ಗೋಕಾಕ, 21.ಫೆ.25:- ಸರ್ಕಾರಿ ಶಾಲೆಗಳಲ್ಲಿ ಮೂಡಲಗಿ ವಲಯ ಶಿಕ್ಷಣ ರಂಗದಲ್ಲಿ ಪ್ರಗತಿ ಸಾಧಿಸುತ್ತ, ಪ್ರತಿವರ್ಷ ಉತ್ತಮ ಫಲಿತಾಂಶ ನೀಡುತ್ತ ಬಂದಿದೆ. ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸುತ್ತಿದ್ದು, ಅವರಿಗೆ ಪ್ರತಿ ತಿಂಗಳು ವೈಯಕ್ತಿಕವಾಗಿ ಗೌರವಧನ ನೀಡುತ್ತಿದ್ದೇನೆ’ ಎಂದು ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಇಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 79 ಅತಿಥಿ ಶಿಕ್ಷಕರಿಗೆ 10 ತಿಂಗಳ ಗೌರವಧನವಾದ ₹25.15 ಲಕ್ಷ ವಿತರಿಸಿ ಅವರು ಮಾತನಾಡಿದರು.
‘ನಾನು ಶಾಸಕನಾಗುವ ಮುಂಚೆಯಿಂದಲೇ ಶಿಕ್ಷಣ ಕ್ಷೇತ್ರ ಬಲಪಡಿಸುವ ಕೆಲಸಕ್ಕೆ ನೆರವಾಗುತ್ತಿದ್ದೇನೆ. ಮೂಡಲಗಿ ವಲಯ ಶೈಕ್ಷಣಿಕವಾಗಿ ಮುಂದೆಬರಬೇಕು. ಇಲ್ಲಿ ಓದುವ ವಿದ್ಯಾರ್ಥಿಗಳು ಸ್ವ ಸಾಮರ್ಥ್ಯದ ಮೇಲೆ ಮುಂದೆಬಂದು, ಸಮಾಜದಲ್ಲಿ ಉನ್ನತ ಸ್ಥಾನಗಳಿಸಬೇಕು ಎಂಬ ಉದ್ದೇಶದಿಂದ ಅತಿಥಿ ಶಿಕ್ಷಕರಿಗೆ ಗೌರವಧನ ನೀಡುತ್ತಿದ್ದೇನೆ. ಗ್ರಾಮೀಣ ಭಾಗದ ಯಾವುದೇ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿಯಬಾರದು’ ಎಂದರು.
ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳ 30 ಸಾವಿರ ವಿದ್ಯಾರ್ಥಿಗಳಿಗೆ ₹1.55 ಕೋಟಿ ವೆಚ್ಚದ ಶಾಲಾ ಬ್ಯಾಗ್, ಸಮವಸ್ತ್ರ ಮತ್ತು ಸ್ವೇಟರ್ಗಳನ್ನು ವಿತರಿಸಲಾಯಿತು.
ಚಿಕ್ಕೋಡಿ ಡಿಡಿಪಿಐ ಆರ್.ಎಸ್. ಸೀತಾರಾಮು, ಮೂಡಲಗಿ ಬಿಇಒ ಅಜಿತ ಮನ್ನಿಕೇರಿ, ಗೋಕಾಕ ತಹಶೀಲ್ದಾರ್ ಮೋಹನ ಭಸ್ಮೆ, ಮೂಡಲಗಿ ತಹಶೀಲ್ದಾರ್ ಶಿವಾನಂದ ಬಬಲಿ, ಗೋಕಾಕ ಬಿಇಒ ಜಿ.ಬಿ. ಬಳಗಾರ, ಮೂಡಲಗಿ ಶಿಶು ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಗದಾಡಿ, ಮಧ್ಯಾಹ್ನ ಉಪಾಹಾರ ಯೋಜನೆಯ ಸಹಾಯಕ ನಿರ್ದೇಶಕ ಎ.ಬಿ. ಮಲಬನ್ನವರ, ಸಮನ್ವಯಾಧಿಕಾರಿ ರೇಣುಕಾ ಆನಿ ಇದ್ದರು.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…