ಸೌರ ಕೃಷಿ, ಉದ್ಯೋಗದಿಂದ ಜನರ ತಲಾ ಆದಾಯ ಹೆಚ್ಚಾಗಲಿದೆ – ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ

ಕೊಪ್ಪಳ.26.ಜೂನ್.25:- ಪರಿಸರ ಸ್ನೇಹಿಯಾಗಿರುವ ಸೌರ ಕೃಷಿ ಮತ್ತು ಸೌರ ಉದ್ಯೋಗದಿಂದ ಜನರ ತಲಾ ಆದಾಯ ಹೆಚ್ಚಾಗಲಿದೆ ಎಂದು ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ ಹೇಳಿದರು.

ಅವರು ಗುರುವಾರ ಕೊಪ್ಪಳ ಭಾಗ್ಯನಗರ ರಸ್ತೆಯ ಕಠಾರೆ ಕಲ್ಯಾಣ ಮಂಟಪದದಲ್ಲಿ ಕೊಪ್ಪಳ ಜಿಲ್ಲಾಡಳಿ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಸೆಲ್ಕೋ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ “ಕೊಪ್ಪಳ-ಸೌರ ಕೃಷಿ ಉದ್ಯೋಗ ಉತ್ಸವ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿಂದುಳಿದ ಪ್ರದೇಶವಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ಬಹುತೇಕ ಜನರು ಕೃಷಿ ಅವಲಂಭಿತರಾಗಿದ್ದು, ಶೇ. 75ರಷ್ಟು ಒಣ ಬೆಸಾಯ ಹಾಗೂ ಶೇ. 25ರಷ್ಟು ಮಾತ್ರ ನೀರಾವರಿ ಹೊಂದಿದೆ. ಮಳೆಯಾಶ್ರಿತ ಅಥವಾ ನೀರಾವರಿ ಯಾವುದೇ ಬೆಳೆಯಾಗಿರಲಿ ರೈತರಿಗೆ ಉತ್ತಮ ಬೆಲೆ ಸಿಗುವಂತಾಗಬೇಕು. ರೈತರು ಶ್ರಮವಹಿಸಿ ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ನಿರೀಕ್ಷೆಯಂತೆ ಬೆಲೆ ಸಿಗುವುದಿಲ್ಲ. ರೈತರು ತಮ್ಮ ಬೆಳೆಗಳಿಂದ ವಿವಿಧ ಬಗೆಯ ಉತ್ಪನ್ನಗಳನ್ನು ಸಿದ್ದಪಡಿಸಿ ಮಾರಾಟ ಮಾಡಿದರೆ, ಅದಕ್ಕೆ ಹೆಚ್ಚಿನ ಮೌಲ್ಯ ಸಿಗಲಿದೆ. ಈ ಹಿನ್ನೆಲೆಯಲ್ಲಿ ಮೌಲ್ಯವರ್ಧನೆಗೆ ನಾವು ಹೆಚ್ಚಿನ ಒತ್ತು ಕೊಡಬೇಕು. ಅಂದಾಗ ಮಾತ್ರ ರೈತರು ಬೆಳೆದ ಬೆಳೆಗಳಿಗೆ ಇನ್ನೂ ಹೆಚ್ಚಿನ ಬೆಲೆ ಸಿಗಲು ಸಾಧ್ಯವಾಗಲಿದೆ. ರೈತರು ಸೌರ ಶಕ್ತಿಯಿಂದ ಬಳಕೆಯಾಗುವ ಕೃಷಿ ಯಂತ್ರೋಪಕರಣಗಳು ಹಾಗೂ ಇತರ ಉತ್ಪನ್ನಗಳ ಬಳಕೆ ಮಾಡಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬೇಕು. ಮೇಣದ ಬತ್ತಿ ಉತ್ಪಾದನೆ, ರೊಟ್ಟಿ ತಯಾರಿಕೆ, ಶ್ಯಾವಿಗೆ, ಚಕ್ಕಲಿ, ಆಲುಗಡ್ಡೆ ಚಿಪ್ಸ್ ಹಾಗೂ ಇತರೆ ಆಹಾರ ಪದಾರ್ಥಗಳನ್ನು ತಯಾರಿಸುವ ಸೌರ ಶಕ್ತಿಯ ಯಂತ್ರೋಪಕರಣಗಳನ್ನು ಕೃಷಿ ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಬಳಕೆ ಮಾಡಿಕೊಂಡರೆ ಎಲ್ಲರಿಗೂ ಜೀವನೋಪಾಯವಾಗಲಿದೆ ಎಂದರು.


ಸೆಲ್ಕೋ ಫೌಂಡೇಶನ್ ಜೊತೆಗೆ ಸುಮಾರು ಮೂರು ವರ್ಷಗಳಿಂದ ನನಗೆ ಸಂಪರ್ಕವಿದ್ದು, ಈ ಹಿಂದೆ ದಾವಣಗೆರೆ ಮತ್ತು ಧಾರವಾಡ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಸಂದರ್ಭದಲ್ಲಿ ಇವರ ಜೊತೆಗೆ ಸಾಕಷ್ಟು ಕೆಲಸಗಳನ್ನು ಮಾಡಿದ್ದೇನೆ. ಸ್ಮಾರ್ಟ್ ಕ್ಲಾಸ್, ಆರೋಗ್ಯ ಕೇಂದ್ರಕ್ಕೆ ಸೋಲಾರ್ ಅಳವಡಿಕೆ ಮತ್ತು ಪಿ.ಎಂ.ಎಫ್.ಎಫ್ ಯೋಜನೆಯಡಿ ಕಿರು ಸಂಸ್ಕರಣೆ, ಎನ್.ಆರ್.ಎಲ್.ಎಂ., ವನಧನ ವಿಕಾಸ ಕೇಂದ್ರ ಹೀಗೆ ಎಲ್ಲದರಲ್ಲೂ ಸೋಲಾರ ಬಳಕೆಗಾಗಿ ಉತ್ತೇಜನವನ್ನು ಕೊಟ್ಟಿದ್ದೇವೆ ಎಂದರು.


ಸೆಲ್ಕೋ ಫೌಂಡೇಶನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಹಂದೆ ಅವರು ಮಾತನಾಡಿ, ಸೌರ ಶಕ್ತಿ ಬಳಕೆಯಲ್ಲಿ ವಿವಿಧ ತಂತ್ರಜ್ಞಾನಗಳನ್ನು ಅಭಿವೃದ್ಧಿ ಪಡಿಸಲಾಗಿದ್ದು, ಇಂದಿನ ಕೃಷಿ ಮತ್ತು ಉದ್ಯೋಗದಲ್ಲಿ ಸೌರ ಶಕ್ತಿಯ ಬಳಕೆ ಅತ್ಯವಶ್ಯಕವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಒಂದು ವರ್ಷದೊಳಗೆ ಒಂದು ಸಾವಿರ ಸೌರ ಶಕ್ತಿ ಚಾಲಿತ ಸಿರಿಧಾನ್ಯ ಸಂಸ್ಕರಣ ಘಟಕಗಳ ಸ್ಥಾಪನೆ ಗುರಿಯನ್ನು ಹೊಂದಲಾಗಿದೆ. ಇದರಿಂದ ಕೊಪ್ಪಳ ಜಿಲ್ಲೆಯು ಇಡೀ ದೇಶಕ್ಕೆ ಮಾದರಿಯಾಗಲಿದೆ. ಸೌರ ಯಂತ್ರೋಪಕರಣಗಳ ಬಳಕೆಯಲ್ಲಿ ಯಾವುದೇ ಸಮಸ್ಯೆ ಇದ್ದರೆ, ನಮ್ಮ ಸಂಸ್ಥೆಯ ಪ್ರತಿನಿಧಿಗಳಿಗೆ ಹೇಳಿ, ಅವರು ತ್ವರಿತವಾಗಿ ಸರಿಪಡಿಸುವ ಕೆಲಸವನ್ನು ಮಾಡುವರು ಎಂದು ಹೇಳಿದರು.


ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಅವರು ಮಾತನಾಡಿ, ಸೌರ ಶಕ್ತಿ ಬಳಕೆಯಿಂದ ಕೃಷಿಗೆ ಸಂಬಂಧಿಸಿದ ಯಂತ್ರಗಳು, ಸ್ವಯಂ ಉದ್ಯೋಗಕ್ಕಾಗಿ ಬೇಕಾಗುವ ಯಂತ್ರೋಪಕರಣಗಳನ್ನು ಸಹಾಯಧನ ರೂಪದಲ್ಲಿ ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ರೈತರಿಗೆ ಮತ್ತು ಸ್ವ ಸಹಾಯ ಗುಂಪಿನ ಮಹಿಳೆಯರು ಸೌರ ತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಂಡು ತಮ್ಮ ಆದಾಯವನ್ನು ಮತ್ತಷ್ಟು ಬಲ ಪಡಿಸಿಕೊಳ್ಳಬಹುದಾಗಿದೆ ಎಂದರು.


*ಗಮನ ಸೆಳೆದ ಪ್ರದರ್ಶನ ಮಳಿಗೆಗಳು:* ಕೊಪ್ಪಳ-ಸೌರ ಕೃಷಿ ಉದ್ಯೋಗ ಉತ್ಸವದಲ್ಲಿ ಕೃಷಿಗೆ ಸಂಬಂಧಿಸಿದ ಸೌರ ಶಕ್ತಿಯ ಯಂತ್ರಗಳಾದ ಮಿನಿ ಟ್ರ್ಯಾಕ್ಟರ್, ರೈತರ ಬೆಳೆಗಳಿಗೆ ರಸಾಯನಿಕ ಸಿಂಪಡಿಸುವ ಡ್ರೋನ್ ಯಂತ್ರ, ಭತ್ತದ ಮಿಲ್ಲಿಂಗ್ ಕಿರು ಯಂತ್ರಗಳು, ಎಣ್ಣೆ ಗಾಣದ ಯಂತ್ರ ಮತ್ತು ಇತರೆ ಕೃಷಿ ಯಂತ್ರೋಪಕರಣಗಳು ಹಾಗೂ ಸ್ವಯಂ ಉದ್ಯೋಗಕ್ಕೆ ಸಂಬಂಧಿಸಿದ ಶ್ಯಾವಿಗೆ, ಚಕ್ಕಲಿ, ಆಲುಗಡ್ಡೆ ಚಿಪ್ಸ್ ತಯಾರಿಕೆಯ ಸೌರ ಶಕ್ತಿಯ ಯಂತ್ರಗಳು ಹಾಗೂ ಸಿರಿಧಾನ್ಯ ಮಳಿಗೆ ಪ್ರದರ್ಶನಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಸೆಲ್ಕೋ ಫೌಂಡೇಶನ್ ಪ್ರತಿನಿಧಿಗಳು ಹಾಗೂ ರೈತರು ಸೇರಿದಂತೆ ಇತರರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಪಶು ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ. ಮಲ್ಲಯ್ಯ, ನಬಾರ್ಡ್ ಕಾರ್ಯಕ್ರಮ ಅಧಿಕಾರಿ ಮಾಹದೇವ ಕೀರ್ತಿ, ಕೊಪ್ಪಳ ಕೃಷಿ ವಿಸ್ತರಣಾ ಕೇಂದ್ರದ ಡಾ. ಎಂ.ವಿ ರವಿ, ಶ್ರೀನಿವಾಸ ಕುಲಕರ್ಣಿ, ಡಾ. ಎಂ.ಪಿ ಪಾಟೀಲ್, ಪ್ರಗತಿಪರ ರೈತರಾದ ಡಾ. ದೇವೇಂದ್ರಪ್ಪ ಬಳೂಟಗಿ, ಕೃಷಿಕ ಮಹಿಳೆಯರಾದ ಮಂಗಳ, ಗೀತಾ ಸಜ್ಜನ್ ಸೇರಿದಂತೆ ಸೆಲ್ಕೊ ಫೌಂಡೇಶನ್ ತಂತ್ರಜ್ಞರು, ಜಿಲ್ಲೆಯ ರೈತರು, ಸಂಜೀವಿನಿ ಮತ್ತು ಎನ್.ಆರ್.ಎಲ್.ಎಂ, ಸ್ವಸಹಾಯ ಗುಂಪುಗಳ ಸದಸ್ಯರು ಉಪಸ್ಥಿತರಿದ್ದರು.  ಸೆಲ್ಕೋ ಫೌಂಡೇಶನ್ ಪ್ರಕಾಶ ಮೇಟಿ ಅವರು ಸ್ವಾಗತಿಸಿದರು.

prajaprabhat

Recent Posts

7, 10ನೇ ತರಗತಿ ಮೇಲೇ ಉದ್ಯೋಗ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾವು ದೊಡ್ಡ ಘೋಷಣೆ ಮಾಡಿದೆ. ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಯಾವೆಲ್ಲಾ ಹುದ್ದೆಗಳಿಗೆ ಅರ್ಜಿ ಆಹ್ವಾನ?*…

58 minutes ago

ರಾಜ್ಯ ಸರ್ಕಾರದಿಂದ 34 ತಹಶೀಲ್ದಾರ್ ವರ್ಗಾವಣೆ ಆದೇಶ

ಬೆಂಗಳೂರು.27.ಜೂನ್.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 34 ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ…

3 hours ago

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೀದರ.27.ಜೂನ್.25:- 2025-26 ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿದ್ಯಾರ್ಥಿ ವೇತನ ಯೋಜನೆಗಳಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ (1ರಿಂದ…

9 hours ago

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.27.ಜೂನ್.25:- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ,…

9 hours ago

ಜೂ.30 ರಂದು ತಾಪಂ ಕೆಡಿಪಿ ಸಭೆ

ಬೀದರ.27.ಜೂನ್.25:- ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಬಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೆöÊಮಾಸಿಕ ಸಭೆಯನ್ನು ಜೂನ್.30…

9 hours ago

ಶಿಷ್ಯವೇತನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.27.ಜೂನ್.25:-  IISC, IIT Artificial Intelligence and Machine Learning  ವೃತ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿoಗ್…

9 hours ago