ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ್ಯಾಲಿ ಹಿನ್ನಲೆಯಲ್ಲಿ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ವ್ಯವಸ್ಥೆ ಕಲ್ಪಿಸಲು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿನ ಖಾಯಂ ಸಿಬ್ಬಂದಿಯಾದ 36 ಜನ ಅಡುಗೆದಾರರನ್ನು ಹಾಗೂ 19 ಜನ ವಾರ್ಡಗಳನ್ನು ನಿಯೋಜನೆ ಮಾಡಲಾಗಿದೆ.
ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿ, ಕುಡಿಯುವ ನೀರು, ಬಳಕೆ ನೀರು, ಊಟ ಮತ್ತು ಉಪಹಾರ, ಸ್ನಾನಗೃಹಗಳು ಹಾಗೂ ಶೌಚಾಲಯಗಳು, ವಸತಿ ನಿಲಯದ ಒಳ ಮತ್ತು ಹೊರಾಂಗಣವನ್ನು ಸ್ವಚ್ಛವಾಗಿಟ್ಟುಕೊಂಡು ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ನಿಯೋಜನೆಗೊಂಡ ಸಿಬ್ಬಂದಿಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ನಿಯೋಜನೆಗೊಂಡ ಸಿಬ್ಬಂದಿಯು ಕಡ್ಡಾಯವಾಗಿ ಆಗಸ್ಟ್ 08 ರಿಂದ ಪ್ರತಿದಿನ ಬೆಳಗ್ಗೆ 6 ಗಂಟೆಗೆ ನಿಯೋಜಿಸಿದ ಸ್ಥಳದಲ್ಲಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಿ ತಮಗೆ ವಹಿಸಿದ ಕರ್ತವ್ಯವನ್ನು ಶಿಸ್ತಿನಿಂದ ಹಾಗೂ ರ್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲಗಳು ಆಗದಂತೆ ರ್ಯಾಲಿಯನ್ನು ಯಶಗೊಳಿಸಲು ಸೂಚಿಸಿದೆ.
ಈ ಕರ್ತವ್ಯಕ್ಕೆ ಗೈರು ಹಾಜರಾದ ಹಾಗೂ ಕರ್ತವ್ಯ ಲೋಪವೆಸಗಿದ ಸಿಬ್ಬಂದಿಯ ವಿರುದ್ದ ನಿಯಮಾನುಸಾರ ಶಿಸ್ತು ಕ್ರಮಕ್ಕಾಗಿ ಮೇಲಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಸಿಬ್ಬಂದಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ವಲಯ ಕಚೇರಿ ಜಿಲ್ಲಾ ಬಂಜಾರ ಭವನ ಮಂತ್ರಾಲಯ ರೋಡ್ ರಾಯಚೂರ ಇಲ್ಲಿಗೆ 10 ಜನ ಅಡುಗೆದಾರರನ್ನು ಕರ್ತವ್ಯಕ್ಕೆ ಮತ್ತು 10 ಜನ ವಾರ್ಡಗಳನ್ನು ಮೇಲುಸ್ತುವಾರಿಗಳನ್ನಾಗಿ ನಿಯೋಜಿಸಲಾಗಿದೆ.
ಅದೇ ರೀತಿ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ ವಲಯ ಕಚೇರಿ ಜಿಲ್ಲಾ ಬಂಜಾರ ಭವನ ಮಂತ್ರಾಲಯ ರೋಡ್ ರಾಯಚೂರ ಇಲ್ಲಿಗೆ 26 ಜನ ಅಡುಗೆದಾರರನ್ನು ಕರ್ತವ್ಯಕ್ಕೆ ಮತ್ತು 9 ಜನ ವಾರ್ಡಗಳನ್ನು ಮೇಲುಸ್ತುವಾರಿಯನ್ನಾಗಿ ನಿಯೋಜಿಸಲಾಗಿದೆ.