ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸೋಣ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.23.ಏಪ್ರಿಲ್.25: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಏ.30 ರಂದು ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿoದ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.30 ರಂದು ನಡೆಯುವ ಬಸವ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಏಪ್ರಿಲ್.30 ರಂದು ಬೆಳಿಗ್ಗೆ 8: 30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪೂಜೆ ಸಲ್ಲಿಸಲಾಗುವುದು. ನಂತರ ಮೆರವಣಿಗೆಗೆ ನಡೆಯಲಿದೆ ಮತ್ತು ಸಂಜೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಹಾಗೂ ಡಿಜೆ ಬಳಕೆಗೆ ಸಂಬAಧಿಸಿದAತೆ ಪೋಲಿಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಅಂದು ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಛೇರಿ, ಶಾಲಾ-ಕಾಲೇಜುಗಳಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಕಡ್ಡಾಯವಾಗಿ ಪೂಜೆ ಸಲ್ಲಿಸಬೇಕೆಂದರು. ಪೋಲಿಸ್ ಇಲಾಖೆ ವತಿಯಿಂದ ಬಂದೋಬಸ್ತ್ ನೀಡಲಾಗುವುದು ಎಂದು ತಿಳಿಸಿದರು.


ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷರಾದ ಜೈರಾಜ್ ಖಂಡ್ರೆ ಅವರು ಮಾತನಾಡಿ, ನಾವು ಬಸವ ಜಯಂತಿಯನ್ನು ಏಪ್ರಿಲ್ 28,29 ಮತ್ತು 30 ರವರೆಗೆ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ, ಏ.28 ರಂದು ಬೆಳಿಗ್ಗೆ ಗುಂಪಾದಿoದ ಪಾಪನಾಶದವರೆಗೆ ಬೈಕ್ ರ‍್ಯಾಲಿ ನಡೆಯಲಿದೆ ಹಾಗೂ ಸಂಜೆ 6 ಗಂಟೆಗೆ ಬಸವ ಜಯಂತಿ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಚಾಲನೆ ನೀಡಲಿದ್ದಾರೆ. ಏ.29ಕ್ಕೆ ರಂಗಮoದಿರದಲ್ಲಿ ವಚನ ಸಂಗೀತ ಕಾರ್ಯಕ್ರಮ, ಬಸವಾದಿ ಶರಣರ ವೇಷಭೂಷಣ ಮತ್ತು ನಾಟಕ ಕಾರ್ಯಕ್ರಮಗಳು ನಡೆಯಲಿವೆ ಮತ್ತು ಏ.30 ರಂದು ಸಂಜೆ 6 ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಜಿಲ್ಲಾಧಿಕಾರಿಗಳು ವಚನ ಬೋಧಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಬೇಕು ಎಂದು ತಿಳಿಸಿದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ ಮಾತನಾಡಿ, ಬೀದರ ಜಿಲ್ಲೆಗೆ ಬಾಗಲಕೋಟೆ ಜಿಲ್ಲೆಯಿಂದ ಅನುಭವ ಮಂಟಪ ಬಸವಾದಿ ಶರಣರ ವೈಭವ ಕಾರ್ಯಕ್ರಮದ ರಥಯಾತ್ರೆ ಇದೇ ಏ. 23 ರಂದು ಜಿಲ್ಲೆಗೆ ಬರಲಿದ್ದು, ಏ.24ಕ್ಕೆ ಬೆಳಿಗ್ಗೆ 9:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಥಯಾತ್ರೆಗೆ ಪೂಜೆ ಸಲ್ಲಿಸಲಾಗುವುದು ಎಂದು ತಿಳಿಸಿದರು.


ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಗಿರೀಶ ಬದೋಲೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಚಂದ್ರಕಾAತ ಪೂಜಾರಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಮುಖಂಡರಾದ ಶಿವಶರಣಪ್ಪ ವಾಲಿ, ವೈಜಿನಾಥ ಕಂಠಾಣೆ, ಬಾಬು ವಾಲಿ, ಬಸವರಾಜ ಉಳ್ಳ, ರಾಜೇಂದ್ರ ಗಂದಗೆ, ಸುರೇಶ್ ಸ್ವಾಮಿ, ಸಂಜು ಕುಮಾರ್ ಪಾಟೀಲ್, ವಿಜಯಕುಮಾರ ಪಾಟೀಲ, ಸೋಮಶೇಖರ ಅಮಲಾಪೂರೆ, ಮಾರುತಿ ಬೌದ್ಧೆ, ವಿಜಯಕುಮಾರ ಸೊನಾರೆ ಸೇರಿದಂತೆ ಸಮಾಜದ ವಿವಿಧ ಮುಖಂಡರು ಉಪಸ್ಥಿತರಿದ್ದರು.

prajaprabhat

Recent Posts

ಆಶಾ ಮಾರ್ಗದರ್ಶಕರ (ASHA Mentors) ಹುದ್ದೆಗಳು ಅಗತ್ಯವಿಲ್ಲವೆಂದು ‘ಕರ್ತವ್ಯದಿಂದ ಮುಕ್ತ’ಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.13.ಜೂನ್.25:- ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ…

18 minutes ago

ಬೆಂಗಳೂರಿನಿಂದ ಬೀದರ್‌ಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ: ಕಲ್ಯಾಣ ಕರ್ನಾಟಕದ ಜನತೆಗೆ ಹೊಸ ಸಂಪರ್ಕದ ನೂತನ

ಬೆಂಗಳೂರು.13.ಜೂನ್.25:- ಬೀದರ್ ಬೆಂಗಳೂರು ಮತ್ತೊಂದು ವಿಶೇಷ ಟ್ರೈನ್ ಇದೇ 15 ಜೂನ್ ರಿಂದ ಪ್ರಾರಂಭ ಆಗ್ತಿದೆ. ಈ ಟ್ರೈನ್ ಕರ್ನಾಟಕದ…

36 minutes ago

ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು.13.ಜೂನ್ .25:- ರಾಜ್ಯ ಸರ್ಕಾರಿ ನೌಕರರಿಗೆ 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ…

49 minutes ago

ಅತಿಥಿ ಶಿಕ್ಷಕರ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ.

ಬಳ್ಳಾರಿ.13.ಜೂನ್.25:- ರಾಜ್ಯದಲ್ಲಿ ಏಕಲವ್ಯ ಮಾದರಿ ಸ್ಕೂಲ್ ಗಳಲ್ಲಿ ಬೇಕಾಗಿರುವ ಶೀಕ್ಷಕರ ಹುದ್ದೆಗಳು ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ…

1 hour ago

SC/ST ಮೇಲಿನ ದಾಖಲಾಗುವ ಪ್ರಕರಣಗಳನ್ನು DCRE ಪೊಲೀಸ್ ಠಾಣೆಗಳಿಗೆ ವರ್ಗಾಯಿಸಲು ಸೂಚಿಸಲಾಗಿದೆ.

ಬೆಂಗಳೂರು.13.ಜೂನ್.25:- ರಾಜ್ಯದ ಡಿಸಿಆರ್‌ಇ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸುವ ಮತ್ತು…

6 hours ago

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, 4,500 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸ ದೆಹಲಿ.13.ಜೂನ್.25:- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2025-26ರ ಹಣಕಾಸು ವರ್ಷದ ನೇಮಕಾತಿಯ ಭಾಗವಾಗಿ 4,500 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ.…

6 hours ago