ಸಿದ್ದರಾಮೇಶ್ವರರಿಂದ ಸಮಾಜಮುಖಿ ಕೆಲಸ: ಸಾಹಿತಿ ರಾಮಲಿಂಗ ಬಿರಾದಾರ

ಬೀದರ.12.ಫೆ.25:- ಇಂದುವಚನಾಮೃತ ಕನ್ನಡ ಸಂಘದಿಂದ ಭಾನುವಾರ ಸಂಜೆ ಶಿವಯೋಗಿ ಸಿದ್ದರಾಮೇಶ್ವರರಿಗೆ ಮಾನವ ಕುಲದ ಉದ್ಧಾರದ ಬಗ್ಗೆ ಅಪಾರ ಕಾಳಜಿ ಇತ್ತು.

ಹೀಗಾಗಿಯೇ ಅನೇಕ ಕೆರೆಗಳನ್ನು ಕಟ್ಟಿಸಿ ಸಮಾಜಮುಖಿ ಕೆಲಸ ಮಾಡಿದ್ದರು’ ಎಂದು ಸಾಹಿತಿ ರಾಮಲಿಂಗ ಬಿರಾದಾರ ಹೇಳಿದರು.

ವಚನಾಮೃತ ಕನ್ನಡ ಸಂಘದಿಂದ ಭಾನುವಾರ ಸಂಜೆ ನಗರದಲ್ಲಿ ಏರ್ಪಡಿಸಿದ್ದ ಸಿದ್ದರಾಮೇಶ್ವರರ ಕುರಿತ ಉಪನ್ಯಾಸ, ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.ಮನುಷ್ಯರಷ್ಟೇ ಅಲ್ಲ, ಪಶು, ಪಕ್ಷಿಗಳ ಬಗ್ಗೆಯೂ ಕಳಕಳಿ ಹೊಂದಿದ್ದರು ಎಂದರು.

ಕವಯತ್ರಿ ಸಾವಿತ್ರಿ ಮರೂರಕರ್ ಮಾತನಾಡಿ, 12ನೇ ಶತಮಾನದ ಶರಣರು ಬಸವಣ್ಣನವರ ಮಾರ್ಗದರ್ಶನದಲ್ಲಿ ಎಲ್ಲ ವರ್ಗದವರ ಕಲ್ಯಾಣಕ್ಕೆ ಶ್ರಮಿಸಿದ್ದರು. ವಚನ ಸಾಹಿತ್ಯ ರಚಿಸಿದ್ದರು ಎಂದು ಹೇಳಿದರು.

ಲೇಖಕಿಯರಾದ ರೇಣುಕಾ ಎನ್.ಬಿ., ಮಹಾನಂದಾ ಮಡಕಿ, ವೀರಶೆಟ್ಟಿ ಬಾವಗೆ, ಸೂರ್ಯಕಲಾ ಹೊಡಮನಿ, ಶ್ರೀದೇವಿ ಸೋಮಶೆಟ್ಟಿ, ಮಲ್ಲೇಶ್ವರಿ ಗಂದಿಗುಡೆ, ರಾಜೇಶ್ವರಿ ಹೂಗಾರ, ವಿದ್ಯಾವತಿ ಬಲ್ಲೂರ, ಸುನೀತಾ ದಾಡಗೆ, ಶ್ರೀದೇವಿ ಪಾಟೀಲ, ನಂದಿನಿ ಮಠಪತಿಯವರು ಸಿದ್ದರಾಮೇಶ್ವರರ ಕುರಿತ ಕವಿತೆಗಳನ್ನು ಓದಿದರು.

ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಅಧ್ಯಕ್ಷತೆ ವಹಿಸಿದ್ದರು. ಪ್ರವೀಣ ಮ್ಯೂಸಿಕ್ ಅಕಾಡೆಮಿಯವರು ನಾಡಗೀತೆ ಹಾಡಿದರು. ಜಯದೇವಿ ಯದಲಾಪೂರೆ ನಿರೂಪಿಸಿದರು. ಅಲಕಾವತಿ ಹೊಸದೊಡ್ಡೆ ಸ್ವಾಗತಿಸಿದರು. ಗಂಗಶೆಟ್ಟಿ ಖಾನಪೂರ ವಂದಿಸಿದರು.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

1 hour ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

6 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

7 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

7 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

7 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

8 hours ago