ಬೆಂಗಳೂರು.04.ಮೇ.25:- ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು/ಡೀಮ್ಡ್ ಉನ್ನತ ಶಿಕ್ಷಣ ಇಲಾಖೆ ಖಾಸಗಿ ವಿವಿಯಾಗಿದ್ದರೂ ಸರ್ಕಾರದಿಂದ ನೆರವಿಗೆ ಬೇಡಿಕೆ:ತನಿಖೆಗೆ ಮುಂದಾದ ಉನ್ನತ ಶಿಕ್ಷಣ ಇಲಾಖೆ ಕೆಲವು ಖಾಸಗಿ ವಿಶ್ವವಿದ್ಯಾಲಯಗಳು/ಡೀಮ್ಡ್ ವಿಶ್ವವಿದ್ಯಾಲಯಗಳಾಗಿ ಬದಲಾಗಿದ್ದರೂ ಸಹ ರಾಜ್ಯ ಸರ್ಕಾರದಿಂದ ನೆರವು ಪಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಉನ್ನತ ಶಿಕ್ಷಣ ಇಲಾಖೆಯು ಈ ಬಗ್ಗೆ ತನಿಖೆ ನಡೆಸಲು ತೀರ್ಮಾನಿಸಿದೆ.
ಕ್ರೈಸ್ಟ್, ಪಿಇಎಸ್, ಸೆಂಟ್ ಜೋಸೆಫ್, ಸೆಂಟ್ ಅಲೋಶಿಯಸ್ ಮುಂತಾದ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳು ಖಾಸಗಿ ವಿವಿಗಳಾಗಿ ಅಥವಾ ಡೀಮ್ಡ್ ವಿವಿಗಳಾಗಿ ಬದಲಾಗಿದ್ದರೂ ಸಹ ಸರ್ಕಾರದಿಂದ ನೆರವು ಪಡೆಯಲು ಯತ್ನಿಸುತ್ತಿವೆ.
ಕೆಲ ಸಹಾಯಕ ಉಪನ್ಯಾಸಕ ಹುದ್ದೆಗಳನ್ನು ಸರ್ಕಾರದ ಮೂಲಕ ಭರ್ತಿ ಮಾಡಲು ಪ್ರಯತ್ನ ನಡೆಸುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಈ ಬಗ್ಗೆ ತನಿಖೆಗೆ ನಡೆಸಲು ಮುಂದಾಗಿದ್ದಾರೆ.
ಖಾಸಗಿ ವಿವಿಯಾಗಿ ಮಾನ್ಯತೆ ಪಡೆದ ಸಂಸ್ಥೆಗಳಿಗೆ ಅನುದಾನ ನೀಡುವ ಬಗ್ಗೆ ನಮ್ಮ ಆಕ್ಷೇಪವಿದೆ. ಈ ಬಗ್ಗೆ ಕಾನೂನು ಇಲಾಖೆ ಮತ್ತು ಹಣಕಾಸು ಇಲಾಖೆಗೂ ಪತ್ರ ಬರೆಯುತ್ತೇವೆ. ಖಾಸಗಿ ವಿವಿಯಾಗಿ ಬದಲಾದ ಬಳಿಕ ಸಂಸ್ಥೆಗಳಿಗೆ ನೀಡಿರುವ ಅನುದಾನದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನನಗೆ ಮಂಗಳೂರಿನ ಅಲೋಶಿಯಸ್ ಕಾಲೇಜಿನಿಂದ ನೆರವು ಕೋರಿ ಪತ್ರ ಬಂದಾಗ ಈ ಬೆಳವಣಿಗೆ ಬಗ್ಗೆ ನನ್ನ ಅರಿವಿಗೆ ಬಂತು. ನಾನು ಈ ಬೆಳವಣಿಗೆ ಬಗ್ಗೆ ತನಿಖೆಗೆ ಆದೇಶಿಸಿದ್ದು ವರದಿ ಪಡೆಯಲಿದ್ದೇನೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಹೇಳಿದ್ದಾರೆ.
ಜೂನ್ 9 ರಂದು 14,582 ಹುದ್ದೆಗಳಿಗೆ SSC CGL 2025 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು…
ಶ್ರೀಲಂಕಾ ಇಂದು ಪವಿತ್ರ ಪೋಸನ್ ಪೋಯ ಹಬ್ಬವನ್ನು ಆಚರಿಸುತ್ತಿದೆ, ಇದು 2,000 ವರ್ಷಗಳ ಹಿಂದೆ ಬೌದ್ಧಧರ್ಮದ ಐತಿಹಾಸಿಕ ಆಗಮನವನ್ನು ಸೂಚಿಸುತ್ತದೆ.…
ಹೊಸ ದೆಹಲಿ.10.ಜೂನ್.25:- ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡು, ಕೇರಳ, ಮಾಹೆ, ಒಡಿಶಾ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್…
ಹೊಸ ದೆಹಲಿ.10.ಜೂನ್.25:- ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ…
ಹೊಸ ದೆಹಲಿ.10.ಜೂನ್.25:- ಭಾರತವು ತನ್ನ ಯುವ ಪ್ರತಿಭೆ ಮತ್ತು ತಾಂತ್ರಿಕ ನಾವೀನ್ಯತೆಗಳ ಬಲದ ಮೂಲಕ ಸಮಕಾಲೀನ ಸವಾಲುಗಳನ್ನು ಎದುರಿಸುವಲ್ಲಿ ಜಾಗತಿಕ…
ಹೊಸ ದೆಹಲಿ.10.ಜೂನ್.25:- ಗಡಿ ಪ್ರದೇಶಗಳಲ್ಲಿ ಹಾನಿಗೊಳಗಾದ 2,060 ಮನೆಗಳಿಗೆ ಸರ್ಕಾರ ಹೆಚ್ಚುವರಿ 25 ಕೋಟಿ ರೂಪಾಯಿಗಳನ್ನು ಒದಗಿಸಲಿದೆ. ಆಪರೇಷನ್ ಸಿಂಧೂರ್…