ಸಾರ್ವಜನಿಕರ ಪ್ರಾಯಾಣಕ್ಕೆ ತೊಂದರೆಯಾಗದಿರಲಿ- ಜಿಲ್ಲಾಧಿಕಾರಿ ಸುರೇಶ ಇಟ್ನಾಳ

ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು.

ಅವರು ಶನಿವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಾರಿಗೆ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗದ ಅಧಿಕಾರಿಗಳು ಮತ್ತು ಖಾಸಗಿ ವಾಹನ ಚಾಲಕರ ಅಸೋಶಿಯೆಷನ್ ಅವರೊಂದಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರಕ್ಕೆ ಹೋಗುವುದಾಗಿ ಹೇಳಿದ್ದು, ಇದಕ್ಕಾಗಿ ಕೆಲವು ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವುದಾಗಿ ಸರ್ಕಾರದ ಕಾರ್ಯದರ್ಶಿಗಳು ನಿರ್ದೇಶನ ನೀಡಿದ್ದಾರೆ.

ಪ್ರತಿ ದಿನ ಕೊಪ್ಪಳ ಜಿಲ್ಲೆಯಲ್ಲಿ 1400ಕ್ಕೂ ಟ್ರಿಪ್‌ಗಳಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಸುಮಾರು 320 ಬಸ್‌ಗಳ ಓಡಾಟವಿದ್ದು, ಮುಷ್ಕರದಿಂದಾಗಿ ಸಾರ್ವಜನಿಕರ ಪ್ರಯಾಣದಲ್ಲಿ ವ್ಯತ್ಯಯ ಉಂಟಾಗಬಹುದು. ಇದರ ನಿರ್ವಹಣೆಗಾಗಿ ಸೂಕ್ತ ಸಿದ್ಧತೆಗಳನ್ನು ಕೈಗೊಳ್ಳಬೇಕು. ಕ.ಕ.ಸಾ.ನಿ ಕೊಪ್ಪಳ ವಿಭಾಗದಲ್ಲಿರುವ ಹೊರಗುತ್ತಿಗೆ ನೌಕರರ ಪಟ್ಟಿಯನ್ನು ಸಿದ್ದಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು.

ಮುಷ್ಕರ ಸಂದರ್ಭದಲ್ಲಿ ಹೊರಗುತ್ತಿಗೆ ಸಾರಿಗೆ ನೌಕರರಿಗೆ ಯಾವುದೇ ರೀತಿಯ ರಜೆ ನೀಡುವಂತಿಲ್ಲ. ಅವಶ್ಯವಿದ್ದಲ್ಲಿ ಜಿಲ್ಲೆಯ ಕಾರ್ಖಾನೆಗಳ ಬಸ್‌ಗಳ ಬಳಕೆಗೆ ಕ್ರಮ ವಹಿಸಿ. ಪ್ರಯಾಣಿಕರಿಗಾಗಿ ಎಲ್ಲಾ ಬಸ್ ನಿಲ್ದಾಣಗಳಲ್ಲಿ ವಿಶೇಷ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಬೇಕು ಮತ್ತು ಆರ್.ಟಿ.ಓ ಕಛೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಆರಂಭಿಸುವoತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಹಿಂದೆಯೂ ಕೆ.ಎಸ್.ಆರ್.ಟಿ ನೌಕರರ ಮುಷ್ಕರದ ಸಂದರ್ಭದಲ್ಲಿ ಖಾಸಗಿ ಮ್ಯಾಸ್ಕಿ ಕ್ಯಾಬ್, ಟಂಟಂಗಳು, ಆಟೋಗಳು ಮತ್ತು ಖಾಸಗಿ ಬಸ್‌ಗಳನ್ನು ಬಳಕೆ ಮಾಡಿಕೊಂಡು ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿತ್ತು. ಅದೇ ರೀತಿಯ ವ್ಯವಸ್ಥೆಗಳನ್ನು ಕೈಗೊಳ್ಳಲು ಸಾರಿಗೆ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು. ಇದಕ್ಕಾಗಿ ಜಿಲ್ಲೆಯ ಖಾಸಗಿ ವಾಹನ ಚಾಲಕರ ಅಸೋಶಿಯೆಷನ್‌ವರು ಸಹಕಾರ ನೀಡಬೇಕು. ಈ ಪರಿಸ್ಥಿತಿಯನ್ನು ಖಾಸಗಿ ವಾಹನ ಚಾಲಕರು ದುರುಪಯೋಗ ಪಡೆಸಿಕೊಂಡು ನಿಯಮಕ್ಕೂ ಮೀರಿ ಹೆಚ್ಚಿನ ಪ್ರಯಾಣ ದರ ಪಡೆಯುವುದು ಮತ್ತು ಪ್ರಯಾಣಿಕರೊಂದಿಗೆ ಅಸಭ್ಯವರ್ತನೆ ಮಾಡುವುದು ಕಂಡುಬoದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಎಲ್ಲರೂ ಸೇರಿ ಈ ಪರಿಸ್ಥಿತಿಯನ್ನು ನಿಭಾಯಿಸಬೇಕು. ಕೊಪ್ಪಳ ಜಿಲ್ಲೆಯಲ್ಲಿ ಯವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಹೇಳಿದರು.

ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಮಾತನಾಡಿ, ಸಾರಿಗೆ ನೌಕರರ ಮುಷ್ಕರ ಸಂದರ್ಭದಲ್ಲಿ ಸಾರ್ವಜನಿಕರ ಪ್ರಯಾಣಕ್ಕೆ ಯಾವುದೇ ತೊಂದರೆಯಾಗಬಾರದು. ಇದಕ್ಕಾಗಿ ಸ್ಥಳೀಯ ಖಾಸಗಿ ವಾಹನಗಳ ಚಾಲಕರು ಸಹಕಾರ ನೀಡಬೇಕು. ಪ್ರಯಾಣಕ್ಕೆ ನಿಗದಿಯಾಗಿರುವ ಸಮಾನ್ಯ ಮೊತ್ತಕ್ಕಿಂತ ಹೆಚ್ಚಿನ ಮೊತ್ತವನ್ನು ಸ್ವೀಕರಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಎಲ್ಲಾ ಬಸ್‌ನಿಲ್ದಾಣ ಮತ್ತು ಡಿಪೋಗಳಲ್ಲಿ ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗುವುದು. ಅಗತ್ಯ ಸಂದರ್ಭದಲ್ಲಿ ಪೊಲೀಸ್ ಸಹಾಯಕ್ಕಾಗಿ ಸಾರ್ವಜನಿಕರು 112 ಗೆ ಕರೆ ಮಾಡಬಹುದಾಗಿದೆ ಎಂದರು.

ಸಭೆಯಲ್ಲಿ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಆರ್.ಬಿ. ಜಾಧವ್, ಕೊಪ್ಪಳ ವಿಭಾಗೀಯ ಸಂಚಾರ ಅಧಿಕಾರಿ ಪರಮೇಶ್ವರಪ್ಪ, ಕಾರ್ಮಿಕ ಕಲ್ಯಾಣಾಧಿಕಾರಿ ಸತ್ಯನಾರಾಣ ಸೇರಿದಂತೆ ಸಾರಿಗೆ ಇಲಾಖೆಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು, ಖಾಸಗಿ ವಾಹನಗಳ ಅಸೋಶಿಯೆಷನ್‌ನವರು ಹಾಗೂ ವಾಹನ ಚಾಲಕರು ಉಪಸ್ಥಿತರಿದ್ದರು.

prajaprabhat

Recent Posts

ಜನಸಂಖ್ಯಾ ಸ್ಪೋಟದಿಂದ ದೇಶಕ್ಕೆ ಆಘಾತಕಾರಿ ಸಮಸ್ಯೆ: ಡಾ.ದಂಡಪ್ಪ ಬಿರಾದಾರ ಕಳವಳ

ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…

2 hours ago

ಜಿಲ್ಲೆಯ ಬೆಳೆಗಳ ಬೆಳವಣಿಗೆ ಮತ್ತು ರಸಗೊಬ್ಬರದ ದಾಸ್ತಾನು ವಿವರವನ್ನು

ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…

2 hours ago

ಜವಾಹರ ನವೋದಯ ವಿದ್ಯಾಲಯದಲ್ಲಿ ಪಿಯುಸಿಗೆ ಪ್ರವೇಶ ಆರಂಭ

ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…

3 hours ago

ಒಪೆಕ್ ಆಸ್ಪತ್ರೆಯಲ್ಲಿನ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆ ನ್ಯಾಯಾಲಯ ಆದೇಶದಂತೆ ಮುಂದೂಡಿಕೆ

ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…

3 hours ago

ಆಗಸ್ಟ್ 7ರಂದು ಗೌರಿ ಗಣೇಶ ಹಬ್ಬದ ಪೂರ್ವಭಾವಿ ಸಭೆ

ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…

3 hours ago

ಶಾಸಕರಾದ ಬಸನಗೌಡ ದದ್ಧಲ್ ಅವರಿಂದ ರಾಯಚೂರ<br>ಗ್ರಾಮೀಣ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

ರಾಯಚೂರು.03.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

3 hours ago