನೆಗೆ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ನೀಡಿ ಸಚಿನ್ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.


ಅವರು ಸಚಿನ್ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಸಚಿವರು, ಸಚಿನ್ ಆತ್ಮಹತ್ಯೆ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಅಲ್ಲದೆ ವೈಯಕ್ತಿಕವಾಗಿ ಮತ್ತು ಸರ್ಕಾರದ ವತಿಯಿಂದ 10 ಲಕ್ಷ ರೂಪಾಯಿ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
ಈಗಾಗಲೇ ರೈಲ್ವೆ ಪೊಲೀಸರು ಈ ವಿಚಾರದಲ್ಲಿ ತನಿಖೆ ನಡೆಸುತ್ತಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಸತ್ಯತೆ ಹೊರತರಲಾಗುವುದು ಎಂದು ಹೇಳಿದರು.


ಇದರಲ್ಲಿ ಯಾರೇ ತಪ್ಪಿತಸ್ಥಿರಿದ್ದರು. ಎಂತಹುದೇ ಪ್ರಭಾವಿಗಳಿದ್ದರೂ ಅವರನ್ನು ಸರ್ಕಾರ ಶಿಕ್ಷೆಗೆ ಗುರಿಪಡಿಸಲಿದೆ ಎಂದರು. ನಿಮ್ಮ ಕುಟುಂಬಕ್ಕೆ ಕ್ಷೇತ್ರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಪ್ರಾಮಾಣಿಕವಾಗಿ ನ್ಯಾಯ ಕೊಡಿಸುವ ಪ್ರಯತ್ನ ಮಾಡುವೆ.

ಸಚಿನ್‌ಗೆ ಅನ್ಯಾಯವಾಗಿದ್ದರೆ ಅದನ್ನು ಸರ್ಕಾರದ ಗಮನಕ್ಕೆ ತರಬಹುದಾಗಿತ್ತು ಎಂದ ಅವರು, ಆದರೂ ಸರ್ಕಾರ ನಿಮ್ಮ ಕುಟುಂಬದೊAದಿಗೆ ಇರಲಿದೆ ಎಂದು ಭರವಸೆ ನೀಡಿದರು.


ಡೆತ್ ನೋಟ್ ಬಗ್ಗೆ ಎಫ್.ಎಸ್.ಎಲ್ ವರದಿ ಬರಲಿ ಅದನ್ನು ನೋಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಕುಟುಂಬಕ್ಕೆ ಆತ್ಮಸ್ಥೆöÊರ್ಯ ಕೊಡಲು ಎಲ್ಲರು ಮುಂದಾಗಬೇಕು. ಇದರಲ್ಲಿ ಯಾರೂ ರಾಜಕೀಯ ಮಾಡಬಾರದು. ನೆಲದ ಕಾನೂನು ಕಾಪಾಡುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.


ಈ ಸಂದರ್ಭದಲ್ಲಿ ಸಚನ್ ಅವರ ತಂದೆ ಮೌನಪ್ಪ ಪಾಂಚಾಳ, ತಾಯಿ ಈರಮ್ಮ, ಸಹೋದರಿಯರಾದ ಸಂಗೀತಾ, ಸುರೇಖಾ, ಸುಜಾತಾ, ಸುನಿತಾ ಹಾಗೂ ಸವಿತಾ ಸೇರಿದಂತೆ ಕುಟುಂಬದ ಇತರ ಸದಸ್ಯರು ಉಪಸ್ಥಿತರಿದ್ದರು.
ಸಚಿವರು 10 ಲಕ್ಷ ಲೋಷಣೇ ಮಾಡಿದಾರೆ.

prajaprabhat

Recent Posts

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

36 minutes ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

43 minutes ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

7 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

8 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

10 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

10 hours ago