ಔರಾದ.20.ಮೇ.25:- ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೇತೃತ್ವದ ಸರಕಾರದ 2 ವರ್ಷಗಳ ಸಾಧನೆ ತೀವ್ರ ನಿರಾಶಾದಾಯಕವಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಪ್ರಭು ಬಿ.ಚವ್ಹಾಣ ಅವರು ಆರೋಪಿಸಿದ್ದಾರೆ.
ಹೊಸಪೇಟೆಯಲ್ಲಿ ಸರಕಾರ ನಡೆಸುತ್ತಿರುವ ಸಾಧನಾ ಸಮಾವೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದಲ್ಲಿ ವಿದ್ಯುತ್, ಪೆಟ್ರೋಲ್, ಡಿಸೇಲ್, ಹಾಲಿನಂತಹ ದಿನಬಳಕೆ ವಸ್ತುಗಳ ಬೆಲೆಗಳನ್ನು ಏರಿಸಿ ಬಡ ಜನರನ್ನು ಸಂಕಷ್ಟಕ್ಕೆ ದೂಡಿ ಸಾಧನಾ ಸಮಾವೇಶ ಆಯೋಜಿಸುತ್ತಿರುವುದು ಸರಕಾರದ ಅಸಫಲ ತೆಯ ಸಮಾವೇಶದಂತೆ ಭಾಸವಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ಯಾರಂಟಿ ಹೆಸರಿನಲ್ಲಿ ಜನರನ್ನು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಸರಕಾರ ಅಭಿವೃದ್ಧಿಯನ್ನೇ ಮರೆತಿದೆ. ರಾಜ್ಯದಲ್ಲಿ ಅರಾಜಕತೆ ವಿಪರೀತವಾಗಿ ಹೆಚ್ಚುತ್ತಿದೆ.
ಗ್ಯಾರಂಟಿ ಹೆಸರಿನಲ್ಲಿ ಒಂದು ಕಡೆ ಕೊಟ್ಟು ಮತ್ತೊಂದು ಕಡೆಯಿಂದ ದುಪ್ಪಟ್ಟು ವಸೂಲಿ ಮಾಡಲಾಗುತ್ತಿದೆ. ಪರಿಶಿಷ್ಟರ ಹಣ ದುರ್ಬಳಕೆ, ವಾಲ್ಮೀಕಿ ಹಗರಣ ಸೇರಿದಂತೆ ನಾನಾ ಅವಾಂತರಗಳನ್ನು ಮಾಡಿದ ಸರಕಾರದ ಸಾಧನೆ 2 ವರ್ಷಗಳಲ್ಲಿ ಹೇಳಿಕೊಳ್ಳುವಂತಹದ್ದು ಏನು ಇಲ್ಲವೆಂದು ಹೇಳಿದ್ದಾರೆ.
ಸರಕಾರದ ಬಗ್ಗೆ ಬಡವರು, ರೈತರು, ಶ್ರಮಿಕರು ರೋಸಿ ಹೋಗಿದ್ದಾರೆ. ಹಿಂದುಗಳ ಹತ್ಯೆ, ಧಾರ್ಮಿಕ ನಂಬಿಕೆಗಳ ಮೇಲೆ ಪ್ರಹಾರದಂತಹ ಅನ್ಯಾಯಗಳು ನಿರಂತರವಾಗಿ ನಡೆಯುತ್ತಿವೆ.