23 ನವೆಂಬರ24:- ಔರಾದ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೀದರ ವಿಶ್ವವಿದ್ಯಾಲಯ ಬೀದರ ಸಹಯೋಗದಲ್ಲಿ ನಡೆದ 2024-25ನೇ ಸಾಲಿನ ಯೋಗಾಸನ ಪುರುಷ ಹಾಗೂ ಮಹಿಳೆಯರ ಸ್ಪರ್ಧೆ ಮತ್ತು ವಿಶ್ವವಿದ್ಯಾಲಯ ತಂಡಗಳ ಆಯ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಔರಾದನ ಕಾಲೇಜು ಅಭಿವೃದ್ಧಿ ಮಂಡಳಿಯ ಸದಸ್ಯರಾದ ಶ್ರೀ ಶಿವರಾಜ ಅಲಮಾಜೆ ಮಾತನಾಡಿ ಸಧೃಡವಾದ ದೇಹದಲ್ಲಿ ಸಧೃಡವಾದ ಮನಸ್ಸನ್ನು ಯೋಗ ಕೊಡುತ್ತದೆ. ಯೋಗ ಮನಸ್ಸು ಮತ್ತು ದೇಹದ ನಡುವೆ ಸಾಮರಸ್ಯ ಉಂಟುಮಾಡುತ್ತದೆ ಎಂದು ಹೇಳಿದರು. ಅತಿಥಿಯಾಗಿ ಮಾತನಾಡಿದ ಯೋಗಾಚಾರ್ಯ ರಾಜಕುಮಾರ ನಾಯಕ ಮಾತನಾಡಿ ಯೋಗ ಜಗತ್ತಿಗೆ ಭಾರತ ಕೊಟ್ಟ ಬಹು ದೊಡ್ಡ ಕೊಡುಗೆಯಾಗುದ್ದು ಭಾರತವನ್ನು ವಿಶ್ವಗುರುವಾಗಿಸಿದೆ ಎಂದರು. ಇನ್ನೊರ್ವ ಅತಿಥಿಗಳಾದ ಕರ್ನಾಟಕ ಪದವಿ ಕಾಲೇಜಿನ ದೈಹಿಕ ಶಿಕ್ಷಣದ ನಿರ್ದೇಶಕರಾದ ಡಾ. ಮಾದಯ್ಯ ಸ್ವಾಮಿ ಮಾತನಾಡಿ ಯೋಗವು ನೈಸರ್ಗಿಕ ಔಷಧೀಯ ಕಣಜವಾಗಿದೆ ವಿದ್ಯಾರ್ಥಿಗಳು ಪ್ರತಿದಿನ ಯೋಗಾಭ್ಯಾಸ ಮಾಡಬೆಕಂದು ಸಲಹೆ ನೀಡಿದರು. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ವಿನಾಯಕ ಕೊತಮೀರ್ ಮಾತನಾಡಿ ಯೋಗ ಪ್ರತಿಯೊಬ್ಬರ ಮನಸ್ಸಿಗೆ ನೆಮ್ಮದಿ ,ಉತ್ತಮ ಆರೋಗ್ಯ, ದೈಹಿಕ ಕ್ಷಮತೆಯೊಂದಿಗೆ ಮಾನಸಿಕ ನೆಮ್ಮದಿ ನೀಡುವ ದಿವ್ಯ ಔಷದಿಯಾಗಿದೆ ಎಂದರು. ಕಾರ್ಯಕ್ರಮದ ಅಧಕ್ಷತೆವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಅಂಬಿಕಾದೇವಿ ಕೊತಮೀರ್ ಮಾತನಾಡಿ ಯೋಗ ಪ್ರಾಚೀನ ಭಾರತೀಯ ಚಿಂತನೆಯಾಗಿದ್ದು, ಇದು ಆರೋಗ್ಯದ ವಿಜ್ಞಾನ ಮತ್ತು ಆಧ್ಯಾತ್ಮಿಕ ಮಾರ್ಗದ ಸಾಧನವಾಗಿದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ 40 ಯೋಗ ಸ್ಪರ್ಧಾರ್ಥಿಗಳು ಭಾಗವಹಿಸಿದರು. ಪ್ರಾಸ್ತಾವಿಕ ನುಡಿ ಕಾಲೇಜಿನ ದೈಹಿಕ ಶಿಕ್ಷಣದ ನಿರ್ದೇಶಕರಾದ ಶ್ರೀಮತಿ ಡಾ. ಉರ್ವಸಿ ಕೊಡಲಿ ನುಡಿದರು, ಸುಬ್ಬಣ್ಣ ಮುಲಗೆ ಸ್ವಾಗತಿಸಿದರು, ಡಾ.ಪ್ರಿಯಾಂಕಾ ವಂದಿಸಿದರು ಪ್ರೊ.ಮಹೇಶ್ ಕುಮಾರ ನಿರೂಪಿಸಿದರು . ಕಾಲೇಜಿನ ಬೋದಕ ಹಾಗೂ ಬೋದಕೇತರ ಸಿಬ್ಬಂದಿಗಳು, ಡಾ.ಸಂಜುಕುಮಾರ ಅಪ್ಪೆ, ಶ್ರೀ ಜಾಧವ, ಶ್ರೀರಾಮ ಜಾಧವ್, ಮಲ್ಲಣ್ಣ ಗೌಡ, ಬಾಬುಸಿಂಗ್, ಅಶೋಕ ಶೆಂಬಳ್ಳಿ, ಅಂಬದಾಸ ನೇಳಗೆ, ರವಿ ಡೋಳೆ ಮುಂತಾದವರು ಭಾಗವಹಿಸಿದರು.
ಯಳಂದೂರು.13.ಜೂನ್.25:- ಪಟ್ಟಣದ ಅಂಬೇಡ್ಕರ್ ಭವನದ ಮುಂಭಾಗ ಬುದ್ಧ ಪ್ರಿಯ ಅಶೋಕ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿವೃತ್ತಿ ಪದವಿ ಪೂರ್ವ ಶಿಕ್ಷಣ…
ಬೆಂಗಳೂರು.13.ಜೂನ್.25:- ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಈ ರೀತಿಯಾಗಿ ಫಲಿತಾಂಶ ಚೆಕ್…
ಬೆಂಗಳೂರು.13.ಜೂನ್.25:- ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ…
ಬೆಂಗಳೂರು.13.ಜೂನ್.25:- ಬೀದರ್ ಬೆಂಗಳೂರು ಮತ್ತೊಂದು ವಿಶೇಷ ಟ್ರೈನ್ ಇದೇ 15 ಜೂನ್ ರಿಂದ ಪ್ರಾರಂಭ ಆಗ್ತಿದೆ. ಈ ಟ್ರೈನ್ ಕರ್ನಾಟಕದ…
ಬೆಂಗಳೂರು.13.ಜೂನ್ .25:- ರಾಜ್ಯ ಸರ್ಕಾರಿ ನೌಕರರಿಗೆ 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ…
ಬಳ್ಳಾರಿ.13.ಜೂನ್.25:- ರಾಜ್ಯದಲ್ಲಿ ಏಕಲವ್ಯ ಮಾದರಿ ಸ್ಕೂಲ್ ಗಳಲ್ಲಿ ಬೇಕಾಗಿರುವ ಶೀಕ್ಷಕರ ಹುದ್ದೆಗಳು ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ…