ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಕಟ್ಟಿತುಗಾಂವ ಗ್ರಾಮದ ಮೃತ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಭಾನುವಾರ ಭೇಟಿ ನೀಡಿದಾಗ ಸಚಿನ್ ಅವರ ಸಹೋದರಿಯರು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ ಪೊಲೀಸ್ ಠಾಣೆಯಲ್ಲಿ ಗುತ್ತೇದಾರ್ ಸಚಿನ್ ಸಾವಿಗೂ ಮುನ್ನ ಆತನನ್ನು ಹುಡುಕಿಕೊಡುವಂತೆ ಠಾಣೆಗೆ ಹೋದಾಗ ಪೊಲೀಸರು ಸ್ಪಂದಿಸಲಿಲ್ಲ .
ನಮಗೆ ಅವರು ದೂರು ಸ್ವೀಕರಿಸಿ ಹುಡುಕಿದರೆ ಆತ್ಮಹತ್ಯೆ ತಡೆಯಬಹುದಿತ್ತು ಆದರೆ ಅವರು ನಮಗೆ ಸ್ಪಂದಿಸಿಲ್ಲ. ಡೆತ್ ನೋಟ್ ನಲ್ಲಿದ್ದವರನ್ನು ಬಂಧಿಸದ ಪೊಲೀಸರು ಈಗೇಕೆ ಬಂದಿದ್ದಾರೆ. ಮೊದಲು ಅವರನ್ನು ಹೊರಗೆ ಕಳಿಸಿ ಎಂದು ಸಚಿವರ ಸಮ್ಮುಖದಲ್ಲೇ ಆಕ್ರೋಶ ಹೊರಹಾಕಿ ಪಟ್ಟು ಹಿಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿವೈಎಸ್ಪಿ ಜೆ.ಎಸ್. ನ್ಯಾಮೆಗೌಡ ಸೇರಿದಂತೆ ಇತರೆ ಪೊಲೀಸರು ಮನೆಯಿಂದ ಹೊರಹೋದರು.ಬಳಿಕ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ವೈಯಕ್ತಿಕ ಹಾಗೂ ಸರ್ಕಾರದಿಂದ ಜಂಟಿಯಾಗಿ ಹತ್ತು ಲಕ್ಷ ಪರಿಹಾರ ಕುಟುಂಬಕ್ಕೆ ನೀಡಲಾಗುವುದು. ಅವರ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಿಸುವುದರ ಬಗ್ಗೆ ಸಿಎಂ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.
ಗುತ್ತೇದಾರ್ ಸಚಿನ್ ಪಾಂಚಾಳ ಕುಟುಂಬದವರು ಸ್ವತಂತ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಈ ಸಂಬಂಧ ಸಿಎಂ ಜತೆ ಚರ್ಚಿಸಿ ಮನವಿ ಮಾಡುವೆ. ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಲಾಗುವುದು. ಈಗಾಗಲೇ ತನಿಖೆ ಪ್ರಗತಿಯಲ್ಲಿದೆ. ತನಿಖೆ ನಂತರ ಯಾರ ತಪ್ಪಿದೆಯೋ ಅವರಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕುಟುಂಬದವರು ಈ ವಿಷಯದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು. ದುಃಖದಲ್ಲಿರುವ ಕುಟುಂದವರಿಗೆ ಸಾಂತ್ವನ, ಧೈರ್ಯದ ಅಗತ್ಯವಿದೆ. ನಮ್ಮ ಸರ್ಕಾರ ಅವರೊಂದಿಗೆ ಇದೆ. ನಾನು ಬೆಳಗಾವಿಯಲ್ಲಿದ್ದ ಕಾರಣ ಭೇಟಿ ಮಾಡಲು ಅಗಿರಲಿಲ್ಲ. ನಿನ್ನೆ ತಡರಾತ್ರಿ ಬಂದಿದ್ದೇನೆ ಎಂದರು.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…