ಸರ್ಕಾರಿ ಅಧಿಕಾರಿ/ನೌಕರರು ಪ್ರಾನ್ ಖಾತೆಯನ್ನು ಪಡೆಯುವ ಮುಂಚಿತವಾಗಿ ಮೃತಪಟ್ಟಲ್ಲಿ ಕುಟುಂಬ ಪಿಂಚಣಿ ಮಂಜೂರು ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ.

ಬೆಂಗಳೂರು :ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಟ್ಟ ಸರ್ಕಾರಿ ಅಧಿಕಾರಿ/ನೌಕರರು ಪ್ರಾನ್ ಖಾತೆಯನ್ನು ಪಡೆಯುವ ಮುಂಚಿತವಾಗಿ ಮೃತಪಟ್ಟಲ್ಲಿ ಕುಟುಂಬ ಪಿಂಚಣಿ ಮಂಜೂರು ಮಾಡುವ ಕುರಿತು ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ.

ಮೇಲೆ ಓದಲಾದ (1) ರ ಆದೇಶದಲ್ಲಿ ದಿನಾಂಕ: 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (ಎನ್.ಪಿ.ಎಸ್.) ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.

ಮೇಲೆ ಓದಲಾದ (2) ರ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರು ಸೇವೆಯಲ್ಲಿರುವಾಗಲೇ ಮೃತಪಟ್ನಲ್ಲಿ ಅವರ ಕುಟುಂಬಕ್ಕೆ ಇಡಿಗಂಟಿನ ಪರಿಹಾರ ಸೌಲಭ್ಯವನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಮೇಲೆ ಓದಲಾದ (3) ರ ಆದೇಶದಲ್ಲಿ ದಿನಾಂಕ: 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರಿದ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಮೃತರ ನಾಮನಿರ್ದೇಶಿತರಿಗೆ ಕುಟುಂಬ ಪಿಂಚಣಿಯನ್ನು ಮೃತರ ನಾಮನಿರ್ದೇಶಿತರು ಆಯ್ಕೆ ಮಾಡಿಕೊಂಡಲ್ಲಿ ಮೃತ ನೌಕರರ ಪ್ರಾನ್ ಖಾತೆಯಲ್ಲಿರುವ ಸಂಪೂರ್ಣ ಮೊತ್ತವನ್ನು ಸರ್ಕಾರವು ಹಿಂಪಡೆಯುವ ಷರತ್ತಿಗೊಳಪಟ್ಟು ಕರ್ನಾಟಕ ಸರ್ಕಾರಿ ನೌಕರರ (ಕುಟುಂಬ ಪಿಂಚಣಿ) ನಿಯಮಗಳು, 2002ರನ್ವಯ ಕುಟುಂಬ ಪಿಂಚಣಿ ಸೌಲಭ್ಯವನ್ನು ದಿನಾಂಕ:01.04.2018ರಿಂದ ಜಾರಿಗೆ ಬರುವಂತೆ ವಿಸ್ತರಿಸಲಾಗಿದೆ ಮತ್ತು ಓದಲಾದ (4) ರ ಆದೇಶದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ಮೇಲೆ ಓದಲಾದ (5) ರ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರು ದಿನಾಂಕ: 01.04.2018ರಂದು ಮತ್ತು ತದನಂತರ ಸೇವೆಯಲ್ಲಿರುವಾಗಲೇ ಮೃತರಾದ ಸಂದರ್ಭದಲ್ಲಿ ನೌಕರರ ನಾಮನಿರ್ದೇಶಿತರು ಕುಟುಂಬ ಪಿಂಚಣಿಯನ್ನು ಆಯ್ಕೆ ಮಾಡಿಕೊಂಡಲ್ಲಿ ಪ್ರಾನ್ ಖಾತೆಯಲ್ಲಿ ಶೇಖರಣೆಗೊಂಡಿರುವ ಮೊತ್ತದಲ್ಲಿ ಮೃತ ನೌಕರರ ವಂತಿಗೆ ಮತ್ತು ಅದರ ಮೇಲಿನ ಆದಾಯವನ್ನು ಮೃತರ ನಾಮನಿರ್ದೇಶಿತರಿಗೆ ಇತ್ಯರ್ಥಪಡಿಸಲು ಹಾಗೂ ಸರ್ಕಾರದ ವಂತಿಗೆ ಮತ್ತು ಅದರ ಮೇಲಿನ ಆದಾಯವನ್ನು ಸರ್ಕಾರದ ಲೆಕ್ಕ ಶೀರ್ಷಿಕೆಗೆ ಜಮೆ ಮಾಡಲು ಆದೇಶಿಸಿದೆ.

ಮೇಲೆ ಓದಲಾದ (6) ರ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ. ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯಗಳನ್ನು ಸರ್ಕಾರಿ ಆದೇಶ ಸಂಖ್ಯೆ: ಆಇ 34 ಪಿಇಎನ್ 2018, ದಿನಾಂಕ: 23.06.2018 ರಲ್ಲಿ ದಿನಾಂಕ: 01.04.2018 ರಿಂದ ಜಾರಿಗೆ ಬರುವಂತೆ ಆದೇಶಿಸಿರುವುದನ್ನು ಮಾರ್ಪಡಿಸಿ, ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯಗಳನ್ನು ದಿನಾಂಕ: 01.04.2006ರಿಂದಲೇ ಜಾರಿಗೆ ಬರುವಂತೆ ವಿಸ್ತರಿಸಿ ಆದೇಶಿಸಲಾಗಿದೆ.

ಪ್ರಸ್ತುತ ಮಹಾಲೇಖಪಾಲರು, ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಟ್ಟ ಸರ್ಕಾರಿ ಅಧಿಕಾರಿ/ನೌಕರರು నా ಖಾತೆಯನ್ನು ಪಡೆಯುವ ಮುಂಚಿತವಾಗಿ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಪ್ರಕರಣಗಳಲ್ಲಿ ಕುಟುಂಬ ಪಿಂಚಣಿ ಮಂಜೂರು ಮಾಡುವ ಬಗ್ಗೆ ಸರ್ಕಾರಿ ಆದೇಶ ನೀಡುವಂತೆ ತಿಳಿಸಿ ಪ್ರಸ್ತಾವನೆಗಳನ್ನು ಹಿಂದಿರುಗಿಸಲಾಗುತ್ತಿರುವುದನ್ನು ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಲಾಗಿದೆ.

ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/ 132 /2025, ಬೆಂಗಳೂರು, ದಿನಾಂಕ: 23.6.2025.

ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ಅಧಿಕಾರಿ/ನೌಕರರು ಪ್ರಾನ್ ಖಾತೆ ಪಡೆಯುವ/ಹಂಚಿಕೆಯಾಗುವ ಮೊದಲೇ ಮೃತರಾದ ಪ್ರಕರಣಗಳಲ್ಲಿ ಕುಟುಂಬ ಪಿಂಚಣಿ ಮಂಜೂರು ಮಾಡುವ ಸಂಬಂಧ ಸರ್ಕಾರಿ ಆದೇಶ ಸಂಖ್ಯೆ: ಆಇ 34 ಪಿಎಇನ್ 2018, ದಿನಾಂಕ: 23.6.2018 ಮತ್ತು ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/149/2022, ದಿನಾಂಕ: 19.10.2022 ರನ್ವಯ ಪರಿಶೀಲಿಸಿ, ಮೃತ ಅಧಿಕಾರಿ/ನೌಕರರು ಕಾರ್ಯನಿರ್ವಹಿಸುತ್ತಿರುವ ಇಲಾಖೆಗೆ ಸಂಬಂಧಿಸಿದ ಡಿಡಿಓ ರವರು ಮೃತ ಅಧಿಕಾರಿ/ನೌಕರರು ಪ್ರಾನ್ ಪಡೆಯದಿರುವ ಕುರಿತು ಇಲಾಖಾ ಮುಖ್ಯಸ್ಥರ ದೃಢೀಕರಣವನ್ನು ಪಡೆದು, ಕುಟುಂಬ ಪಿಂಚಣಿ ಮಂಜೂರು ಮಾಡುವ ಪ್ರಸ್ತಾವನೆಯನ್ನು ಮಹಾಲೇಖಪಾಲರಿಗೆ ಸಲ್ಲಿಸಲು ಕ್ರಮವಹಿಸುವಂತೆ ಆದೇಶಿಸಿದೆ.

prajaprabhat

Recent Posts

2025-26 ನೇ ಸಾಲಿನ ‘ಪ್ಯಾರಾ ಮೆಡಿಕಲ್’ ಕೋರ್ಸಿಗೆ ಅರ್ಜಿ ಆಹ್ವಾನ.

ಬೆಂಗಳೂರು.26.ಜೂನ್.25:- ರಾಜ್ಯದಲ್ಲಿನ ವಿವಿಧ ಸರ್ಕಾರಿ ಹಾಗೂ ಖಾಸಗಿ ಪ್ಯಾರಾ ಮೆಡಿಕಲ್ ಸಂಸ್ಥೆಗಳಲ್ಲಿನ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು…

4 hours ago

ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು.26.ಜೂನ್.25:-ಸರಕಾರ ಕಲಾವಿದರ ಮಾಸಾಶನ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದೆ. ಈ ಹಿಂದೆ ಕಲಾವಿದರ ಮಾಸಾಶನ 2000 ರೂಪಾಯಿಗಳಿದ್ದು, ಅದನ್ನು ಹೆಚ್ಚಿಸಿ…

5 hours ago

ರಾಜ್ಯದಲ್ಲಿ ಭಾರೀ ಮಳೆ : 19 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ.!

ಬೆಂಗಳೂರು.26.ಜೂನ್.25:- ರಾಜ್ಯದ ಹಲವು ತಾಲೂಕಾ ಹಾಗೂ ಜಿಲ್ಲೆಗಳಲ್ಲಿ ಭಾರಿ ಮಳೆ ಬರುವ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ ಇದಕ್ಕೆ ರಾಜ್ಯಾದ …

6 hours ago

ಕೃಷಿ ಪರಿಕರಗಳ ಖರೀದಿಸುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳು: ರೈತರಿಗೆ ಸಲಹೆ

ಕೊಪ್ಪಳ.25.ಜೂನ್.25: ಕೃಷಿ ಪರಿಕರಗಳನ್ನು ಖರೀದಿಸುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ರೈತರಿಗೆ ಕೃಷಿ ಇಲಾಖೆಯಿಂದ ಸಲಹೆಗಳನ್ನು ನೀಡಲಾಗಿದೆ. ಈ ವರ್ಷದ…

14 hours ago

ಕೃಷಿಯಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆಗೆ ಒತ್ತು ನೀಡಿ- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ

ಕೊಪ್ಪಳ.25.ಜೂನ್.25:- ರೈತರು ಕೃಷಿಯಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆಗೆ ಒತ್ತು ನೀಡುವ ಮೂಲಕ ಕಡಿಮೆ ರಾಸಾಯನಿಕ ಗೊಬ್ಬರಗಳ ಬಳಕೆ ಮಾಡಬೇಕೆಂದು ಜಿಲ್ಲಾಧಿಕಾರಿ…

14 hours ago

ಗ್ರಾಮ ಆಡಳಿತಾಧಿಕಾರಿ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 03 ಹುದ್ದೆಗಳಿಗೆ 1:1 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ವೆಬ್‌ಸೈಟ್…

14 hours ago