ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ವತಿಯಿಂದ  ಕಾರ್ಯಾಗಾರ.!

ಮುಳಬಾಗಿಲು.10.ಫೆ.25:- ಮುಳಬಾಗಿಲು ತಾಲ್ಲೂಕಿನ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ವತಿಯಿಂದ ಸೋಮವಾರ ಪರೀಕ್ಷಾ ಕಾರ್ಯಾಗಾರ ಹಾಗೂ ಪ್ರವೇಶಾತಿ ಅಭಿಯಾನ ನಡೆಯಿತು.

ದ್ವಿತೀಯ ಪಿಯು ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಶೈಕ್ಷಣಿಕವಾಗಿ ಓದುವ ಹಾಗೂ ತಯಾರಾಗುವ ವಿಧಾನಗಳ ಕುರಿತು ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರು ಪ್ರೊಜೆಕ್ಟರ್ ಮೂಲಕ ಪ್ರಾಯೋಗಿಕವಾಗಿ ತೋರಿಸಿಕೊಟ್ಟರು.

ನಂತರ ಪ್ರಾಂಶುಪಾಲ ಜಿ.ಮುನಿವೆಂಕಟಪ್ಪ ಮಾತನಾಡಿ, ದ್ವಿತೀಯ ಪಿಯು ಎನ್ನುವುದು ವಿದ್ಯಾರ್ಥಿಗಳ ಜಿವನದ ಮಹತ್ವದ ಘಟ್ಟವಾಗಿದ್ದು ಸತತ ಓದು, ಓದಿದ್ದನ್ನು ಬರೆಯುವ ಹಾಗೂ ಮನನ ಮಾಡಿಕೊಳ್ಳುವ ಮೂಲಕ ಪರೀಕ್ಷೆಗಳಿಗೆ ಈಗಿನಿಂದಲೇ ಸಜ್ಜಾಗಬೇಕು.

ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಹೆಚ್ಚು ಅಂಕ ಗಳಿಸುವ ಮೂಲಕ ಮುಂದಿನ ಸ್ಪರ್ಧಾತ್ಮಕ ಶೈಕ್ಷಣಿಕ ಪ್ರಪಂಚಕ್ಕೆ ಸಿದ್ಧರಾಗಬೇಕು ಎಂದು ಹೇಳಿದರು.

ಸಂಚಾಲಕ ಟಿ.ಎಸ್.ಶ್ರೀನಿವಾಸ್ ಮಾತನಾಡಿ, ಮುಳಬಾಗಿಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿ ವರ್ಷ ವಿದ್ಯಾರ್ಥಿಗಳು ಹಲವು ರ್‍ಯಾಂಕ್‌ ಗಳಿಸುತ್ತಿದ್ದಾರೆ.

ದ್ವಿತೀಯ ಪಿಯು ಪಾಸಾದ ನಂತರ ಖಾಸಗಿ ಕಾಲೇಜುಗಳ ವ್ಯಾಮೋಹಕ್ಕೆ ಸಿಲುಕದೆ ಹಾಗೂ ದೂರದ ಕಾಲೇಜುಗಳಿಗೆ ಹೋಗಿ ಲಕ್ಷಾಂತರ ರೂಪಾಯಿ ವ್ಯಯ ಮಾಡಿಕೊಳ್ಳದೆ ಮುಳಬಾಗಿಲು ಕಾಲೇಜಿನಲ್ಲಿ ದಾಖಲಾತಿ ಪಡೆಯಬೇಕು ಎಂದು ತಿಳಿಸಿದರು.

ತಾಲ್ಲೂಕಿನ ನಂಗಲಿ, ಮಲ್ಲನಾಯಕನಹಳ್ಳಿ, ಮುಳಬಾಗಿಲು ನಗರದ ಸರ್ಕಾರಿ ಬಾಲಕರ ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜು, ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮತ್ತಿತರ ಕಾಲೇಜುಗಳ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮತ್ತು ಓದುವ ವಿಧಾನ ಹಾಗೂ ಪದವಿ ಮಾಡಿದರೆ ಮುಂದೆ ಸಿಗಬಹುದಾದ ಅವಕಾಶ ಹಾಗೂ ಹುದ್ಧೆಗಳ ಕುರಿತು ಅಧ್ಯಾಪಕರಿಂದ ಪ್ರಶ್ನೋತ್ತರ ನಡೆಯಿತು.

ಪ್ರಾಂಶುಪಾಲ ಡಾ.ಜಿ.ಮುನಿವೆಂಕಟಪ್ಪ, ಸಂಚಾಲಕ ಡಾ.ಟಿ.ಎಸ್.ಶ್ರೀನಿವಾಸ್, ಡಾ.ಎಂ.ಕೃಷ್ಣಪ್ಪ, ಡಾ. ಎಂ.ಎನ್.ಮೂರ್ತಿ, ಡಾ.ಶಿವರಾಮೇ ಗೌಡ, ಆದಿನಾರಾಯಣ, ಸುಮ, ಉಮೇಶ್, ಲಾರೆನ್ಸ್ ಪ್ರಸನ್ನ, ಭಾಗ್ಯಲಕ್ಷ್ಮಿ, ಶಶಿಕಲಾ, ವಸುಂಧರ, ಶ್ರೀಧರ್ ಇದ್ದರು.ತಾಲ್ಲೂಕು ಪದವಿ ಪೂರ್ವ ಕಾಲೇಜುಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು

prajaprabhat

Recent Posts

ಜಾತಿಗಣತಿ ವರದಿ ವೈಜ್ಞಾನಿಕ ದತ್ತಾಂಶವನ್ನು ಹೊಂದಿದೆ: ಸಚಿವ ಪರಮೇಶ್ವರ.

ಬೆಂಗಳೂರು,19.ಏಪ್ರಿಲ್.25:- ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ…

7 minutes ago

ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ

ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ವರದಿಯಾಗಿದೆ. ರಾಷ್ಟ್ರೀಯ…

16 minutes ago

ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ ಖರ್ಗೆ ಅವರೇ ಬೀಳಿಸುತ್ತಾರೆ: ಶ್ರೀರಾಮುಲು!

ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…

3 hours ago

ಚುನಾವಣಾ ಪ್ರಚಾರದಲ್ಲಿ AI ಬಳಕೆಯ ಬಗ್ಗೆ ಚುನಾವಣಾ ಆಯೋಗ ಎಚ್ಚರ : ಶೀಘ್ರವೇ ಮಾರ್ಗಸೂಚಿ ಪ್ರಕಟ.!

ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ  ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…

3 hours ago

ಕೆನಡಾದಲ್ಲಿ ಗುಂಡಿನ ಚಕಮಕಿ : 21 ವರ್ಷದ ಭಾರತೀಯ ವಿದ್ಯಾರ್ಥಿನಿ ಸಾವು.!

ಕೆನಡಾದಲ್ಲಿ.19.ಏಪ್ರಿಲ್.25:- ಭಾರತೀಯ ವಿದ್ಯಾರ್ಥಿ ಕೆನಡಾದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ…

3 hours ago

ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

ಬೆಂಗಳೂರು.19.ಏಪ್ರಿಲ್.25:- ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ…

4 hours ago