08/06/2025 9:32 PM

Translate Language

Home » ಲೈವ್ ನ್ಯೂಸ್ » ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ.!

ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ.!

Facebook
X
WhatsApp
Telegram

ಬೀದರ.06.ಫೆಬ್ರುವರಿ.25: -ಕುಷ್ಠರೋಗವು ಯಾವುದೇ ಶಾಪ ಪಾಪ ದಿಂದ ಬರುವುದಿಲ್ಲ ಇದು ಒಂದು ಮೈಕೋಬ್ಯಾಕ್ಟೀರಿಯಂ ಲೆಪ್ರೆಎಂಬ ರೋಗಾಣುವಿನಿಂದ ಬರುವ ಸಾಂಕ್ರಮಿಕ ರೋಗವಾಗಿದ್ದು, ಇದು ಮುಖ್ಯವಾಗಿ ಚರ್ಮ ಹಾಗೂ ನರಕ್ಕೆ ಸಂಭAಧಪಟ್ಟಿದ್ದು ದೇಹದ ಯಾವುದೇ ಭಾಗದಲ್ಲಿ ಸ್ವರ್ಶಜ್ಞಾನವಿಲ್ಲದ ತಿಳಿ ಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳಿದ್ದಲ್ಲಿ ಅದು ಕುಷ್ಠರೋಗದ ಲಕ್ಷಣಗಲಾಗಿರಬಹುದು ಯಾವುದೆ ತರಹದ ಮಚ್ಚೆಗಳು ಇದಲ್ಲಿ ತಮ್ಮ ಸಮೀಪದ ಪ್ರಾಥಮೀಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಕ್ಷಿಸಿಕೊಳ್ಳಬೇಕೆಂದು ಬ್ರೆಡ್ ಡಾನ ಬಾಸ್ಕೋ ಸಂಸ್ಥೆಯ ಸ್ಟೇಟ್ ಕೋಡಿನೇಟರ್ ಅಕ್ಷತಾ ಅವರು ಹೇಳಿದರು.
ಅವರು ಇಂದು ಹಳ್ಳಿಖೇಡ (ಬಿ) ಬಸವ ತೀರ್ಥ ಪ್ರೌಡ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ರೋಗ ಕಂಡು ಬಂದಲ್ಲಿ ಬಹುಔಷದಿ ಚಿಕಿತ್ಸೆಯಿಂದ ಗುಣಪಡಿಸಬಹುದು ಇದಕ್ಕೆ ಯಾವುದೆ ರೀತಿಯ ಹೆದರುವಂತಹ ಅಗತ್ಯವಿಲ್ಲ ಎಂದು ಹೇಳಿದರು.
ಕಾರ್ಯಕ್ರಮದ ಮೇಲ್ವಿಚಕರಾದ ಶಾಮರಾವ ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಕನಸಾದ ಕುಷ್ಠಮುಕ್ತ ಭಾರತವನ್ನು ಮಾಡಲು ಪ್ರತಿಜ್ಞಾ ಮಾಡೋಣ ಎಂದು ಪ್ರತಿಜ್ಞೆ ಮಾಡಿಸಿದ್ದರು.


ಈ ಸಂದರ್ಭದಲ್ಲಿ ಬಸವ ತೀರ್ಥ ಪ್ರೌಡ ಶಾಲೆಯ ಮುಖ್ಯ ಗುರುಗಳಾದ ಮಸ್ತಾನ ಪಟೇಲ್, ಶಿಕ್ಷರಾದ ರೇವಣಪ್ಪ ಸ್ವಾಮಿ, ಆರೋಗ್ಯ ನಿರೀಕ್ಷಣಾಧಿಕಾರಿ ವಿಲ್ಸನ್, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಸುಧಾರಾಣಿ, ಆಶಾ ಕಾರ್ಯಕತಾರು ಅರೋಗ್ಯ ಸಿಬ್ಬಂದಿಗಳು, ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!