ಹೊಸದಿಲ್ಲಿ: ಭಾರತದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದೆ. ಅವರ ಅಧಿಕಾರಾವಧಿಗೆ ಶುಭ ಹಾರೈಸಿದೆ.
ಐತಿಹಾಸಿಕ ಕ್ಷಣವೊಂದರಲ್ಲಿ ನೂತನವಾಗಿ ನೇಮಕಗೊಂಡ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುಪ್ರೀಂ ಕೋರ್ಟ್ನಲ್ಲಿ ವಕೀಲರು ಸ್ವಾಗತಿಸುತ್ತಿದ್ದಂತೆ ‘ಜೈ ಭೀಮ್’ ಎಂದು ಪ್ರತಿಕ್ರಿಯಿಸಿದರು.
ಪರಿಶಿಷ್ಟ ಜಾತಿ ಹಿನ್ನೆಲೆಯ 2ನೇ ಸಿಜೆಐ ಎಂಬ ಹೆಗ್ಗಳಿಕೆಗೆ ಪಾತ್ರರಾದ ಬಿ.ಆರ್. ಗವಾಯಿ ಅವರು ಡಾ.ಬಿ.ಆರ್. ಅಂಬೇಡ್ಕರ್ ಮತ್ತು ದಲಿತ ಹಕ್ಕುಗಳ ಚಳವಳಿಯ ಪರಂಪರೆಯಲ್ಲಿ ಆಳವಾಗಿ ಬೇರೂರಿರುವ ನಮನವನ್ನು ಸಲ್ಲಿಸಿದಾಗ ವಕೀಲರಲ್ಲಿ ಸಂಚಲನ
ನ್ಯಾಯಮೂರ್ತಿ ಗವಾಯಿ ಅವರು ನವೆಂಬರ್ 23, 2025 ರವರೆಗೆ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಬುಲ್ಲೋಜರ್ ನ್ಯಾಯವನ್ನು ಖಂಡಿಸಿದ, ಅಂತಹ ಪದ್ಧತಿಗಳನ್ನು ನಿಗ್ರಹಿಸಲು ಕಠಿಣ ನಿಯಮಗಳನ್ನು ರೂಪಿಸುವುದು ಸೇರಿದಂತೆ ನಿರ್ಣಾಯಕ ಆದೇಶಗಳನ್ನು ಹೊರಡಿಸಿದ ಹಲವಾರು ಪ್ರಮುಖ ಪೀಠಗಳ ಭಾಗವಾಗಿ ನ್ಯಾಯಮೂರ್ತಿ ಗವಾಯಿ ಅವರು ಕಾರ್ಯನಿರ್ವಹಿಸಿದ್ದಾರೆ.
ಕೇಂದ್ರ ಸರಕಾರದಿಂದ 370 ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು ಎತ್ತಿಹಿಡಿದ ಪೀಠದಲ್ಲಿಯೂ ಗವಾಯಿ ಇದ್ದರು. ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ್ದು ಸೇರಿದಂತೆ ಮಹತ್ವದ ತೀರ್ಪುಗಳನ್ನು ನೀಡಿದ ಸಂವಿಧಾನ ಪೀಠದ ಭಾಗವಾಗಿ ಅವರು ಕೆಲಸ ಮಾಡಿದ್ದಾರೆ
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…