ಬೀದರ.08.ಏಪ್ರಿಲ್.25:- ಔರಾದ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಜನಪದ ಉತ್ಸವ 2025 ಜರುಗಿತ್ತು. ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಲ್ಲೂಕು ಖಜಾನೆ ಅಧಿಕಾರಿಗಳ ಹಾಗೂ ಸಾಹಿತಿಗಳಾದ ಶ್ರೀ ಮಾಣಿಕ ರಾವ್ ನೆಲಗೆ ಮಾತನಾಡಿ ತಲೆಮಾರಿನಿಂದ ತಲೆಮಾರಿಗೆ ಹರಿದು ಬಂದ ಸಾಹಿತ್ಯ ಅದು ಜನಪದ ಅಳಿವಿನ ಅಂಚಿನಲ್ಲಿರುವ ಈ ಜನಪದ ಕಲೆ, ಸಾಹಿತ್ಯ, ಸಂಸ್ಕೃತಿಯ ಉಳಿವಿಗೆ ಪೋಷಿಸುವ ಜವಾಬ್ದಾರಿ ಇಂದಿನ ಪೀಳಿಗೆಯದಾಗಿದೆ ಎಂದರು.
ಇನೋರ್ವ ಅತಿಥಿಗಳಾದ ಶ್ರೀಮತಿ ಮಹಾನಂದ ಎಂಡೆ ಮಾತನಾಡಿ ಮಹಿಳೆ ಸಹನೆ, ತ್ಯಾಗದ ಪ್ರತಿಕ ಹೆಣ್ಣು ಅಬಲೆ ಅಲ್ಲ ಸಬಲೆ ಆಕೆ ಯಾವ ಕ್ಷೇತ್ರದಲ್ಲಿಯು ಹಿಂದೆ ಇಲ್ಲ.
ಸುನೀತಾ ವಿಲಿಯಮ್ಸ ಇಂತಹ ಸಾಧಕಿಯರು ನಮ್ಮ ಹೆಮ್ಮೆ ಮತ್ತು ಸ್ಪೂರ್ತಿ ಎಂದರು. ಕಾರ್ಯಕ್ರಮದ ಅಧ್ಯಕ್ಷೀಯ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಅಂಬಿಕಾದೇವಿ ಕೊತಮೀರ್ ಜನಪದ ನಮ್ಮ ಹೆಮ್ಮೆ, ನಮ್ಮ ಸಂಸ್ಕೃತಿ ಮುಂದಿನ ಪೀಳಿಗೆಗೆ ಮೌಲ್ಯಗಳನ್ನು ಕಟ್ಟಿಕೊಡುವ ಕೆಲಸ ಜನಪದರು ಮಾಡುತ್ತಾ ಬಂದಿದ್ದಾರೆ.
ಜನಪದರ ಬದುಕಿನ ಪ್ರತಿ ಹಂತದಲ್ಲಿ ನೈತಿಕತೆಯ ಅಸ್ತಿತ್ವ ನೋಡಬಹುದಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ. ವಿನಾಯಕ ಕೊತಮೀರ್, ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ. ಸಂಜೀವ ಕುಮಾರ ತಾಂದಳೆ,ದೈಹಿಕ ಶಿಕ್ಷಣದ ನಿರ್ದೇಶಕರಾದ ಡಾ. ಊರ್ವಶಿ ಕೊಡ್ಲಿ, ಡಾ.ದಯಾನಂದ ಬಾವುಗೆ, ಶ್ರೀ ಬಾಲಾಜಿ ಎಂಡೆ, ಶ್ರೀ ಅಡವೆಪ್ಪ ಪಟ್ನೆ ವೇದಿಕೆ ಹಂಚಿಕೊಂಡರು.ಶ್ರೀ ಸುಬ್ಬಣ್ಣ ಮುಲಗೆ ಸ್ವಾಗತಿಸಿದರು, ಡಾ.ದಯಾನಂದ ಬಾವುಗೆ ವಂದಿಸಿದರು, ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ರಾಮಣ್ಣ ನಿರುಪಿಸಿದರು. ವೇದಿಕೆ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು ಈ ಸಂದರ್ಭದಲ್ಲಿ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆಗಳಿಂದ ಕಂಗೊಳಿಸಿದರು, ಕೋಲಾಟ,ಲಂಬಾಣಿ ನೃತ್ಯ, ಜನಪದ ಹಾಡುಗಳು ಇತರ ಕಾರ್ಯಕ್ರಮಗಳು ಜರುಗಿದವು.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…