ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳು ಲೆಕ್ಕಪರಿಶೋಧಕರ ಆಯ್ಕೆ ಮಾಹಿತಿ ಸಲ್ಲಿಸಲು ಸೂಚನೆ
ಬೀದರ.28.ಅಗಸ್ಟ್.25:- ಬೀದರ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳು / ಸೌಹಾರ್ದ ಸಹಕಾರಿಗಳು ತಾವು ಪ್ರತಿ ವರ್ಷದಂತೆ ಈ ವರ್ಷವು ದಿನಾಂಕ: 25/09/2025ರ ಒಳಗಾಗಿ ಪ್ರತಿಯೊಂದು ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳು ತಮ್ಮ ಸಂಘದ ವಾರ್ಷಿಕ ಮಹಾಸಭೆಯನ್ನು ಕಡ್ಡಾಯವಾಗಿ ಜರುಗಿಸಬೇಕು. ಅದರಲ್ಲಿ ಸನ್ 2024-25 ನೇ ಸಾಲಿನ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನು ಆಯ್ಕೆ ಮಾಡಿಕೊಳ್ಳಬೇಕು.
ತಾವು ಜರುಗಿಸಿದ ವಾರ್ಷಿಕ ಮಹಾಸಭೆಯ ನಡುವಳಿಗಳನ್ನು ಕರ್ನಾಟಕ ಸಹಕಾರ ಸಂಘಗಳ/ಸೌಹಾರ್ದ ಸಹಕಾರಿಗಳ ನಿಯಮಗಳ ನಿಯಮ 29 (ಃ) S / 8(ಃ) 8 ರೀತ್ಯ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡ ಬಗ್ಗೆ 07 ದಿನಗಳ ಒಳಗಾಗಿ ವಾರ್ಷಿಕ ಮಹಾಸಭೆಯ ನಡಾವಳಿಯೊಂದಿಗೆ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರ ಕಛೇರಿಗೆ ಮಾಹಿತಿಗಾಗಿ ಕೋರಿ ದಿನಾಂಕ: 27/01/2025 ರಂದು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿರುತ್ತದೆ ಹಾಗೂ ಸದರಿ ಸಂಘಗಳಿಗೆ ವೈಯಕ್ತಿಕವಾಗಿ ಪತ್ರ ವ್ಯವಹಾರದ ಮೂಲಕ ಮಾಹಿತಿಯನ್ನು ನೀಡಿದಾಗ್ಯೂ ಸದರಿ ಮಾಹಿತಿಯು ಇಲಾಖೆಗೆ ತಹಲ್ವರೆಗೆ ಸಲ್ಲಿಕೆಯಾಗದೆ ಇರುವ ಕಾರಣ ಅಂತಿಮವಾಗಿ ಸೂಚನೆಯು ಈ ಪ್ರಕಟಣೆ ಮೂಲಕ ನೀಡಲಾಗಿರುತ್ತದೆ.
ಆದುದರಿಂದ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ/ಸೌಹಾರ್ದ ಸಹಕಾರಿ ಕಾಯ್ದೆ ಕಲಂ 63(1)/33(1) ರನ್ವಯ ಆಯ್ಕೆ ಮಾಹಿತಿಯನ್ನು ಸಲ್ಲಿಸಬೇಕಾಗಿತ್ತು. ಆದರೆ ಆಯ್ಕೆ ಮಾಹಿತಿ ಸಲ್ಲಿಸದೇ ಇರುವುದರಿಂದ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ / ಸೌಹಾರ್ದ ಸಹಕಾರಿ ಕಾಯ್ದೆ ಕಲಂ 63(2) /33(2) ಪ್ರಾವಿಸೊದನ್ವಯ ಪ್ರದತ್ತವಾದ ಅಧಿಕಾರದ ಮೆರೆಗೆ ನೀವು ಲೆಕ್ಕಪರಿಶೋಧನೆಗೆ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಳ್ಳದೆ ಇರುವುದರಿಂದ ಕರ್ನಾಟಕ ಸಹಕಾರ ಸಂಘಗಳ ನಿಯಮ / ಸೌಹಾರ್ದ ಸಹಕಾರಿ ನಿಯಮ 29(ಃ)8 / 8(ಃ)8 ರನ್ವಯ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಈ ಇಲಾಖೆಗೆ ತಿಳಿಯಪಡಿಸದೇ ಇರುವುದರಿಂದ ತಾವು ವಾರ್ಷಿಕ ಮಹಾ ಸಭೆಯಲ್ಲಿ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡಿರುವುದಿಲ್ಲವೆಂದು ಪರಿಭಾವಿಸಿ ಇಲಾಖಾ ವತಿಯಿಂದ ತಮ್ಮ ಸಂಘಗಳ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದೆಂದು ಸ್ಪಷ್ಟಪಡಿಸುತ್ತಾ ಈ ಕುರಿತು ನಿಮ್ಮ ಹೇಳಿಕೆ/ಮಾಹಿತಿ ಏನಾದರೂ ಇದ್ದಲ್ಲಿ “ಮಾನ್ಯ ಉಪ ನಿರ್ದೇಶಕರು, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ, ಉಪ ನಿರ್ದೇಶಕರ ಕಛೇರಿ, ಬೀದರ ಎಲ್.ಐ.ಜಿ-124 ಕೆ.ಎಚ್.ಬಿ.ಕಾಲೋನಿ, ಬೀದರ-585401” ರವರಿಗೆ ಈ ಪ್ರಕಟಣೆಯಾದ 03 ದಿನಗಳ ಒಳಗಾಗಿ ಮಾಹಿತಿ ಸಲ್ಲಿಸಲು ತಿಳಿಯಪಡಿಸಿದೆ.
ಇಲ್ಲವಾದಲ್ಲಿ ನೀವು ತಿಳಿಸಬೇಕಾಗಿರುವುದು ಏನು ಇಲ್ಲವೆಂದು ಪರಿಗಣಿಸಿ ನಿಮ್ಮ ಸಂಘದ ಲೆಕ್ಕಪರಿಶೋಧನೆ ನಿರ್ವಹಿಸಲು ಇಲಾಖಾ ವತಿಯಿಂದ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದೆಂದು ಬೀದರ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

