ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರವೇಶಾತಿ ಪ್ರಮನ ಹೆಚ್ಚಿಸಬೇಕು.!

ಬೆಂಗಳೂರು: 03.ಫೆ.25: ಉನ್ನತ ಶಿಕ್ಷಣ ಇಲಾಖೆ,ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ದರ ಕಡಿಮೆ ಆಗುತ್ತಿದೆ ಎಂಬ ಆರೋಪಗಳ ನಡುವೆಯೇ ಈ ಬಾರಿ ಸರಕಾರಿ ಕಾಲೇಜುಗಳಲ್ಲಿ ದಾಖಲಾತಿಯ ಪ್ರಮಾಣ/ದರ ಹೆಚ್ಚಿಸಲೇಬೇಕೆಂದು ಪಣ ತೊಟ್ಟಿರುವ ಕಾಲೇಜು ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳನ್ನು ಆಕರ್ಷಿಸಲು “ಪ್ರವೇಶಾತಿ ಅಭಿಯಾನ’ ನಡೆಸುವ ತೀರ್ಮಾನಕ್ಕೆ ಬಂದಿದೆ.

ರಾಜ್ಯದ ಒಟ್ಟು 440 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಾಲ್ಕೈದು ವರ್ಷಗಳಿಂದ 18 ಸಾವಿರದಿಂದ 20 ಸಾವಿರದ ಆಸುಪಾಸಿನಲ್ಲಿ ದಾಖಲಾತಿ ಆಗುತ್ತಿದೆ. ಈ ಪೈಕಿ ಸುಮಾರು 100 ಕಾಲೇಜುಗಳಲ್ಲಿ 100ಕ್ಕಿಂತ ಕಡಿಮೆ ದಾಖಲಾತಿ ಆಗುತ್ತಿದೆ. ದ್ವಿತೀಯ ಪಿಯುಸಿಯಲ್ಲಿ ಶೇ. 70 ಮೀರಿದ ಫ‌ಲಿತಾಂಶ ದಾಖಲಾಗಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದರೂ ಸರಕಾರಿ ಕಾಲೇಜುಗಳಲ್ಲಿನ ದಾಖಲಾತಿ ಹೆಚ್ಚಳವಾಗುತ್ತಿಲ್ಲ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಉನ್ನತ ಶಿಕ್ಷಣ ಇಲಾಖೆಯು ಮಂಗಳೂರು ವಿಭಾಗ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗದ ಎಲ್ಲ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರು ಮತ್ತು ಬೆಂಗಳೂರು, ಮೈಸೂರು, ಧಾರವಾಡ, ಕಲಬುರಗಿ ಮತ್ತು ಶಿವಮೊಗ್ಗ ಜಿಲ್ಲೆಗಳ ಜಂಟಿ ನಿರ್ದೇಶಕರ ಜತೆ ಸರಕಾರಿ ಕಾಲೇಜುಗಳಲ್ಲಿನ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಕಾರ್ಯತಂತ್ರ ರೂಪಿಸಿದ್ದಾರೆ.

ಲಿಂಗಾನುಪಾತ ಸರಿದೂಗಿಸಲು ಸೂಚನೆ
ಉನ್ನತ ಶಿಕ್ಷಣದಲ್ಲಿ ಲಿಂಗ ಅನುಪಾತವನ್ನು ಸರಿದೂಗಿಸುವುದು ಉನ್ನತ ಶಿಕ್ಷಣ ಇಲಾಖೆ ಮತ್ತು ಸರಕಾರದ ಪ್ರಮುಖ ಗುರಿಯಾಗಿದೆ.

ಈ ಹಿನ್ನೆಲೆಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂಬ ಮಾಹಿತಿಯನ್ನು ವಿದ್ಯಾರ್ಥಿನಿಯರಿಗೆ ರವಾನಿಸುವಂತೆ ಸೂಚಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಎನ್‌. ಮಂಜುಶ್ರೀ ತಿಳಿಸಿದ್ದಾರೆ.

ಡ್ರಾಪ್‌ ಔಟ್‌ ಆದರೆ ಪ್ರಾಂಶುಪಾಲರೇ ಹೊಣೆ
ಸರಕಾರಿ ಕಾಲೇಜುಗಳಲ್ಲಿ ಮೊದಲ ಸೆಮಿಸ್ಟರ್‌ನಲ್ಲಿ ವಿದ್ಯಾರ್ಥಿಗಳ ಡ್ರಾಪ್‌ ಔಟ್‌ ಪ್ರಮಾಣ ವಿಪರೀತ ಇರುವ ಬಗ್ಗೆ ಕಳವಳ ವ್ಯಕ್ತವಾಗಿದೆ. ದೊಡ್ಡ ಪ್ರಮಾಣದಲ್ಲಿ ವಿದ್ಯಾರ್ಥಿಗಳ ಡ್ರಾಪ್‌ ಔಟ್‌ ಆದರೆ ಅದಕ್ಕೆ ಪ್ರಾಂಶುಪಾಲರನ್ನೇ ಹೊಣೆ ಮಾಡಲು ಉನ್ನತ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಪಿಯು ಕಾಲೇಜುಗಳಿಗೆ ಭೇಟಿ ನೀಲು ಸೂಚನೆ
ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರು ಅಥವಾ ಖಾಯಂ ಉಪನ್ಯಾಸಕರ ತಂಡ ತಮ್ಮ ಸಮೀಪದ ಸರಕಾರಿ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ ಸವಲತ್ತು, ಉಪನ್ಯಾಸಕ ಸಿಬಂದಿಯ ನೈಪುಣ್ಯದ ಬಗ್ಗೆ ಮಾಹಿತಿ ನೀಡಬೇಕು.

ಹಾಗೆಯೇ ಸರಕಾರಿ ಕಾಲೇಜುಗಳಲ್ಲಿನ ಸೌಲಭ್ಯಗಳ ಬಗ್ಗೆ ತಿಳಿ ಹೇಳುವ ಜತೆಗೆ ಪಿಯು ಕಾಲೇಜುಗಳ ನೋಟಿಸ್‌ ಬೋರ್ಡ್‌ನಲ್ಲಿ ಮಾಹಿತಿ ಲಗತ್ತಿಸುವಂತೆ ಸೂಚಿಸಲಾಗಿದೆ.

ದಾಖಲಾತಿ ವೇಳೆ ಖಾಯಂ ಉಪನ್ಯಾಸಕ ಇರಬೇಕು
ಪ್ರಥಮ ದರ್ಜೆ ಕಾಲೇಜುಗಳಲ್ಲಿನ ದಾಖಲಾತಿ ಪ್ರಕ್ರಿಯೆ ನಡೆಯವ ಸಂದರ್ಭದಲ್ಲಿ ಖಾಯಂ ಉಪನ್ಯಾಸಕರೊಬ್ಬರು ಉಪಸ್ಥಿತರಿರುವುದನ್ನು ಕಡ್ಡಾಯಗೊಳಿಸಲಾಗಿದೆ.

ಈ ಖಾಯಂ ಉಪನ್ಯಾಸಕರು ಕೋರ್ಸ್‌ಗಳ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಒಂದು ವೇಳೆ ವಿದ್ಯಾರ್ಥಿಗಳ ದಾರಿ ತಪ್ಪಿಸುವ ಮಾಹಿತಿ ನೀಡಿದರೆ ಕಠಿನ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಭೆಯಲ್ಲಿ ನೀಡಲಾಗಿದೆ.

ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚಿನ ಅರ್ಹತೆ ಹೊಂದಿರುವ ಉಪನ್ಯಾಸಕರಿದ್ದಾರೆ. ಜತೆಗೆ ಉತ್ತಮ ಸೌಲಭ್ಯಗಳೂ ಇವೆ. ಆದರೂ ವಿದ್ಯಾರ್ಥಿಗಳ ಪ್ರವೇಶ ಪ್ರಮಾಣ ಹೆಚ್ಚುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪ್ರವೇಶಾತಿ ಅಭಿಯಾನ ನಡೆಸುವಂತೆ ಸೂಚಿಸಿದ್ದೇವೆ.

– ಎನ್‌. ಮಂಜುಶ್ರೀ, ಆಯುಕ್ತೆ, ಕಾಲೇಜು ಶಿಕ್ಷಣ ಇಲಾಖೆ

65 ಸರಕಾರಿ ಕಾಲೇಜುಗಳಿಗೆ ನ್ಯಾಕ್‌ ಮೌಲ್ಯಮಾಪನ ಪಡೆಯಲು ಸಿದ್ಧತೆ
ರಾಜ್ಯದ ಒಟ್ಟು 68 ಪ್ರಥಮ ದರ್ಜೆ ಕಾಲೇಜುಗಳಿಗೆ “ನ್ಯಾಕ್‌’ ಮೌಲ್ಯಮಾಪನ ಅಥವಾ ಮರು ಮೌಲ್ಯಮಾಪನಕ್ಕೆ ಒಳಗಾಗುವಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಆಯುಕ್ತೆ ಎನ್‌. ಮಂಜುಶ್ರೀ ಸೂಚನೆ ನೀಡಿದ್ದಾರೆ.

ಪ್ರತೀ ಉನ್ನತ ಶಿಕ್ಷಣ ಸಂಸ್ಥೆ ನ್ಯಾಕ್‌ ಮೌಲ್ಯಮಾಪನಕ್ಕೆ ಒಳಗಾಗುವುದು ಕಡ್ಡಾಯವಾಗಿದ್ದು, ಮುಂದಿನ ನ್ಯಾಕ್‌ ಆವೃತ್ತಿಗೆ (2025-26) ತೆರಳಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ನ್ಯಾಕ್‌ ಮೌಲ್ಯಮಾಪನಕ್ಕೆ ಒಳಗಾಗದ, ಮರು ಮೌಲ್ಯಮಾಪನಕ್ಕೆ ಒಳಗಾಗಬೇಕಾದ ಸಂಸ್ಥೆಗಳು ತಮ್ಮ ಮಾಹಿತಿಯನ್ನು ದಾಖಲೆಗಳ ಸಹಿತ ಕೇಂದ್ರ ಕಚೇರಿಯ ರಾಜ್ಯ ಗುಣಮಟ್ಟ ಭರವಸೆ ಕೋಶ ವಿಭಾಗಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

ರಾಜ್ಯದಲ್ಲಿ 46 ಪ್ರಥಮ ದರ್ಜೆ ಕಾಲೇಜುಗಳು ಒಮ್ಮೆಯೂ ನ್ಯಾಕ್‌ ಮಾನ್ಯತೆಗೆ ಒಳಗಾಗಿಲ್ಲ. ಇನ್ನು 21 ಕಾಲೇಜುಗಳ ನ್ಯಾಕ್‌ ಮಾನ್ಯತೆ ಮುಕ್ತಾಯಗೊಂಡಿದ್ದು, ಮರು ಮೌಲ್ಯಮಾಪನಕ್ಕೆ ಒಳಗಾಗಬೇಕಿದೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

5 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

7 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

9 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

9 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

9 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

9 hours ago