ಬೆಂಗಳೂರು.24.ಮೇ.25:- ಉನ್ನತ ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಅನುದಾನಿತ ಖಾಸಗಿ ಕಾಲೇಜುಗಳಲ್ಲಿ ಕೆಲವು ಉಪನ್ಯಾಸಕರು ತರಗತಿಗೆ ಗೈರಾಗಿ ಅನ್ಯ ಕೆಲಸಗಳಲ್ಲಿ ವ್ಯಸ್ತರಾಗಿರುತ್ತಾರೆ ಎಂಬ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಉನ್ನತ ಶಿಕ್ಷಣ ಇಲಾಖೆಯು ಉಪನ್ಯಾಸಕರ ಬೋಧನೆ ಮೇಲೆ ನಿಗಾಕ್ಕೆ ಮುಂದಾಗಿದೆ.
ರಾಜ್ಯದಲ್ಲಿ ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಪ್ರಾಧ್ಯಾಪಕರು ವಾರದಲ್ಲಿ ಒಟ್ಟು 40 ತಾಸು ಕಾರ್ಯಭಾರ ನಿರ್ವಹಿಸಬೇಕೆಂದು ಸೂಚಿಸಿ ಕಾರ್ಯಭಾರ ಹಂಚಿಕೆ ಮಾಡಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ 2009ರಲ್ಲಿಯೇ ಆದೇಶ ನೀಡಿತ್ತು. ಹಾಗೆಯೇ ಕಾರ್ಯಭಾರ ನಿರ್ವ ಹಣೆಯ ದಿನಚರಿ ನಿರ್ವಹಿಸುವಂತೆ ಸೂಚಿಸಿತ್ತು.ಆದರೆ ಉಪನ್ಯಾಸಕರು ಸರಿಯಾಗಿ ತರಗತಿಗೆ ಹಾಜರಾಗದಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಇನ್ನು ಮುಂದೆ ಉಪನ್ಯಾಸಕರು ದಿನಚರಿ ನಿರ್ವಹಿಸಿ, ವಾರದ ಕೊನೆಯಲ್ಲಿ ವಿಭಾಗ ಮುಖ್ಯಸ್ಥರ ಪರಿಶೀಲನೆಗೆ ಒಳಪಡಿಸಿ ಸಹಿ ಪಡೆಯಬೇಕು. ಬಳಿಕ ತಿಂಗಳ ಕೊನೆಗೆ ಪ್ರಾಂಶುಪಾಲರಲ್ಲಿ ಹಾಜರುಪಡಿಸಿ ಸಹಿ ಪಡೆಯಬೇಕು. ವಾರ್ಷಿಕವಾರು ದಿನಚರಿಯನ್ನು ನಿರ್ವಹಿಸಿ ಮೇಲಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿದಾಗ ಹಾಜರುಪಡಿಸಬೇಕಿದೆ.
ಬೋಧಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ್ದರೂ ಅವರು ನಿಗದಿತ ಅವಧಿಯ ಕಾರ್ಯ ನಿರ್ವಹಿಸದಿರುವ ಬಗ್ಗೆ ಹಲವು ದೂರುಗಳು ಬಂದಿದ್ದವು. ಈ ಲೋಪ ವನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ ಈಗ ಕಾರ್ಯಭಾರ ನಿರ್ವಹಣೆಯ ದಿನಚರಿ ಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿ ಸುವುದರ ಜತೆಗೆ ದಿನಚರಿಯ ಮೇಲೆ ನಿಗಾ ಇಡುವ ಕ್ರಮ ಜಾರಿಗೆ ತಂದಿದೆ.
-ಎನ್. ಮಂಜುಶ್ರೀ, ಆಯುಕ್ತೆ,
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…