ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರ ಹುದ್ದೆ ಭರ್ತಿಗೆ ಲಿಖಿತ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು.26.ಮೇ.25:- 2024-25ನೇ ಸಾಲಿನ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ (Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ವಿಷಯದನ್ವಯ, 2024-25ನೇ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ (Specified Post) ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡಲು ಬಗ್ಗೆ ಉಲ್ಲೇಖ-1 ರಲ್ಲಿ ಮಾರ್ಗಸೂಚಿ ಸಹಿತ ವೇಳಾಪಟ್ಟಿಯನ್ನು ಅಧಿಸೂಚಿಸಲಾಗಿತ್ತು. ಆದರೆ ಆಡಳಿತಾತ್ಮಕ ಹಿತದೃಷ್ಟಿಯಿಂದ ನಿರ್ದಿಷ್ಟಪಡಿಸಿದ (Specified Post) ಹುದ್ದೆಗಳಿಗೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆಯನ್ನು ಮುಂಡೂಡಲು ಉಲ್ಲೇಖಿತ-2 ರಲ್ಲಿ ನಿರ್ದೇಶಕರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು ಇವರು ಮನವಿ ಸಲ್ಲಿಸಿರುತ್ತಾರೆ, ಸದರಿ ಮನವಿಯನ್ನು ಪರಿಶೀಲಿಸಿ ಆಡಳಿತಾತ್ಮಕ ಕಾರಣಗಳ ಹಿನ್ನೆಲೆಯಲ್ಲಿ ಈಗಾಗಲೇ ಹೊರಡಿಸಲಾಗಿದ್ದ ವೇಳಾಪಟ್ಟಿಯನ್ನು ಈ ಕೆಳಗಿನಂತೆ ಪರಿಷ್ಕರಿಸಿದೆ. ಉಳಿದಂತೆ ಈ ಹಿಂದೆ ಇದ್ದ ಮಾರ್ಗಸೂಚಿ ಅಂಶಗಳು ಮತ್ತು ಸೂಚನೆಗಳು ಯಥಾವತ್ತಾಗಿ ಮುಂದುವರೆಯುತ್ತದೆ ಯಾವುದೇ ಬದಲಾವಣೆಗಳು ಇರುವುದಿಲ್ಲ.

-: ವೇಳಾಪಟ್ಟಿ :-

ಸರ್ಕಾರಿ ಪ್ರಾಥಮಿಕ/ ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು/ ತತ್ಸಮಾನ ವೃಂದದ ಹುದ್ದೆಗಳಿಗೆ

ಅಧಿಕೃತ ಜ್ಞಾಪನ ಹೊರಡಿಸುವುದು. 1 [ಶಾಲಾಶಿಕ್ಷಣ ಇಲಾಖೆಯ ಅಧಿಕೃತ ಇಲಾಖಾ ವೆಬ್‌ಸೈಟ್‌ನಲ್ಲಿ] ಈಗಾಗಲೇ ದಿನಾಂಕ: 12/05/2025 ರಂದು ಅಧಿಸೂಚನೆ ಹೊರಡಿಸಲಾಗಿದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ 2 ಸಲ್ಲಿಸುವುದು [ವಿದ್ಯಾರ್ಹತೆ ಹಾಗೂ ವೈಟೇಜ್‌ಗೆ ಸಂಬಂದಿಸಿದ ಲಗತ್ತುಗಳನ್ನು ಸಹ ಅಭ್ಯರ್ಥಿಗಳೇ ಆನ್‌ಲೈನ್‌ನಲ್ಲಿಯೇ ಅಪ್ ಲೋಡ್ ಮಾಡುವುದು].

ಅಭ್ಯರ್ಥಿಗಳು 12/05/2025 ರಿಂದ 29/05/2025 ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ 3 ಸೇವಾನುಭವ ಮತ್ತು ಹೆಚ್ಚಿನ ವಿದ್ಯಾರ್ಹತೆಗೆ ನಿಗಧಿಪಡಿಸಿರುವ ಅಂಕಗಳನ್ನು ಮತ್ತು ಅರ್ಹತೆಯನ್ನು ಪರಿಶೀಲಿಸಿ ಅನುಮೋದನೆ ನೀಡುವುದು.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

5 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

7 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago