ಶಿಡ್ಲಘಟ್ಟ: ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಕಟ್ಟಡ ಶಂಕುಸ್ಥಾಪನೆ ಸಮಾರಂಭವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ನೆರವೇರಿಸಿದರು. ಈ ಸಂದಂರ್ಭದಲ್ಲಿ ಎಂದು ತಿಳಿಸಿದರು.
ಸರ್ಕಾರಿ ಕಾಲೇಜುಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ, 2023–24ನೇ ಸಾಲಿನಲ್ಲಿ 21,000 ಹೊಸ ಸೀಟುಗಳನ್ನು ಮಂಜೂರು ಮಾಡಲಾಗಿದೆ.
ಬಹುತೇಕ ಕಾಲೇಜುಗಳಲ್ಲಿ ಬಿಬಿಎ, ಬಿಸಿಎ ಸೇರಿದಂತೆ ಬೇಡಿಕೆಯ ಕೋರ್ಸ್ಗಳು ಆರಂಭವಾಗಿವೆ. ಖಾಸಗಿ ಕಾಲೇಜುಗಳಲ್ಲಿ ಡೊನೇಷನ್ ಹೆಚ್ಚಿರುವುದರಿಂದ, ಕಡಿಮೆ ಶುಲ್ಕದಲ್ಲಿ ಶಿಕ್ಷಣ ನೀಡಲು ಸರ್ಕಾರಿ ಕಾಲೇಜುಗಳ ಸಾಮರ್ಥ್ಯ ಹೆಚ್ಚಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಬಗ್ಗೆ ಸರ್ಕಾರ ಬದ್ಧವಿದೆ ಎಂದು ತಿಳಿಸಿದರು.ಅತಿಥಿ ಉಪನ್ಯಾಸಕರ ನೇಮಕಾತಿಯಿಂದ ಕೋರ್ಸ್ಗಳ ಆರಂಭ ಸಾಧ್ಯವಾಗಿದ್ದು, 1242 ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಪ್ರಕ್ರಿಯೆ ಆರಂಭವಾಗಿದೆ. ಈಗಾಗಲೇ 180 ಹುದ್ದೆಗಳಿಗೆ ನೇಮಕಾತಿ ಮುಗಿದಿದ್ದು, ಮುಂದಿನ ದಿನಗಳಲ್ಲಿ 2000 ಹುದ್ದೆಗಳಿಗೆ ಅನುಮತಿ ಸಿಕ್ಕಿದೆ.
ಬಿಎಸ್ಸಿ ಕೋರ್ಸ್ಗೆ ಕಡಿಮೆ ದಾಖಲಾತಿಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಆಸಕ್ತಿ ಹೊಂದಿರುವ ಕೋರ್ಸ್ಗಳಿಗೆ ಆದ್ಯತೆ ನೀಡಲಾಗುತ್ತಿದೆ. ಶಿಡ್ಲಘಟ್ಟ ಹಾಗೂ ಚಿಂತಾಮಣಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಮೂಲಭೂತ ಸೌಕರ್ಯಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೊಸ ಕಟ್ಟಡ ಹಾಗೂ ದುರಸ್ತಿ ಕಾಮಗಾರಿಗೆ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಹೊಸ ಕಟ್ಟಡಗಳಲ್ಲಿ ಲ್ಯಾಬ್, ಡೆಸ್ಕ್, ಬೆಂಚ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒಳಗೊಂಡಂತೆ ಯೋಜನೆ ರೂಪಿಸಲಾಗುತ್ತಿದೆ. ಈಗಿನಿಂದ ಈ ಎಲ್ಲದಕ್ಕೂ ಸ್ಪಷ್ಟ ಮಾರ್ಗಸೂಚಿ ಜಾರಿಗೆ ಬರುತ್ತದೆ,” ಎಂದು ಸಚಿವರು ಹೇಳಿದರು.
ಶಾಸಕ ಬಿ.ಎನ್. ರವಿಕುಮಾರ್ ಈ ಸಂದರ್ಭದಲ್ಲಿ ಮಾತನಾಡಿ, “ಶಿಡ್ಲಘಟ್ಟ ಕ್ಷೇತ್ರದ ಶೈಕ್ಷಣಿಕ ಹಾಗೂ ಆರ್ಥಿಕ ಹಿನ್ನಲೆಯಲ್ಲಿ ಅಭಿವೃದ್ಧಿಗೆ ಸಚಿವರು ಸತತ ಶ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 9 ಕೋಟಿ ರೂ. ಮೌಲ್ಯದ ಕಾಮಗಾರಿ ಶಂಕುಸ್ಥಾಪನೆಯಾಗಿದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.