ಬೆಂಗಳೂರು: 28.ಜನೆವರಿ.25.ಉನ್ನತ ಶಿಕ್ಷಣ ಇಲಾಖೆಯ. ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರೂ ಸೇರಿದಂತೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಐದು ಸಾವಿರ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು.
ರಾಜ್ಯ ಸರ್ಕಾರ ಮತ್ತೆ ಕಾಲೇಜು ಶಿಕ್ಷಣ ಇಲಾಖೆಗೆ ನೂತನವಾಗಿ ನೇಮಕವಾದ ಸಹಾಯಕ ಪ್ರಾಧ್ಯಾಪಕರಿಗೆ ಸೋಮವಾರ ಹಮ್ಮಿಕೊಂಡಿದ್ದ ‘ಹೊಸ ಹಾದಿ’ ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ರಾಜ್ಯ ದಲ್ಲಿ 2021ರಲ್ಲಿ ಆರಂಭವಾದ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಹಲವು ವಿಘ್ನಗಳು ಎದುರಾಗಿದ್ದವು. ವಿಶೇಷ ವರ್ಗಾವಣೆ, ಕಲ್ಯಾಣ ಕರ್ನಾಟಕ ಮೀಸಲಾತಿ ಹಂಚಿಕೆ, ನ್ಯಾಯಾಲಯದ ಪ್ರಕರಣ ಸೇರಿದಂತೆ ಎಲ್ಲ ಸಮಸ್ಯೆಗಳನ್ನೂ ಇತ್ಯರ್ಥಪಡಿಸಿಕೊಂಡು ನೇಮಕಾತಿ ಆದೇಶ ನೀಡಲಾಗಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಕೌಶಲ ಕಲಿಕೆಗೆ ಆದ್ಯತೆ ನೀಡಲಾಗಿದ್ದು, ಹಲವು ಹೊಸ ಕೋರ್ಸ್ಗಳನ್ನು ಪರಿಚಯಿಸಲಾಗಿದೆ. ಹೊಸದಾಗಿ ನೇಮಕವಾದವರು ಗುಣಮಟ್ಟದ ಬೋಧನೆಯತ್ತ ಗಮನಹರಿಸಬೇಕು ಎಂದರು.
ಕಾರ್ಯಾಗಾರ ಉದ್ಘಾಟಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಾಜದ ಬಹುಮುಖ್ಯ ಆಧಾರ ಸ್ತಂಭಗಳಲ್ಲಿ ಶಿಕ್ಷಕ ಸಮುದಾಯವೂ ಒಂದು. ಭವಿಷ್ಯದ ಉತ್ತಮ ನಾಗರಿಕರನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ.
ಸರ್ಕಾರ ಲಂಚ ಪಡೆಯದೆ, ಶಿಫಾರಸು ಇಲ್ಲದೆ ಎಲ್ಲರಿಗೂ ನೇಮಕಾತಿ ಆದೇಶ ನೀಡಿದೆ. ಅಂತಹ ದಾರಿಯಲ್ಲಿ ಅಧ್ಯಾಪಕರು ನಡೆದು, ಸಮಾಜಕ್ಕೆ ಆಸ್ತಿಯಾಗುವಂತಹ ವಿದ್ಯಾರ್ಥಿಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.
ಇದು ಸಾಮಾಜಿಕ ಜಾಲತಾಣಗಳ ಯುಗ. ಶಿಕ್ಷಕ ತಪ್ಪು ಹೇಳಿದರೆ ಕ್ಷಣಾರ್ಧದಲ್ಲಿ ಗುರುತಿಸಲಾಗುತ್ತದೆ. ಹಾಗಾಗಿ, ಸಾಕಷ್ಟು ಸಿದ್ಧತೆ ಇರಬೇಕು. ಪಠ್ಯ ಹೊರತಾದ ವಿಷಯಗಳ ಕಲಿಕೆಗೂ ಆದ್ಯತೆ ನೀಡಬೇಕು ಎಂದರು.
ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಎನ್. ಮಂಜುಶ್ರೀ, ಆಡಳಿತಾಧಿಕಾರಿ ಶೋಭಾ ಉಪಸ್ಥಿತರಿದ್ದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ. ಸಹಾಯಕ ಪ್ರಾಧ್ಯಾಪಕ ಹುದ್ದೆ ಅತೀ ಶೀಘ್ರದಲ್ಲಿ ಭರ್ತಿ ಮಾಡಲು ಸರಕಾರ ಸಿದ್ಧತೆ ಮಾಡ್ಕೊಂಡಿದೆ.
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…