ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆ: ಜ್ಞಾನಸುಧಾ ಸಾಧಕ ವಿದ್ಯಾರ್ಥಿಗಳಿಗೆ ಹೃದಯಸ್ಪರ್ಶಿ ಸನ್ಮಾನ

ಬೀದರ.15.ಮೇ.25:- ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆ: ಜ್ಞಾನಸುಧಾ ಸಾಧಕ ವಿದ್ಯಾರ್ಥಿಗಳಿಗೆ ಹೃದಯಸ್ಪರ್ಶಿ ಸನ್ಮಾನ
ಸತತ ಪರಿಶ್ರಮದಿಂದ ಸಾಧನೆ: ಡಾ. ಪೂರ್ಣಿಮಾ ಜಿ.
ಬೀದರ್: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‍ಇ)ಯ ಪ್ರಸಕ್ತ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆಗೈದ ಜ್ಞಾನಸುಧಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಹೃದಯಸ್ಪರ್ಶಿಯಾಗಿ ಸನ್ಮಾನಿಸಲಾಯಿತು.


ನಗರದ ಮಾಮನಕೇರದಲ್ಲಿರುವ ಜ್ಞಾನಸುಧಾ ವಿದ್ಯಾಲಯದ ಜ್ಞಾನರಂಗ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ ಅಭಿನಂದನಾ  ಸಮಾರಂಭದಲ್ಲಿ ಪ್ರಸಕ್ತ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಅಮೋಘ ಸಾಧನೆಗೈದ 106 ವಿದ್ಯಾರ್ಥಿಗಳಿಗೆ ಮತ್ತು ಅವರ ಪಾಲಕರಿಗೆ ಆತ್ಮೀಯವಾಗಿ ಸನ್ಮಾನಿಸಿ, ಪ್ರೋತ್ಸಾಹಿಸಲಾಯಿತು.


ಸನ್ಮಾನ ಸಮಾರಂಭದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಪೂರ್ಣಿಮಾ ಜಿ. ಅವರು ಮಾತನಾಡಿ, ‘ಪ್ರಸಕ್ತ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ನಮ್ಮ ವಿದ್ಯಾಲಯ ಪ್ರತಿ ವರ್ಷದಂತೆ ಈ ವರ್ಷವೂ ಅತ್ಯುತ್ತಮ ಫಲಿತಾಂಶ ಸಾಧಿಸಿದೆ. ಜ್ಞಾನಸುಧಾ ವಿದ್ಯಾಲಯ ಹೆಸರಿಗೆ ತಕ್ಕಂತೆ ವಿದ್ಯಾರ್ಥಿಗಳಲ್ಲಿ ಜ್ಞಾನದ ಸುಧೆಯನ್ನು ಹರಿಸುವ ಕಾರ್ಯ ಬಹಳ ನಿಷ್ಠೆಯಿಂದ, ಯಶಸ್ವಿಯಾಗಿ ಮಾಡುತ್ತಿದೆ. ಇದರಿಂದಲೇ ಫಲಿತಾಂಶ ಪ್ರತಿವರ್ಷ ಉತ್ತಮ ರೀತಿಯಲ್ಲಿ ಬರುತ್ತಿದೆ’ ಎಂದು ತಿಳಿಸಿದರು.
‘2005ರಲ್ಲಿ ಕೇವಲ 35 ಮಕ್ಕಳಿಂದ ಬಾಡಿಗೆ ಕಟ್ಟಡದಲ್ಲಿ ಪ್ರಾರಂಭವಾದ ಜ್ಞಾನಸುಧಾ ವಿದ್ಯಾಲಯ ‘ವಸುಧೈವ ಕುಟುಂಬಕಂ’ ಎಂಬ ಘೋಷವಾಕ್ಯದಡಿಯಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸವ ಮೂಲಕ ಮಕ್ಕಳಲ್ಲಿ ಜ್ಞಾನದ ಸುಧೆಯನ್ನು ಹರಿಸುವ ದಿಸೆಯಲ್ಲಿ ಶ್ರಮಿಸಲಾಗುತ್ತಿದೆ. ಶಿಕ್ಷಕರ ಮಾರ್ಗದರ್ಶನ, ಪಾಲಕರ ಸಹಕಾರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದ ಅವರಿಗೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ’ ಎಂದರು.


‘ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಇಟ್ಟುಕೊಂಡ ಗುರಿಯನ್ನು ಸಾಧನೆ ಮಾಡೆ ಮಾಡುತ್ತೇನೆ ಎಂಬ ಛಲ, ನಂಬಿಕೆಯೊಂದಿಗೆ ಮುನ್ನುಗ್ಗಬೇಕು. ಗುರಿ ಸಾಧನೆಯಲ್ಲಿ ತೊಡಗಿಸಿಕೊಂಡಾಗ ಏನಾದರೂ ಅಡತಡೆಗಳು ಬಂದೆ ಬರುತ್ತವೆ. ಅವುಗಳನ್ನು ಸವಲಾಗಿ ತೆಗೆದುಕೊಂಡು ಆತ್ಮವಿಶ್ವಾಸದಿಂದ ಮುಂದೆ ಸಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ಸತತ ಪರಿಶ್ರಮವಿದ್ದಾಗ ಮಾತ್ರ ಭವಿಷ್ಯದಲ್ಲಿ ಉನ್ನತವಾದುದನ್ನು ಸಾಧಿಸಲು ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.
ಜ್ಞಾನಸುಧಾ ವಿದ್ಯಾಲಯದ ನಿರ್ದೇಶಕರಾದ ಡಾ. ಮುನೇಶ್ವರ ಲಾಖಾ ಅವರು ಮಾತನಾಡಿ, ‘ಜ್ಞಾನಸುಧಾ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಸ್ತಿನಿಂದ ಹೇಗೆ ಓದಬೇಕು ಎಂಬುವುದನ್ನು ಕಲಿಸಿಕೊಡಲಾಗುತ್ತದೆ. ಇದರಿಂದಲೇ ಜ್ಞಾನಸುಧಾ ವಿದ್ಯಾಲಯ ಸತತ 10 ವರ್ಷಗಳಿಂದ ಸಿಬಿಎಸ್‍ಸಿ 10ನೇ ತರಗತಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯುತ್ತಿದೆ’ ಎಂದು ತಿಳಿಸಿದರು.


‘ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಪದವಿಪೂರ್ವ ಕಾಲೇಜಿನಲ್ಲೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಈ ವರ್ಷದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಜ್ಞಾನಸುಧಾ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಏಳು ವಿದ್ಯಾರ್ಥಿಗಳು ಉತ್ತಮ ರ್ಯಾಂಕ್ ಪಡೆದಿದ್ದಾರೆ. ಅಷ್ಟೇ ಅಲ್ಲ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಈ ರೀತಿ ಉತ್ತಮ ಶೈಕ್ಷಣಿಕ ವಾತಾವರಣ ಹೊಂದಿರುವ ನಮ್ಮ ಕಾಲೇಜಿನ ಸೌಲಭ್ಯವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು’ ಎಂದರು.


‘ನಾನು ಶಾಲೆಗೆ ಪ್ರತಿದಿನ ಹಾಜರಾಗಿದ್ದ ಕಾರಣ ಎಲ್ಲ ವಿಷಯ ಚೆನ್ನಾಗಿ ಅರ್ಥವಾಗಿದೆ. ಇದರಿಂದಲೇ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ನನಗೆ ಸಾಧ್ಯವಾಗಿದೆ’ ಎಂದು ಜಿಲ್ಲೆಯ ಟಾಪರ್ ಆಗಿ ಹೊರಹೊಮ್ಮಿದ ವಿದ್ಯಾರ್ಥಿನಿ ಶ್ರೇಯಾ ಶ್ರೀನಿವಾಸ ಅವರು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.


ವಿದ್ಯಾರ್ಥಿಗಳಾದ ತೇಜಶ್ವಿನಿ ಶಾಂತಕುಮಾರ, ಸಿಂಚನಾ ಉಮೇಶ್, ಪ್ರಜ್ವಲ್ ಜೀತಪ್ಪ, ಅಮೃತಾಂಶು ಆದಿತ್ಯಪ್ರಸಾದ್ ಅವರು
ತಮ್ಮ ಅನಿಸಿಕೆಯನ್ನು ತಿಳಿಸಿದರು.


‘ಜ್ಞಾನಸುಧಾ ವಿದ್ಯಾಲಯ ನಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಉತ್ತಮ ಸಂಸ್ಕಾರ ಒದಗಿಸುತ್ತಿದೆ. ಮಕ್ಕಳ ಜ್ಞಾನಾರ್ಜನೆಗಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಈ ಕಾರಣದಿಂದಲೇ ಇಂದು ವಿದ್ಯಾಲಯ ಜಿಲ್ಲೆಯಲ್ಲೇ ಪ್ರತಿಷ್ಠಿತ ವಿದ್ಯಾಲಯವಾಗಿ ಬೆಳೆದಿದೆ ಎಂದು ಪಾಲಕರಾದ ಉಮೇಶ್ ಪಾಟೀಲ್ ಮೆಚ್ಚಿಗೆ ವ್ಯಕ್ತಪಡಿಸಿದರು.


ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಚನ್ನವೀರ ಪಾಟೀಲ್, ಶೈಕ್ಷಣಿಕ ನಿರ್ದೇಶಕರಾದ ಶ್ರೀಕಾಂತ ರೆಡ್ಡಿ, ಜ್ಞಾನಸುಧಾ ವಿದ್ಯಾಲಯದ ಪ್ರಾಚಾರ್ಯರಾದ ಸುನೀತಾ ಸ್ವಾಮಿ, ಉಪಪ್ರಾಚಾರ್ಯರಾದ ಕಲ್ಪನಾ ಮೋದಿ, ಮೇಲ್ವಿಚಾರಕರಾದ ರಜನಿ, ಸಾಯಿಗೀತಾ ವಸೀಮಾ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಪಾಲ್ಗೊಂಡಿದ್ದರು.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

41 minutes ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

9 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

9 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

9 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

9 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

10 hours ago