ಸರ್ಕಾರಿ ಪ್ರಥಮ ದರ್ಜೆ ಕಾಲೇಜು’ಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಬೋಧನಾ ಕಾರ್ಯಕ್ಕೆ ಅಗತ್ಯವಿರುವ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಿ ಭರ್ತಿ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಯಿಂದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅಧಿಕೃತ ಆದೇಶ ಹೊರಡಿಸಿದೆ.

ಜನವರಿ- ಫೆಬ್ರವರಿಯಲ್ಲಿ 2, 4 ಮತ್ತು 6ನೇ ಸೆಮಿಸ್ಟರ್ ತರಗತಿಗಳು ಆರಂಭವಾಗಲಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಕಾಯಂ ಪ್ರಾಧ್ಯಾಪಕರಿಗೆ ಹಂಚಿಕೆಯಾಗಿ ಉಳಿಕೆಯಾಗುವ ಕಾರ್ಯಭಾರಕ್ಕೆ ಅನುಕೂಲವಾಗಿ ನೇಮಕ ಮಾಡಿಕೊಳ್ಳಬೇಕು.

ಕೌನ್ಸೆಲಿಂಗ್ ನಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜನವರಿ 3ರಿಂದ 8ರವರೆಗೆ ಅರ್ಜಿ ಸಲ್ಲಿಸಬಹುದು. ಜನವರಿ 9ರಂದು ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು. ನಂತರ ತಿದ್ದುಪಡಿಗೆ ಜನವರಿ 10 ಮತ್ತು 11ರ ವರೆಗೆ ಅವಕಾಶವಿರುತ್ತದೆ. ಜನವರಿ 13ರಂದು ಪಟ್ಟಿಯ ಅನ್ವಯ ಕಾಲೇಜು ಆಯ್ಕೆಯ ಕೌನ್ಸಿಲಿಂಗ್ ನಡೆಸಲಿದ್ದು, ಜನವರಿ 30ರಂದು ಕೌನ್ಸೆಲಿಂಗ್ ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

ಮಾನ್ಯ ನ್ಯಾಯಾಲಯವು ರಿಟ್ ಅಪೀಲು ಸಂಖ್ಯೆ: 1578/2024ಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ನೀಡಲಿರುವ ತೀರ್ಪಿಗೆ ಬದ್ಧರಾಗಿ ಪ್ರಸ್ತುತ ರಿಟ್ ಅರ್ಜಿ ಸಂಖ್ಯೆ:23600/2023 ಕ್ಕೆ ಮಾನ್ಯ ನ್ಯಾಯಾಲಯವು ದಿನಾಂಕ: 05.09.2024 ರಂದು ನೀಡಿರುವ ತೀರ್ಪಿನನ್ವಯ ಸೇವಾ ಅನುಭವ ಹಾಗೂ ಯುಜಿಸಿ ವಿದ್ಯಾರ್ಹತೆ ಆಧಾರದ ಮೇಲೆ ಅತಿಥಿ ಉಪನ್ಯಾಸಕರನ್ನು 2024-25ನೇ ಸಾಲಿಗೆ ಆನ್ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ.

Online Application Link:

https://emis.karnataka.gov.in/EditApplication.aspx

https://dce.karnataka.gov.in/info-3/Online+Application+for+the+selection+of+Guest+Faculty+2024-25/kn

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

3 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

11 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

11 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

11 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

11 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

12 hours ago