ಬೆಂಗಳೂರು.03.ಏಪ್ರಿಲ್.25:- ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 700 ಸಹಾಯಕರು ಮತ್ತು 300 ಪ್ರಯೋಗಾಲಯ ಸಹಾಯಕ ಸಿಬ್ಬಂದಿ ಹೊರಗುತ್ತಿಗೆ ಆಧಾರದ ಮೇಲೆ ಒದಗಿಸಲು ಇ-ಟೆಂಡರ್ ನೀಡಲಾಗಿದೆ.
ಕಚೇರಿ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳನ್ನು ಕಾಯಂ ಆಗಿ ಭರ್ತಿ ಮಾಡುವವರೆಗೆ ಅಥವಾ ಮುಂದಿನ ಆದೇಶದವರೆಗೆ ಪ್ರಾಂಶುಪಾಲರುಗಳು ತಮ್ಮ ಹಂತದಲ್ಲಿ ಯಾವುದೇ ರೀತಿಯ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಗ್ರೂಪ್-ಡಿ ಸಿಬ್ಬಂದಿ ಸೇವೆಯನ್ನು ನೇರ ಅಥವಾ ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಪಡೆಯುವುದನ್ನು ನಿರ್ಬಂಧಿಸಲಾಗಿದೆ. ಒಂದು ವೇಳೆ ಈ ಆದೇಶ ಮೀರಿ ಕಾಲೇಜು ಹಂತದಲ್ಲಿ ನೇಮಿಸಿಕೊಂಡಲ್ಲಿ ತಗಲುವ ಆರ್ಥಿಕ ವೆಚ್ಚವನ್ನು ನೀಡುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಹೊರಗುತ್ತಿಗೆ ಸಿಬ್ಬಂದಿಯ ಇಪಿಎ ಮತ್ತು ಇಎಸ್ಐ ಖಾತೆಗಳಿಗೆ ನಿಯಮಾನುಸಾರ ಪ್ರತಿ ತಿಂಗಳು ವಂತಿಗೆಗಳನ್ನು ಜಮೆ ಮಾಡದೆ ಇದ್ದಲ್ಲಿ ಸಂಬಂಧಪಟ್ಟ ಏಜೆನ್ಸಿ ಮೂಲಕವೇ ಜಮೆ ಮಾಡಲು ಸೂಚಿಸಲಾಗಿದೆ.
ಹೊರಗುತ್ತಿಗೆ ನೌಕರರಿಗೆ ಸಾರ್ವತ್ರಿಕ ರಜೆಗಳನ್ನು ಹೊರತುಪಡಿಸಿ ಒಂದು ದಿನ ಮಾತ್ರ ಸಾಂದರ್ಭಿಕ ರಜೆಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಒಂದು ವೇಳೆ 15 ದಿನಗಳಿಗಿಂತ ಹೆಚ್ಚಿನ ಸಮಯ ರಜೆ ಪಡೆದಲ್ಲಿ ಬದಲಿ ಸಿಬ್ಬಂದಿಯನ್ನು ನೇಮಿಸಬಹುದು ಎಂದು ತಿಳಿಸಲಾಗಿದೆ.
ನಿಗದಿಪಡಿಸಿದ ಕಚೇರಿ/ಕಾಲೇಜಿನ ಕೆಲಸವನ್ನು ಹೊರತುಪಡಿಸಿ ಶೌಚಾಲಯ ಸ್ವಚ್ಛತೆ, ಸ್ವಂತ ಕೆಲಸಗಳಿಗೆ ಹಂಚಿಕೆ ಮಾಡದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…