ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳುಲೆಕ್ಕಪರಿಶೋಧಕರ ಆಯ್ಕೆ ಮಾಹಿತಿ ಸಲ್ಲಿಸಲು ಸೂಚನೆ.!


ಬೀದರ.24ಜನವರಿ.25:- ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳು / ಸೌಹಾರ್ದ ಸಹಕಾರಿಗಳು ಲೆಕ್ಕ ಪರಿಶೋಧಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಸಲ್ಲಿಸದೇ ಇರುವುದರಿಂದ ಕೂಡಲೇ ಈ ಬಗ್ಗೆ ಮಾಹಿತಿ ಸಲ್ಲಿಸುವಂತೆ ಬೀದರ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ತಾವು ಪ್ರತಿವರ್ಷದಂತೆ ಈ ವರ್ಷವು ದಿನಾಂಕ: 25-09-2025 ರೊಳಗಾಗಿ ಪ್ರತಿಯೊಂದು ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳು ತಮ್ಮ ಸಂಘದ ವಾರ್ಷಿಕ ಮಹಾಸಭೆಯನ್ನು ಕಡ್ಡಾಯವಾಗಿ ಜರುಗಿಸಬೇಕು.

ಅದರಲ್ಲಿ ಸನ್ 2024-25 ನೇ ಸಾಲಿನ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನುಆಯ್ಕೆ ಮಾಡಿಕೊಳ್ಳಬೇಕು. ತಾವು ಜರುಗಿಸಿದ ವಾರ್ಷಿಕ ಮಹಾಸಭೆಯ ನಡುವಳಿಗಳನ್ನು ಕರ್ನಾಟಕ ಸಹಕಾರ ಸಂಘಗಳ / ಸೌಹಾರ್ದ ಸಹಕಾರಿಗಳ ನಿಯಮಗಳ ನಿಯಮ 29(B))8 / 8(B))8 ರಿತ್ಯ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡ ಬಗ್ಗೆ 07 ದಿನಗಳ ಒಳಗಾಗಿ ವಾರ್ಷಿಕ ಮಹಾಸಭೆಯ ನಡುವಳಿಯೊಂದಿಗೆ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರಕಛೇರಿಗೆ ಮಾಹಿತಿಗಾಗಿ ಸಲ್ಲಿಸಬೇಕಾಗಿದ್ದು, ತಹಲ್‌ವರಗೂ ಲೆಕ್ಕಪರಿಶೋಧಕರ ಆಯ್ಕೆ ಮಾಡಿಕೊಂಡ ಮಾಹಿತಿಯನ್ನು ಸಲ್ಲಿಸಿರುವುದಿಲ್ಲ.


ಆದ್ದರಿಂದ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ/ಸೌಹಾರ್ದ ಸಹಕಾರಿ ಕಾಯ್ದೆ ಕಲಂ 63(1)/33(1) ರನ್ವಯಆಯ್ಕೆ ಮಾಹಿತಿಯನ್ನು ಸಲ್ಲಿಸಬೇಕಾಗಿತ್ತು. ಆದರೆ ಆಯ್ಕೆ ಮಾಹಿತಿ ಸಲ್ಲಿಸದೇ ಇರುವುದರಿಂದ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ / ಸೌಹಾರ್ದ ಸಹಕಾರಿಕಾಯ್ದೆ ಕಲಂ 63(2) / 33(2) ಪ್ರಾವಿಸೊದನ್ವಯ ಪ್ರದತ್ತವಾದ ಅಧಿಕಾರದ ಮೆರೆಗೆ ನೀವು ಲೆಕ್ಕ ಪರಿಶೋಧನೆಗೆ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಳ್ಳದೆ ಇರುವುದರಿಂದ ಕರ್ನಾಟಕ ಸಹಕಾರ ಸಂಘಗಳ ನಿಯಮ / ಸೌಹಾರ್ದ ಸಹಕಾರಿ ನಿಯಮ 29(B)8 / 8(B))8 ರನ್ವಯ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಈ ಇಲಾಖೆಗೆ ತಿಳಿಯಪಡಿಸದೇ ಇರುವುದರಿಂದ ತಾವು ವಾರ್ಷಿಕ ಮಹಾ ಸಭೆಯಲ್ಲಿ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡಿರುವುದಿಲ್ಲವೆoದು ಪರಿಭಾವಿಸಿ ಇಲಾಖಾ ವತಿಯಿಂದ ತಮ್ಮ ಸಂಘಗಳ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದೆಂದು ಸ್ಪಷ್ಟಪಡಿಸುತ್ತಾ ಈ ಕುರಿತು ನಿಮ್ಮ ಹೇಳಿಕೆ/ಮಾಹಿತಿ ಏನಾದರೂ ಇದ್ದಲ್ಲಿ

ಮಾನ್ಯ ಉಪ ನಿರ್ದೇಶಕರು, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ, ಉಪ ನಿರ್ದೇಶಕರಕಛೇರಿ, ಬೀದರ ಎಲ್.ಐ.ಜಿ-124 ಕೆ.ಎಚ್.ಬಿ. ಕಾಲೋನಿ, ವಿಶ್ವನಾಥ ಫುಲೇಕರ್‌ರವರ ನಿವಾಸ, ಡಾ|| ನಾಗಮಾರಪಳ್ಳಿ ರವರ ಮನೆ ಹತ್ತಿರ, ಬೀದರ-585401 ರವರಿಗೆ ಮಾಹಿತಿ ಸಲ್ಲಿಸಲು ತಿಳಿಯಪಡಿಸಿದೆ.

ಇಲ್ಲವಾದಲ್ಲಿ ನೀವು ತಿಳಿಸಬೇಕಾಗಿರುವುದು ಏನು ಇಲ್ಲವೆಂದು ಪರಿಗಣಿಸಿ ನಿಮ್ಮ ಸಂಘದ ಲೆಕ್ಕಪರಿಶೋಧನೆ ನಿರ್ವಹಿಸಲು ಇಲಾಖಾ ವತಿಯಿಂದ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದೆಂದು ಸ್ಪಷ್ಟಪಡಿಸಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

7 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

7 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

7 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

7 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

7 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

7 hours ago