08/06/2025 8:03 PM

Translate Language

Home » ಲೈವ್ ನ್ಯೂಸ್ » ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ದಲಿತ ವಿದ್ಯಾರ್ಥಿ ಪರಿಷತವ ತಿಯಿಂದ,ಮನವಿ ಪತ್ರ.!

ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ದಲಿತ ವಿದ್ಯಾರ್ಥಿ ಪರಿಷತವ ತಿಯಿಂದ,ಮನವಿ ಪತ್ರ.!

Facebook
X
WhatsApp
Telegram

ಬೀದರ 07.ಜನೆವರಿ.25 ಇಂದು ಬೀದರ ನಗರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಸರ್ಕಾರದ ಮೇಲೆ ಒತ್ತಡ ತರಲು ಒತ್ತಾಯಿಸಿ ಸತೀಶ್ ಜಾರಕಿಹೊಳಿ ಅವರಿಗೆ ಮನವಿ.

ಬೀದರ ಪ್ರವಾಸದಲ್ಲಿರುವ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ಮನವಿ ಪಾತ್ರದ ಮೂಲಕ ತಿಳಿಸಿದೆ ದಲಿತ ವಿದ್ಯಾರ್ಥಿ ಪರಿಷತ್, ಕಳೆದ ಬಿಜೆಪಿ ಸರ್ಕಾರದಲ್ಲಿ 2019-20ನೇ ಸಾಲಿನ ನಂತರದ ಎಲ್ಲ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು ನಿಲ್ಲಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿತ್ತು, ಅದನ್ನು ವಿರೋಧಿಸಿ.

ದಲಿತ ವಿದ್ಯಾರ್ಥಿ ಪರಿಷತ್ ನಿರಂತರ ಹೋರಾಟ ಮಾಡುತ್ತಾ ಬಂದಿದ, ಈ ಕುರಿತು ಕಾಂಗ್ರೇಸ್ ಸರ್ಕಾರ ವಿರೋಧ ಪಕ್ಷದಲ್ಲಿದಾಗ ಮಾನ್ಯ ಸಿದ್ಧರಾಮಯ್ಯನವರಿಗೆ ಸೇರಿದಂತೆ ಹಲವು ನಾಯಕರಿಗೆ ಮನವಿ ಪತ್ರ ನೀಡಿ ಗಮನ ಸೆಳೆದಿದ್ದು, ಈ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನಿಲ್ಲಿಸಿದ್ದಗಿನಿಂದ ವಸತಿ ಶಾಲೆಗಳ ಪ್ರವೇಶವು ನಿರ್ಬಂಧವಾಗಿದೆ,

ಇದರಿಂದ ವಿಧ್ಯಾಭ್ಯಾಸ ಮುಂದುವರೆಸಲು ವಿದ್ಯಾರ್ಥಿಗಳಿಗೆ ತುಂಬಾ ಹಿನ್ನಡೆಯಾಗುತ್ತದ್ದು ಹಲವು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ, ಗ್ರಾಮೀಣ ಭಾಗದ ಎಲ್ಲ ವಿದ್ಯಾರ್ಥಿಗಳು ನಮ್ಮ ವಸತಿ ನಿಲಯಗಳನ್ನು ಅವಲಂಬಿಸಿದ್ದಾರೆ, ವಿಶೇಷವಾಗಿ ಜಿಲ್ಲೆಯಲ್ಲಿ ಬೆರಳೆಣಿಕೆಯಷ್ಟು ಸರ್ಕಾರಿ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿದ್ದು, ಅದರಿಂದ ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವುದು ಅನಿವಾರ್ಯವಾಗಿದೆ.

ಹಾಗಾಗಿ ಇದನ್ನು ತಾವುಗಳು ಗಂಭೀರವಾಗಿ ಪರಿಗಣಿಸಿ ತಾವುಗಳು ಸದ ಶೋಷಿತ ಸಮುದಾಯದ ಬಗ್ಗೆ ಚಿಂತಿಸುವ ನಿಮ್ಮ ಗಮನವನ್ನು ಸೆಳೆಯುತ್ತಿದ್ದು, ತಾವುಗಳು ಮಾನ್ಯ ಮುಖ್ಯಮಂತ್ರಿಗಳ ಹಾಗು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಗಮನ ಸೆಳೆದು ಆದಷ್ಟು ಬೇಗ ಮ್ಯಾನೇಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಬಿಡುಗಡೆ ಮಾಡಲು ಒತ್ತಾಯಿಸಬೇಕೆಂದು ಸಚಿವರಲ್ಲಿ ಮನವಿ ಪಾತ್ರದ ಮೂಲಕ ಒತ್ತಾಯಿಸಲಾಯಿತು.

Source: www.prajaprabhat.com

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!