ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳುಲೆಕ್ಕಪರಿಶೋಧಕರ ಆಯ್ಕೆ ಮಾಹಿತಿ ಸಲ್ಲಿಸಲು ಸೂಚನೆ.!


ಬೀದರ.24ಜನವರಿ.25:- ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳು / ಸೌಹಾರ್ದ ಸಹಕಾರಿಗಳು ಲೆಕ್ಕ ಪರಿಶೋಧಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಸಲ್ಲಿಸದೇ ಇರುವುದರಿಂದ ಕೂಡಲೇ ಈ ಬಗ್ಗೆ ಮಾಹಿತಿ ಸಲ್ಲಿಸುವಂತೆ ಬೀದರ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ತಾವು ಪ್ರತಿವರ್ಷದಂತೆ ಈ ವರ್ಷವು ದಿನಾಂಕ: 25-09-2025 ರೊಳಗಾಗಿ ಪ್ರತಿಯೊಂದು ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳು ತಮ್ಮ ಸಂಘದ ವಾರ್ಷಿಕ ಮಹಾಸಭೆಯನ್ನು ಕಡ್ಡಾಯವಾಗಿ ಜರುಗಿಸಬೇಕು.

ಅದರಲ್ಲಿ ಸನ್ 2024-25 ನೇ ಸಾಲಿನ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನುಆಯ್ಕೆ ಮಾಡಿಕೊಳ್ಳಬೇಕು. ತಾವು ಜರುಗಿಸಿದ ವಾರ್ಷಿಕ ಮಹಾಸಭೆಯ ನಡುವಳಿಗಳನ್ನು ಕರ್ನಾಟಕ ಸಹಕಾರ ಸಂಘಗಳ / ಸೌಹಾರ್ದ ಸಹಕಾರಿಗಳ ನಿಯಮಗಳ ನಿಯಮ 29(B))8 / 8(B))8 ರಿತ್ಯ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡ ಬಗ್ಗೆ 07 ದಿನಗಳ ಒಳಗಾಗಿ ವಾರ್ಷಿಕ ಮಹಾಸಭೆಯ ನಡುವಳಿಯೊಂದಿಗೆ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರಕಛೇರಿಗೆ ಮಾಹಿತಿಗಾಗಿ ಸಲ್ಲಿಸಬೇಕಾಗಿದ್ದು, ತಹಲ್‌ವರಗೂ ಲೆಕ್ಕಪರಿಶೋಧಕರ ಆಯ್ಕೆ ಮಾಡಿಕೊಂಡ ಮಾಹಿತಿಯನ್ನು ಸಲ್ಲಿಸಿರುವುದಿಲ್ಲ.


ಆದ್ದರಿಂದ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ/ಸೌಹಾರ್ದ ಸಹಕಾರಿ ಕಾಯ್ದೆ ಕಲಂ 63(1)/33(1) ರನ್ವಯಆಯ್ಕೆ ಮಾಹಿತಿಯನ್ನು ಸಲ್ಲಿಸಬೇಕಾಗಿತ್ತು. ಆದರೆ ಆಯ್ಕೆ ಮಾಹಿತಿ ಸಲ್ಲಿಸದೇ ಇರುವುದರಿಂದ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ / ಸೌಹಾರ್ದ ಸಹಕಾರಿಕಾಯ್ದೆ ಕಲಂ 63(2) / 33(2) ಪ್ರಾವಿಸೊದನ್ವಯ ಪ್ರದತ್ತವಾದ ಅಧಿಕಾರದ ಮೆರೆಗೆ ನೀವು ಲೆಕ್ಕ ಪರಿಶೋಧನೆಗೆ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಳ್ಳದೆ ಇರುವುದರಿಂದ ಕರ್ನಾಟಕ ಸಹಕಾರ ಸಂಘಗಳ ನಿಯಮ / ಸೌಹಾರ್ದ ಸಹಕಾರಿ ನಿಯಮ 29(B)8 / 8(B))8 ರನ್ವಯ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಈ ಇಲಾಖೆಗೆ ತಿಳಿಯಪಡಿಸದೇ ಇರುವುದರಿಂದ ತಾವು ವಾರ್ಷಿಕ ಮಹಾ ಸಭೆಯಲ್ಲಿ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡಿರುವುದಿಲ್ಲವೆoದು ಪರಿಭಾವಿಸಿ ಇಲಾಖಾ ವತಿಯಿಂದ ತಮ್ಮ ಸಂಘಗಳ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದೆಂದು ಸ್ಪಷ್ಟಪಡಿಸುತ್ತಾ ಈ ಕುರಿತು ನಿಮ್ಮ ಹೇಳಿಕೆ/ಮಾಹಿತಿ ಏನಾದರೂ ಇದ್ದಲ್ಲಿ

ಮಾನ್ಯ ಉಪ ನಿರ್ದೇಶಕರು, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ, ಉಪ ನಿರ್ದೇಶಕರಕಛೇರಿ, ಬೀದರ ಎಲ್.ಐ.ಜಿ-124 ಕೆ.ಎಚ್.ಬಿ. ಕಾಲೋನಿ, ವಿಶ್ವನಾಥ ಫುಲೇಕರ್‌ರವರ ನಿವಾಸ, ಡಾ|| ನಾಗಮಾರಪಳ್ಳಿ ರವರ ಮನೆ ಹತ್ತಿರ, ಬೀದರ-585401 ರವರಿಗೆ ಮಾಹಿತಿ ಸಲ್ಲಿಸಲು ತಿಳಿಯಪಡಿಸಿದೆ.

ಇಲ್ಲವಾದಲ್ಲಿ ನೀವು ತಿಳಿಸಬೇಕಾಗಿರುವುದು ಏನು ಇಲ್ಲವೆಂದು ಪರಿಗಣಿಸಿ ನಿಮ್ಮ ಸಂಘದ ಲೆಕ್ಕಪರಿಶೋಧನೆ ನಿರ್ವಹಿಸಲು ಇಲಾಖಾ ವತಿಯಿಂದ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದೆಂದು ಸ್ಪಷ್ಟಪಡಿಸಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

3 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

3 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

3 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

3 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

4 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

6 hours ago