30ಡಿ24. ಬೆಂಗಳೂರು.ಕರ್ನಾಟಕ ರಾಜ್ಯ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಈ ಎಲ್ಲಾ ಕಾಲೇಜುಗಳಲ್ಲಿ ಖಾಯಂ ಉಪನ್ಯಸ್ಕರು ಇಲ್ಲಾ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಾಲಿಟೆಕ್ನಿಕ್ ಕಾಲೇಜು ಮತ್ತು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಲಲಿ ಖಾಯಂ ಉಪನ್ಯಾಸ್ಕರೆ ಇಲ್ಲ ಎಲ್ಲಾ ವಿಭಾಗದಲ್ಲಿ ಉಪನ್ಯಾಸಕ ಕೊರತೆ.
ಕರ್ನಾಟಕ ರಾಜ್ಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಅರ್ಧದಷ್ಟು ಉಪನ್ಯಾಸಕರ ಹುದ್ದೆಗಳು ಖಾಲಿಯಿದೆ. ಜತೆಗೆ ಬೋಧಕೇತರ ಸಿಬ್ಬಂದಿ ಹುದ್ದೆಗಳೂ ಖಾಲಿ ಇವೆ ಎಂದು ವರದಿಯಾಗಿದೆ. ಉಪನ್ಯಾಸಕರ ಕೊರತೆ ಬೋಧನಾ ಗುಣಮಟ್ಟದ ಮೇಲೆ ಪರಿಣಾಮ ಬೀರುವುದರ ಜತೆಗೆ, ಕಾಲೇಜುಗಳು ಕೇಂದ್ರದ ಅಮೂಲ್ಯವಾದ ಅನುದಾನದಿಂದ ವಂಚಿತವಾಗುವಂತೆ ಮಾಡುತ್ತದೆ ಎನ್ನಲಾಗಿದೆ.
ಕರ್ನಾಟಕ ರಾಜ್ಯದಲ್ಲಿ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು ಮಂಜೂರಾದ ಉಪನ್ಯಾಸಕರ ಹುದ್ದೆಗಳು 646 ಆಗಿದ್ದು, ಅದರಲ್ಲಿ 307 ಖಾಲಿ ಇವೆ ಎಂಬುದಾಗಿ ತಾಂತ್ರಿಕ ಶಿಕ್ಷಣ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದ ವಾರ್ಷಿಕ ವರದಿಯಲ್ಲಿ ತಿಳಿಸಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಈ ಹುದ್ದೆಗಳಿಗೆ 2010ರಲ್ಲಿ ಕೊನೆಯ ಬಾರಿ ನೇಮಕಾತಿ ನಡೆದಿತ್ತು.
ಉಪನ್ಯಾಸಕರ ಕೊರತೆ ಇರುವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಿಸಲು ರಾಜ್ಯ ಉನ್ನತ ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಆದರೆ, ಇದರಿಂದ ಕಾಲೇಜುಗಳಿಗೆ ಎರಡು ರೀತಿಯಲ್ಲಿ ಸಮಸ್ಯೆಯಾಗುತ್ತಿದೆ. ನಿಯಮಿತ ಉಪನ್ಯಾಸಕರು ಇಲ್ಲದಿರುವುದು ಕಾಲೇಜುಗಳು ಕೇಂದ್ರದ ಏಜೆನ್ಸಿಗಳಿಂದ ಅನುದಾನ ಪಡೆಯುವುದಕ್ಕೆ ಅಡ್ಡಿ ಉಂಟು ಮಾಡುತ್ತಿದೆ. ಇನ್ನೊಂದು ಸಮಸ್ಯೆ ಎಂದರೆ, ನ್ಯಾಷನಲ್ ಬೋರ್ಡ್ ಆಫ್ ಅಕ್ರೆಡಿಟೇಶನ್ (NBA) ಪ್ರಮಾಣಪತ್ರವನ್ನು ಪಡೆಯುವುದು ಕಷ್ಟಕರವಾಗುತ್ತಿದೆ ಎಂದು ವರದಿ ಉಲ್ಲೇಖಿಸಿದೆ.
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಮೂರು ಸರ್ಕಾರಿ ಕಾಲೇಜುಗಳ ಪ್ರವೇಶಾತಿಯಲ್ಲಿ ಶೇ 25 ರಷ್ಟು ಕಡಿಮೆ ಮಾಡಲು ಇತ್ತೀಚೆಗೆ ಸೂಚಿಸಿತ್ತು. ಇದಕ್ಕೆ ಉಪನ್ಯಾಸಕರ ಕೊರತೆಯೇ ಕಾರಣ ಎನ್ನಲಾಗಿದೆ. ಈ ಕಾಲೇಜುಗಳು ಕೇಂದ್ರ ಯೋಜನೆಗಳಿಂದ ಯಾವುದೇ ಅನುದಾನ ಪಡೆಯುವುದನ್ನೂ ನಿರ್ಬಂಧಿಸಲಾಗಿದೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
View Comments
Need for job
Kannada lecture
Need for job
Assistent profesor kannada lecture
Need for job