09/06/2025 1:41 AM

Translate Language

Home » ಲೈವ್ ನ್ಯೂಸ್ » ಸವರ್ಣೀಯ ಮಗುವನ್ನು ‘ಬೇಟಾ’ ಎಂದು ಕರೆದಿದ್ದಕ್ಕೆ ಹಲ್ಲೆ, ದಲಿತ ಯುವಕ ಸಾವು

ಸವರ್ಣೀಯ ಮಗುವನ್ನು ‘ಬೇಟಾ’ ಎಂದು ಕರೆದಿದ್ದಕ್ಕೆ ಹಲ್ಲೆ, ದಲಿತ ಯುವಕ ಸಾವು

Facebook
X
WhatsApp
Telegram

ಅಮ್ರೇಲಿ.26.ಮೇ.25:- ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ಮೇ 16 ರಂದು ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿದಂತೆ ಗುಂಪೊಂದು ಇತರ ಮೂವರೊಂದಿಗೆ ಥಳಿಸಿದ್ದ 20 ವರ್ಷದ ದಲಿತ ವ್ಯಕ್ತಿ ಭಾವನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ನೀಲೇಶ್ ರಾಥೋಡ್ ಗುರುವಾರ ರಾತ್ರಿ ನಿಧನರಾದರು, ಮತ್ತು ಘಟನೆಯ ದಿನದಂದು ಎಫ್‌ಐಆರ್ ದಾಖಲಾದ ನಂತರ ಬಂಧಿಸಲ್ಪಟ್ಟ ಒಂಬತ್ತು ಮಂದಿ ಈಗ ಕೊಲೆ ಆರೋಪಗಳನ್ನು ಎದುರಿಸಬೇಕಾಗುತ್ತದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ನಯನಾ ಗೊರಾಡಿಯಾ ಮಾಹಿತಿ ನೀಡಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಪ್ರಾಪ್ತ ಬಾಲಕ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ನೀಲೇಶ್ ರಾಥೋಡ್ ಎಂಬ ಯುವಕ ಸಿಹಿ ತಿಂಡಿ ಖರೀದಿಸಲು ಪ್ರಬಲ ಜಾತಿಯ ವಿಜಯ್ ಆನಂದ್ ತೋಟಾ ಎಂಬಾತನ ಅಂಗಡಿಗೆ ಹೋಗಿದ್ದ. ಈ ವೇಳೆ ಅಂಗಡಿಯಲ್ಲಿ ಚಿಕ್ಕ ಮಗುವಿತ್ತು. ಆ ಮಗುವನ್ನು ‘ಬೇಟಾ’ (ಮಗುವೇ) ಎಂದು ನೀಲೇಶ್ ಕರೆದಿದ್ದಾರೆ. ಇದೇ ಕಾರಣಕ್ಕಾಗಿ ಅವರ ಮೇಲೆ ಅಂಗಡಿ ಮಾಲಕ ವಿಜಯ್ ಆನಂದ್ ಮತ್ತು ಇತರರು ಕೋಲುಗಳು, ಕುಡುಗೋಲುಗಳಿಂದ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನೀಲೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಘಟನೆ ಬಗ್ಗೆ ಪ್ರಶ್ನಿಸಿದ ನೀಲೇಶ್ ಚಿಕ್ಕಪ್ಪ ಸುರೇಶ್ ವಾಲಾ ಮೇಲೆ ಕೂಡ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಸುರೇಶ್ ವಾಲಾ ಪ್ರಕರಣ ದಾಖಲಿಸಿದ್ದಾರೆ.

ಕಾಂಗ್ರೆಸ್‌ ಶಾಸಕ ಜಿಗ್ನೇಶ್‌ ಮೆವಾನಿ ಅವರು ಮೃತ ನೀಲೇಶ್ ರಾಥೋಡ್ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಅವರ ಜೊತೆ ಪ್ರತಿಭಟನೆಯಲ್ಲಿ ಭಾಗವಹಿಸಿ ನ್ಯಾಯಕ್ಕಾಗಿ ಒತ್ತಾಯಿಸಿದರು.

ಈ ಬೆಳವಣಿಗೆ ಗುಜರಾತ್‌ನಲ್ಲಿ ಇಂದಿಗೂ ಜಾತಿವಾದ ಆಳವಾಗಿ ಬೇರೂರಿದೆ ಎಂಬುದನ್ನು ತೋರಿಸುತ್ತದೆ. ದಲಿತರು ಭಯದಲ್ಲಿ ಬದುಕುತ್ತಿದ್ದಾರೆ ಮತ್ತು ತಮ್ಮ ಸ್ವಂತ ನೆಲದಲ್ಲಿ ಅಸುರಕ್ಷಿತರಾಗಿದ್ದಾರೆ. ದಲಿತರ ಬಗ್ಗೆ ತಾರತಮ್ಯ ಮಾಡಲಾಗುತ್ತದೆ, ಸಾಮಾನ್ಯ ಬಾವಿಗಳಿಂದ ನೀರು ತರುವುದನ್ನು ನಿರಾಕರಿಸಲಾಗುತ್ತದೆ, ದೇವಾಲಯಗಳಿಗೆ ಪ್ರವೇಶಿಸುವುದನ್ನು ತಡೆಯಲಾಗುತ್ತದೆ. ಈಗ ಓರ್ವ ದಲಿತನನ್ನು ಕ್ರೂರವಾಗಿ ಥಳಿಸಲಾಗಿದೆ. ಆದರೆ ಸರಕಾರ ಮೌನವಾಗಿದೆ. ಇದು ಅತ್ಯಂತ ದುರದೃಷ್ಟಕರ. ಈ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!