ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಸೇವಾ ಸಿಂಧು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ 3 ಲಕ್ಷ ಸಹಾಯಧನ ನೀಡಲಾಗುತ್ತಿದ್ದು, ಈ ದಾಖಲೆ, ಅರ್ಹತಾ ಮಾನದಂಡ ಕಡ್ಡಾಯವಾಗಿದೆ.
ಅರ್ಹತಾ ಮಾನದಂಡಗಳು:
• ವಯಸ್ಸು: ಕನಿಷ್ಠ 21 ವರ್ಷ, ಗರಿಷ್ಠ 45 ವರ್ಷ
• ಆದಾಯ ಮಿತಿಯು:
• ಗ್ರಾಮಾಂತರ ಪ್ರದೇಶ: ವಾರ್ಷಿಕ ₹98,000 ಒಳಗೆ
• ನಗರ ಪ್ರದೇಶ: ವಾರ್ಷಿಕ ₹1,20,000 ಒಳಗೆ
• ಚಾಲನಾ ಪರವಾನಗಿ: ಸರಿಯಾಗಿ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು ಹಾಗೂ ಈ ಹಿಂದೆ ಯಾವುದೇ ಸರ್ಕಾರಿ ಯೋಜನೆಯಿಂದ ಲಾಭ ಪಡೆದಿರಬಾರದು
ಈ ದಾಖಲೆಗಳು ಕಡ್ಡಾಯ:
• ಜಾತಿ ಹಾಗೂ ಆದಾಯ ಪ್ರಮಾಣಪತ್ರ
• ಆಧಾರ್ ಕಾರ್ಡ್
• ಚಾಲನಾ ಪರವಾನಗಿ ಪ್ರತಿ ( ಡಿ ಎಲ್)
• ಬ್ಯಾಂಕ್ ಪಾಸ್ ಬುಕ್ ನಕಲು
• ವಾಹನದ ಅಂದಾಜು ಕ್ವೊಟೇಶನ್/ಬೆಲೆಪಟ್ಟಿ
• ಸ್ವಯಂ ಘೋಷಣಾ ಪತ್ರ
ಅರ್ಜಿ ಸಲ್ಲಿಕೆ ವಿಧಾನ:
• ಆನ್ಲೈನ್ ಮೂಲಕ: Seva Sindhu ಪೋರ್ಟಲ್
• ಆಫ್ಲೈನ್ ಮೂಲಕ: ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ
ಹೆಚ್ಚಿನ ಮಾಹಿತಿಗಾಗಿ 080-22374832 8050770004 / 8050770005 ಸಂಪರ್ಕಿಸಬಹುದಾಗಿದೆ.
ಇತರ ಯೋಜನೆಗಳು:
ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ.
ಈ ಮೇಲ್ಕಂಡ ಯೋಜನೆಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಮಾತ್ರ ಅನ್ವಯವಾಗುತ್ತದೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ).
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಹ ಹಿಂದುಳಿದ ವರ್ಗದವರು ಅರ್ಜಿಗಳನ್ನು ಆನ್ಲೈನ್ ಸೇವಾಸಿಂಧು ಪೋರ್ಟಲ್
https://sevasindhu.karnataka.gov.in
ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದು.
ಮಾಹಿತಿಗಾಗಿ ನಿಗಮದ ವೆಬ್ ಸೈಟ್ www.dbcdc.karnataka.gov.in ಗೆ ಸಂಪರ್ಕಿಸಬಹುದು.
ಕೊನೆಯ ದಿನಾಂಕ: ಜೂ.30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…
ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…
ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…
ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…
ಫ್ರೆಂಚ್ ಓಪನ್ ಟೆನಿಸ್ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…
"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…