ಮೈಸೂರು.04.ಜೂನ್.25:- ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿರುವ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ 28 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟೆಂಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೋಗ್ರಾಮ್ ಮ್ಯಾನೇಜರ್, ಲ್ಯಾಬೊರೇಟರಿ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಕಂಪ್ಯೂಟರ್ ಅಸಿಸ್ಟೆಂಟ್ ಸೇರಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಸಂದರ್ಶನದ ಮೂಲಕ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಯಾವುದೇ ಸ್ನಾತಕೋತ್ತರ ಪದವಿ ಪಡೆದವರು ಹುದ್ದೆಗಳಿಗೆ ಅನುಸಾರವಾಗಿ ಜೂನ್ 9ರಿಂದ ಆರಂಭವಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆ ಮೂಲಕ ಮೈಸೂರಿನಲ್ಲಿ ಒಳ್ಳೆಯ ಹುದ್ದೆ ಗಿಟ್ಟಿಸಿಕೊಳ್ಳಬಹುದಾಗಿದೆ.
ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು (RIE Mysore) ಇವರು ಅಸಿಸ್ಟೆಂಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೋಗ್ರಾಮ್ ಮ್ಯಾನೇಜರ್, ಲ್ಯಾಬೊರೇಟರಿ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಕಂಪ್ಯೂಟರ್ ಅಸಿಸ್ಟಂಟ್ ಸೇರಿದಂತೆ ವಿವಿಧ ಒಟ್ಟು 28 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದಾರೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ :
ಅಸಿಸ್ಟೆಂಟ್ ಪ್ರೊಫೆಸರ್ : 18
ಅಸಿಸ್ಟೆಂಟ್ ಪ್ರೋಗ್ರಾಮ್ ಮ್ಯಾನೇಜರ್ : 1
ಲ್ಯಾಬೊರೇಟರಿ ಅಸಿಸ್ಟೆಂಟ್ : 5
ಜ್ಯೂನಿಯರ್ ಪ್ರಾಜೆಕ್ಟ್ ಫೆಲೊ : 2
ಪ್ರಾಜೆಕ್ಟ್ ಅಸಿಸ್ಟೆಂಟ್ : 1
ಕಂಪ್ಯೂಟರ್ ಅಸಿಸ್ಟೆಂಟ್: 1
ವಿದ್ಯಾರ್ಹತೆ ಏನು?
ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಎಂ.ಎ, ಎಂ.ಎಡ್, ಎಂ.ಎಸ್ಸಿ, ಎಂ.ಫಿಲ್, ಪಿಎಚ್.ಡಿ, ಬಿಎಸ್ಸಿ ಸೇರಿ ಹಲವು ಪದವೀಧರರು ಸಂದರ್ಶನಕ್ಕೆ ಹಾಜರಾಗಬಹುದು. ಹುದ್ದೆಗಳಿಗೆ ಅನುಗುಣವಾಗಿ 45 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ
ಸ್ಥಳ : Regional Institute of Education, Mysuru-570006, Karnataka
ದಿನಾಂಕಗಳು :
ಅಸಿಸ್ಟೆಂಟ್ ಪ್ರೊಫೆಸರ್: ಜೂನ್ 9 ಹಾಗೂ 10 09th & 10th June 2025
ಅಸಿಸ್ಟೆಂಟ್ ಪ್ರೋಗ್ರಾಮ್ ಮ್ಯಾನೇಜರ್: ಜೂನ್ 10
ಲ್ಯಾಬೊರೇಟರಿ ಅಸಿಸ್ಟೆಂಟ್, ಜ್ಯೂನಿಯರ್ ಪ್ರಾಜೆಕ್ಟ್ ಫೆಲೊ: ಜೂನ್ 11
ಪ್ರಾಜೆಕ್ಟ್ ಅಸಿಸ್ಟೆಂಟ್, ಕಂಪ್ಯೂಟರ್ ಅಸಿಸ್ಟೆಂಟ್: ಜೂನ್ 12
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…