ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರಿಗೆ “ಬಡ್ತಿ” ಭಾಗ್ಯ: ರಾಜ್ಯ ಸರ್ಕಾರ  ಆದೇಶ.!

ಬೆಂಗಳೂರು.೦1.ಮಾ.25:-  ಕರ್ಣಾಟಕ ರಾಜ್ಯ ಸರ್ಕಾರಿ ಪ್ರೌಡ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಸರ್ಕಾರಿ ಪ್ರೌಢ ಶಾಲಾ “Head Master”ಮುಖ್ಯ ಶಿಕ್ಷಕರು/ತತ್ಸಮಾನ ಗ್ರೂಪ್-ಬಿ ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡುವ ಸಂಬಂದ ಪ್ರಸ್ತಾವನೆ ಪಡೆಯುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ನೀಡಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಹಾಗೂ ಮೈಸೂರು ವಿಭಾಗದಲ್ಲಿನ ಮುಖ್ಯ ಶಿಕ್ಷಕರು ಹಾಗೂ ಉಪ ಪ್ರಾಂಶುಪಾಲರ ವೃಂದದ ಗ್ರೂಪ್-ಬಿ ಖಾಲಿ ಹುದ್ದೆಗಳಿಗೆ ದಿನಾಂಕ:01.01.2023ರಲ್ಲಿದ್ದಂತೆ ಪ್ರಕಟಿಸಲಾದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಟತಾ ಪಟ್ಟಿಯನ್ನಾದರಿಸಿ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಲಾಗಿದೆ.

ಪ್ರಕಟಿಸಿರುವ ಜೇಷ್ಟತಾ ಪಟ್ಟಿಯನ್ನು ಅನುಸರಿಸಿ ಬೆಂಗಳೂರು /ಮೈಸೂರು ವಿಭಾಗದಲ್ಲಿ ಖಾಲಿ ಇರುವ ಮುಖ್ಯ ಶಿಕ್ಷಕರು/ಉಪ ಪ್ರಾಂಶುಪಾಲರ ಹುದ್ದೆಗಳಿಗೆ ಬಡ್ತಿ ನೀಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.ಈ ಪತ್ರದೊಂದಿಗೆ ಸರ್ಕಾರಿ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದದಿಂದ ಮುಖ್ಯ ಶಿಕ್ಷಕರು/ಉಪ ಪ್ರಾಂಶುಪಾಲರ ಹುದ್ದೆಗಳಿಗೆ ನೀಡಬಹುದಾದ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದ

1. ಇದರೊಂದಿಗೆ ಲಗತ್ತಿಸಿರುವ ಚೆಕ್ ಲಿಸ್ಟ್‌ನೊಂದಿಗೆ ಹೆಚ್.ಆರ್.ಎಂ.ಎಸ್ ನಲ್ಲಿ ವೇತನ ಸೆಳೆಯುವ ಕೆ.ಜಿ.ಐ.ಡಿ ಸಂಖ್ಯೆಯನ್ನೇ ಕಡ್ಡಾಯವಾಗಿ ಕಾಲಂ-3ರಲ್ಲಿ ನಮೂದಿಸಬೇಕು. [ಒಂದು ವೇಳೆ ಹೆಚ್.ಆರ್.ಎಂ.ಎಸ್ ನಲ್ಲಿ ವೇತನ ಸೆಳೆಯುವ ಕೆ.ಜಿ.ಐ.ಡಿ ಸಂಖ್ಯೆ ಹಾಗೂ ಶಿಕ್ಷಕರ ಸೇವಾ ತಂತ್ರಾಂಶದಲ್ಲಿ [ಟಿ.ಡಿ.ಎಸ್) ನಮೂದಿಸಿರುವ ಕೆ.ಜಿ.ಐ.ಡಿ ಸಂಖ್ಯೆ ವ್ಯತ್ಯಾಸವಾಗಿದ್ದಲ್ಲಿ ಅಂತಹ ಪ್ರಕರಣಗಳಿಗೆ ಸಂಬಂಧ ಪಟ್ಟ ಉಪನಿರ್ದೇಶಕರೇ ನೇರ ಹೊಣೆಗಾರರಾಗಿರುತ್ತಾರೆ.

2. ಈ ಪಟ್ಟಿಯಲ್ಲಿನ ಶಿಕ್ಷಕರು ಪ್ರಸ್ತುತ ನೇಮಕಾತಿಯಾದ ವಿಭಾಗದಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆಯೇ ಅಥವಾ ಅಂತರ ವಿಭಾಗದ ವರ್ಗಾವಣೆಯಾಗಿದ್ದಾರೆಯೇ ಎಂಬುದನ್ನು ಕಡ್ಡಾಯವಾಗಿ ಸೇವಾ ವಹಿಯಲ್ಲಿ ಪರಿಶೀಲಿಸಿಕೊಂಡು ಪ್ರಸ್ತಾವನೆ ಸಲ್ಲಿಸುವುದು

3. ಈ ಪಟ್ಟಿಯಲ್ಲಿನ ಶಿಕ್ಷಕರ ಮಾಹಿತಿಯು ಶಿಕ್ಷಕರ ಸೇವಾ ತಂತ್ರಾಂಶದಲ್ಲಿ (ಇಇಡಿಎಸ್)ನಲ್ಲಿ ಕಡ್ಡಾಯವಾಗಿ ನಮೂದಾಗಿರುವ ಬಗ್ಗೆ ಪರಿಶೀಲಿಸಿಕೊಂಡು ಮಾಹಿತಿ ಸಲ್ಲಿಸುವುದು

4. ಬಡ್ತಿ ಸಂಬಂಧ ಪ್ರಕಟಿಸಲಾಗಿರುವ ಪಟ್ಟಿಯಲ್ಲಿನ ಎಲ್ಲಾ ಪ್ರೌಢ ಶಾಲಾ ಸಹ ಶಿಕ್ಷಕರುಗಳ ಬಗ್ಗೆ ಶಿಸ್ತಿನ ಕ್ರಮ/ ಇಲಾಖಾ ವಿಚಾರಣೆ/ ವಿಚಾರಣೆ/ನ್ಯಾಯಾಲಯದ ಪ್ರಕರಣಗಳ ಬಾಕಿ ಇರುವ/ಇಲ್ಲದಿರುವ ಕುರಿತು ಉಪನಿರ್ದೇಶಕರು ದೃಢೀಕರಣವನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು.

5. ಪ್ರಕಟಿಸಲಾಗಿರುವ ಪಟ್ಟಿಯಲ್ಲಿ ಪ್ರಕಟಿಸಲಾಗಿರುವ ಶಿಕ್ಷಕರಿಗಿಂತ ಜೇಷ್ಟತೆಗಿಂತ ಹಿರಿಯರಾಗಿದ್ದಲ್ಲಿ ಹಾಗೂ ಅಂತವರ ಹೆಸರು ಈ ಪಟ್ಟಿಯಲ್ಲಿ ಬಿಟ್ಟಿದ್ದಲ್ಲಿ ಹಾಗೂ ಪ್ರಸ್ತುತ ನಿರ್ದೇಶಕರು ಪ್ರಕಟಿಸಿರುವ ಜೇಷ್ಟತಾ ಪಟ್ಟಿಯಲ್ಲಿ ಇದ್ದಲ್ಲಿ ಅಂತಹ ಸಹ ಶಿಕ್ಷಕರ ವಿವರಗಳನ್ನು ಸಹ ಡೋಸಿಯರ್‌ನಲ್ಲಿ ಸಲ್ಲಿಸಲು ತಿಳಿಸಿದೆ.

6. ಪ್ರಸ್ತುತ ಪಟ್ಟಿಯಲ್ಲಿ ಒಂದು ವರ್ಷಕ್ಕಿಂತ ಹಿಂದೆ ಬಡ್ತಿ ಮುಂದೂಡಿದ ಶಿಕ್ಷಕರ ವಿವರ ಬಿಟ್ಟು ಹೊಗಿದ್ದಲ್ಲಿ ಅಂಥಹವರ ಡೋನಿಯರ್ ಅನ್ನು ಸೂಕ್ತ ಷರಾ ನಮೂದಿಸಿ ಪ್ರಸ್ತಾವನೆ ಸಲ್ಲಿಸುವುದು

7. ಚೆಕ್ ಲಿಸ್ಟನಲ್ಲಿ ಕಡ್ಡಾಯವಾಗಿ ಕೆ.ಜಿ.ಐ.ಡಿ ಸಂಖ್ಯೆಯನ್ನು ನಮೂದಿಸಿ ಸಲ್ಲಿಸುವುದು ಹಾಗೂ ಡೋಸಿಯರ್‌ನೊಂದಿಗೆ ಸಲ್ಲಿಸಲಾಗುವ ಪಟ್ಟಿಯಲ್ಲೂ ಸಹ ಕೆಳಗಿನ ನಮೂನೆಯಲ್ಲಿಯೇ ಸಲ್ಲಿಸಲು ತಿಳಿಸಿದೆ.

ಮೇಲ್ಕಂಡ ವಿವರಗಳನ್ನು ಇದರೊಂದಿಗೆ ಲಗತ್ತಿಸಿರುವ ಚೆಕ್ ಲಿಸ್ಟ್‌ನಲ್ಲಿ ಮಾಹಿತಿಯನ್ನು ನಮೂದಿಸಿದ ಪ್ರಸ್ತಾವನೆಯನ್ನು ಸಂಬಂದಿಸಿದ ಶಿಕ್ಷಕರುಗಳಿಂದ ಪಡೆದು ಜಿಲ್ಲಾವಾರು ಕ್ರೋಢೀಕರಿಸಿ, ಪ್ರತಿ ಶಿಕ್ಷಕರ ಬಡ್ತಿ ಪ್ರಸ್ತಾವನೆಯನ್ನು ಪ್ರತ್ಯೇಕ ಡೋಸಿಯರ್‌ಗಳಲ್ಲಿ ಸಿದ್ಧಪಡಿಸಿ ಉಪನಿರ್ದೇಶಕರು (ಆಡಳಿತ)ರವರ ದೃಢೀಕರಣದೊಂದಿಗೆ ಈ ಕಛೇರಿಗೆ ದಿನಾಂಕ: 10.03.2025 ರೊಳಗಾಗಿ ಕಡ್ಡಾಯವಾಗಿ ಸಂಬಂದಿಸಿದ ವಿಷಯ ನಿರ್ವಾಹಕರು ಮುದ್ದಾಂ ಸಲ್ಲಿಸತಕ್ಕದ್ದು.

prajaprabhat

Recent Posts

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

54 minutes ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

3 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

3 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

3 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

3 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

3 hours ago