ಸಾರ್ವತ್ರಿಕ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಆದೇಶಿಸಲಾಗಿದೆ.

ಬೆಂಗಳೂರು.02.ಜೂನ್.25:-ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ಸಾರ್ವತ್ರಿಕ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರವು ಹೊರಡಿಸಿದೆ.

ಸರ್ಕಾರದ ಉಲ್ಲೇಖಿತ 09 ರ ಆದೇಶದಲ್ಲಿ ವರ್ಗಾವಣೆಯ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದಲ್ಲಿ ನಮೂದಿಸಿರುವ ಷರತ್ತುಗಳೊಂದಿಗೆ ಪ್ರಸ್ತುತ 2025-26 ನೇ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಸಂಬಂಧಿಸಿದ ವೃಂದದ ಕಾರ್ಯನಿರತ ವೃಂದ ಬಲದ (working strength) ಶೇಕಡ 6 ಕ್ಕೆ ಸೀಮಿತಗೊಳಿಸಿ ದಿನಾಂಕ: 14-06-2025 ರೊಳಗೆ ಪೂರ್ಣಗೊಳಿಸಲು ಆದೇಶಿಸಲಾಗಿದೆ.

2025-26ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ವೃಂದದ ಸಿಬ್ಬಂದಿಗಳ ವರ್ಗಾವಣೆಯನ್ನು, ಒಂದೇ ಸ್ಥಳದಲ್ಲಿ ಸಲ್ಲಿಸಿರುವ ಸೇವಾ ಅವಧಿಯ ಆಧಾರದಲ್ಲಿನ ಗ್ರೇಸ್ ಅಂಕಗಳ ಜೇಷ್ಮತೆಯನ್ನು ಪರಿಗಣಿಸಿ, ಆನ್ ಲೈನ್ ಮುಖಾಂತರದಲ್ಲಿ, ಏಕ ಪಟ್ಟಿ ಮಾದರಿಯಲ್ಲಿ ಕೌನ್ಸಿಲಿಂಗ್ ಮುಖೇನ ನಿಗದಿತ ಮಿತಿಯೊಳಗೆ ವರ್ಗಾವಣೆ ಮಾಡಲು ನಿರ್ಧರಿಸಲಾಗಿದ್ದು, ಮಾರ್ಗಸೂಚಿಯನ್ವಯ ಅಗತ್ಯ ಕ್ರಮ ತೆಗೆದುಕೊಳ್ಳಲು ಮೈಸೂರು ಮತ್ತು ಬೆಂಗಳೂರು ವಿಭಾಗಗಳ ಸಕ್ಷಮ ಪ್ರಾಧಿಕಾರಕ್ಕೆ ಸೂಚಿಸಿದ.

ಸಕಮ ಪ್ರಾಧಿಕಾರ ಮತ್ತು ವರ್ಗಾವಣೆ ಮಿತಿ:

ಈ ಕೆಳಕಂಡಂತೆ ನಿಗಧಿಪಡಿಸಿರುವ ಸಕ್ಷಮ ಪ್ರಾಧಿಕಾರವು ಜೇಷ್ಟತಾ ಘಟಕದ ವ್ಯಾಪ್ತಿಯಲ್ಲಿ ಬೋಧಕೇತರ ಸಿಬ್ಬಂದಿಯ ವರ್ಗಾವಣೆಯನ್ನು ಕಂಡಿಕೆ 04 ರಲ್ಲಿ ನಿಗದಿಪಡಿಸಿರುವ ಶೇಕಡಾವಾರು ಪ್ರಮಾಣ ಮೀರದಂತೆ ನಿರ್ದಿಷ್ಟಪಡಿಸಿದ ದಿನಾಂಕದಂದು ಕೌನ್ಸಿಲಿಂಗ್ ಮುಖೇನ ಮಾರ್ಗಸೂಚಿಯನ್ನು ಅನುಸರಿಸಿ ವರ್ಗಾವಣೆಗೆ ಕ್ರಮ ವಹಿಸಲು ತಿಳಿಸಲಾಗಿದೆ.

ವರ್ಗಾವಣೆಗಳು ಸಂಪೂರ್ಣವಾಗಿ ಆನ್ ಲೈನ್ ಮಾದರಿಯಲ್ಲಿರುತ್ತವೆ. ಪುಯುಕ್ತ ಅರ್ಜಿದಾರರ ಎಲ್ಲಾ ಸೇವಾ ವಿವರಗಳು, ಆದ್ಯತೆ/ ಕೋರಿಕೆ ವಿವರಗಳು, ಮತ್ತಿತರೆ ಎಲ್ಲಾ ಪೂರಕ ವಿವರಗಳನ್ನು ಕಡ್ಡಾಯವಾಗಿ ಇಇಡಿಎಸ್ ನಿಂದಲೇ ಪಡೆಯಲಾಗುವುದರಿಂದ ಇಇಡಿಎಸ್‌ನಲ್ಲಿ ಎಲ್ಲಾ ವಿವರಗಳನ್ನು ಕಡ್ಡಾಯವಾಗಿ ಇಇಡಿಎಸ್ ವೇಳಾಪಟ್ಟಿಯಂತೆ ಎಲ್ಲಾ ಸಿಬ್ಬಂದಿಗಳು ಇಂದೀಕರಿಸಿರತಕ್ಕದ್ದು. ಅರ್ಜಿ ಸಲ್ಲಿಸಲು ಅರ್ಹತೆಗೆ ಕನಿಷ್ಟ ಸೇವಾ ಅವಧಿ ಇತ್ಯಾದಿ ಎಲ್ಲಾ ಲೆಕ್ಕಾಚಾರಕ್ಕೆ ಅಧಿಸೂಚನೆಯ ದಿನಾಂಕವನ್ನು ಪರಿಗಣಿಸಲಾಗುವುದು.

ಸಕಮ ಪ್ರಾಧಿಕಾರಿಗಳು, ವರ್ಗಾವಣೆಯ ಪ್ರಮಾಣ ಹಾಗೂ ವರ್ಗಾವಣೆಯ ಅನುಕ್ರಮಣಿಕೆ.

ಸರ್ಕಾರದ ಉಲ್ಲೇಖಿತ (9) ರ ಆದೇಶದಂತೆ 2025-26 ನೇ ಸಾಲಿನಲ್ಲಿ ಇಲಾಖೆಯಿಂದ ಬೋಧಕೇತರ ‘ಸಿ’ ಮತ್ತು ‘ಡಿ’ ವೃಂದಗಳ ಕಾರ್ಯನಿರತ ವೃಂದ ಬಲದ ಒಟ್ಟು ಶೇ 6 ರನ್ನು ಮೀರದಂತೆ ವರ್ಗಾವಣೆಗಳನ್ನು ಮಾಡಲು ಆದೇಶಿಸಲಾಗಿದೆ.

ವರ್ಗಾವಣೆಯನ್ನು ಕೋರುವ ಆಯಾ ವೃಂದದ ಎಲ್ಲಾ ಅರ್ಜಿಗಳ ಕುರಿತಂತೆ ಒಂದೇ ಪಟ್ಟಿಯಂತೆ ಅಂಕಗಳ ಜೇಷ್ಟತೆಯನ್ನು ಪರಿಗಣಿಸಿ, ROUND ROBIN ಮಾದರಿಯಲ್ಲಿ ನಡೆಸಲಾಗುವುದು. ಆಯಾ ಜಿಲ್ಲಾ ಕೇಂದ್ರಗಳಲ್ಲಿಯೇ ಆಯಾ ಅರ್ಜಿದಾರರು ಹಾಜರಾಗಿ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಿದೆ.

ಆನ್‌ಲೈನ್ ನಲ್ಲಿ ಕೌನ್ಸಿಲಿಂಗ್‌ ಕೈಗೊಂಡು, ಆಯಾ ವೃಂದಗಳ ಮತ್ತು ವ್ಯಾಪ್ತಿಗೆ ಸಂಬಂಧಿಸಿದ ಪ್ರಾಧಿಕಾರಿಯವರು ಆನ್‌ಲೈನ್ ಪೋರ್ಟ್‌ಲ್‌ನಿಂದ, ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ವರ್ಗಾವಣಾ ಆದೇಶಗಳನ್ನು (ಪರಸ್ಪರ ವರ್ಗಾವಣೆಗಳು ಸೇರಿದಂತೆ] ಜನರೇಟ್ ಮಾಡಿಕೊಂಡು ನಿಯಮಾನುಸಾರ ನಿಗದಿತ ವೇಳೆಯೊಳಗೆ ವಿತರಿಸಲು ಕ್ರಮವಹಿಸತಕ್ಕದ್ದು.

ಈ ಮೇಲ್ಕಂಡ ರೀತ್ಯ ನಿಗದಿಪಡಿಸಿರುವ (ಪ್ರತಿಶತ 6) ವರ್ಗಾವಣೆಗಳಲ್ಲಿ, ಕೋರಿಕೆ, ದೂರು ಹಾಗೂ ಒಂದೇ ಕಛೇರಿಯಲ್ಲಿ ಗರಿಷ್ಠ ಅವಧಿಯಲ್ಲಿರುವವರು ಸೇರಿದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವ ವರ್ಗಾವಣೆಗಳು ಇರುತ್ತವೆ. ಕೋರಿಕೆ ವರ್ಗಾವಣೆಗಳು ಆಯಾ ನಿಗದಿತ ಪ್ರಮಾಣದೊಳಗೆ ಗರಿಷ್ಠ ಶೇ. 80 ರಷ್ಟು ಇರುತ್ತವೆ. ದೀರ್ಘಾವಧಿ ಒಂದೇ ಸ್ಥಳದಲ್ಲಿರುವ ಪ್ರಕರಣಗಳಿಗೆ ಪ್ರತ್ಯೇಕವಾಗಿ ಶೇ 80ರ ಕೋರಿಕೆ ವರ್ಗಾವಣೆಗಳ ನಂತರದಲ್ಲಿ ಕೌನ್ಸಿಲಿಂಗ್ ಮುಖಾಂತರ ಇಲಾಖಾ ವತಿಯಿಂದಲೇ ಶೇಕಡ 20ರ ಮಿತಿಯಲ್ಲಿ ಕೈಗೊಳ್ಳಲಾಗುವುದು.

ಯಾವುದೇ ದೀರ್ಘಾವಧಿ ಸೇವಾ ಅವಧಿಯಲ್ಲಿರುವ ಸಿಬ್ಬಂದಿಗಳ ಪಟ್ಟಿಯನ್ನು ತಯಾರಿಸಿಕೊಂಡು ಗ್ರೇಸ್ ಅಂಕಗಳ ಆಧಾರದ ಮಾದರಿಯಲ್ಲಿಯೇ ಆದ್ಯತೆ /ವಿನಾಯಿತಿಗಳನ್ನು ಪರಿಗಣಿಸಿ, ಕೌನ್ಸಿಲಿಂಗ್‌ಗೆ ಮಾತ್ರ ಸಿಬ್ಬಂದಿಗಳನ್ನು ಇಲಾಖಾವತಿಯಿಂದಲೇ ಕರೆಯಲಾಗುತ್ತದೆ. ಈ ಕೌನ್ಸಿಲಿಂಗ್‌ನಲ್ಲಿ ಸ್ಥಳ ಆಯ್ಕೆ ಮಾಡಿಕೊಳ್ಳದಿದ್ದಲ್ಲಿ ಡಮ್ಮಿ ಕೌನ್ಸಿಲಿಂಗ್‌ ಮೂಲಕ ಸ್ಥಳ ನಿಯುಕ್ತಿಗೊಳಿಸಲಾಗುವುದು.

ಈ ಕುರಿತಂತೆಯೂ ಇಇಡಿಎಸ್ ನಿಂದಲೇ ಸೇವಾ ಮಾಹಿತಿಗಳನ್ನು /ಆದ್ಯತೆ ಮಾಹಿತಿಗಳನ್ನು ಪಡೆಯಲಾಗುವುದರಿಂದ ಇಇಡಿಎಸ್ ನಲ್ಲಿ ಇಂದೀಕೃತ ಮಾಹಿತ ಲಭ್ಯವಿರತಕ್ಕದ್ದು. ಇಂದೀಕರಿಸದೇ ಇದ್ದಲ್ಲಿ ಆದ್ಯತೆ/ ವಿನಾಯಿತಿಗಳು ತಪ್ಪಿದಲ್ಲಿ ಇಲಾಖೆಯು ಜವಾಬ್ದಾರಿಯಾಗುವುದಿಲ್ಲ.

ದೂರಿನ ಮೇಲೆ ವರ್ಗಾವಣೆಗಳಿದ್ದಲ್ಲಿ ಅವುಗಳಿಗೆ ಕೌನ್ಸಿಲಿಂಗ್ ಇರುವುದಿಲ್ಲ. ಇಲಾಖೆಯ ವತಿಯಿಂದಲೇ ಸ್ಥಳ ನಿಯುಕ್ತಿ ನೀಡಲಾಗುತ್ತದೆ. ಹಾಗೆಯೇ, ಸ್ಥಳೀಯ ವರ್ಗಾವಣೆಗಳನ್ನು (ಚಲನ-ವಲನ) ಕೋರುವ ಅರ್ಜಿದಾರರು ಆನ್ ಲೈನ್ ಅರ್ಜಿಯಲ್ಲಿ ಸದರಿ ಆಯ್ಕೆಯನ್ನು ಸೂಚಿಸಬೇಕಾಗುತ್ತದೆ. ಸ್ಥಳೀಯ ವರ್ಗಾವಣೆಗಳಿಗೆ ಸ್ಥಳೀಯ ಕಛೇರಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.

ಆನ್‌-ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸುವಾಗ 1) ಚಲನವಲನ (ಸ್ಥಳೀಯ ವರ್ಗಾವಣೆಯೇ?) 2) ಆಯುಕ್ತಾಲಯದ ಒಳಗಿನ ವರ್ಗಾವಣೆಯೇ? 3) ಅಂತರ ವರ್ಗಾವಣೆಯೇ? ಎಂಬುದರ ಆಯ್ಕೆಯನ್ನು ಅರ್ಜಿದಾರರು ತೋರಿಸಬೇಕಾಗುತ್ತದೆ.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

2 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

11 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

11 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

11 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

11 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

11 hours ago