ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಮೈಕ್ರೋ ಫೈನಾನ್ಸಗಳು ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರಿಗಳನ್ನು ಪರಿಶೀಲನೆಯನ್ನು ಮಾಡಿ, ಅವರ ಆದಾಯದ ಶೇ. 50 ರಷ್ಟು ಮಾತ್ರ ಸಾಲ ನೀಡಬೇಕು, ಆದರೆ, ಅವರು ಸಾಲ ತೆದುಕೊಳ್ಳುವ ಸಾಮರ್ಥ್ಯ ನೋಡದೇ ಸಾಲವನ್ನು ನೀಡಿರುವ ಬಗ್ಗೆ ಕಂಡುಬರುತ್ತಿದೆ. ಇವುಗಳಿಗೆ ಆಸ್ಪದ ನೀಡಬಾರದು.
ಸಾಲ ನೀಡುವವರು ಹಾಗೂ ತೆಗೆದುಕೊಳ್ಳುವವರು ಇಬ್ಬರೂ ಸಹ ಆರ್ಥಿಕ ಶಿಸ್ತನ್ನು ಪಾಲಿಸಬೇಕು ಎಂದರು.
ಆರ್.ಬಿ.ಐ ಮಾರ್ಗಸೂಚಿಯ ಪ್ರಕಾರ ಮೈಕ್ರೋ ಫೈನಾನ್ಸಗಳು ರೂ. 3 ಲಕ್ಷದವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಸಾಲ ಮರುಪಾವತಿಯನ್ನು ಕಾನೂನಿನ ಅನ್ವಯ ಕ್ರಮಗಳನ್ನು ಕೈಗೊಳ್ಳಬೇಕು, ಕಾನೂನನ್ನು ಉಲ್ಲಂಘಿಸಿ, ದೌರ್ಜನ್ಯ, ಕೆಟ್ಟ ಪದಗಳಲ್ಲಿ ಬೈಯುವುದು, ದಬ್ಬಾಳಿಕೆ ಕಿರುಕುಳ ನೀಡುವುದು ಮಾಡಿದ್ದಲ್ಲಿ ಅಂತಹವರ ವಿರುದ್ಧ ಪೋಲೀಸ್ನವರು ಪ್ರಕರಣ ದಾಖಲಿಸಿಕೊಳ್ಳಲು ಅವಕಾಶವಿದೆ ಎಂದರು.
ಜಿಲ್ಲೆಯಲ್ಲಿ ಸುಮಾರು ರೂ. 1193 ಕೋಟಿ ಸಾಲ 1.79 ಸಾವಿರ ಜನರಿಗೆ ಸಾಲ ವಿತರಣೆ ಮಾಡಲಾಗಿದೆ. ಸಾಲ ವಸೂಲಾತಿಗಾಗಿ ಫೈನಾನ್ಸ್ ಕಂಪನಿಗಳು ಬೆಳಿಗ್ಗೆ 9 ಕ್ಕೂ ಮುನ್ನ ಸಂಜೆ 5ರ ನಂತರ ಸಾಲಗಾರರ ಮನೆಗೆ ಹೋಗಬಾರದು ಹಾಗೂ ಯವುದೇ ರೀತಿಯ ದೌರ್ಜನ್ಯಗಳನ್ನು ನಡೆಸಬಾರದು. ಒಂದೊಮ್ಮೆ ಉಲ್ಲಂಘಿಸಿದ್ದಲ್ಲಿ ಅಂತವರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಕೊಳ್ಳಲಾಗುವುದೆಂದರು.
ಇ-ಖಾತಾ ಅಭಿಯಾನ: ಬೀದರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಅಭಿಯಾನಕ್ಕೆ ಈಗಾಗಲೇ ಚಾಲನೆ ನೀಡಿದ್ದು, ಈ ಅಭಿಯಾನವನ್ನು ಮುಂದಿನ 3 ತಿಂಗಳ ಒಳಗಾಗಿ ಪೂರ್ಣಗೊಳಿಸಲು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ, ನಿಗದಿತ ಕಾಲವಾಧಿಯಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದರು.
ಸಾರ್ವಜನಿಕರಿಗೆ ತಮ್ಮ ಸ್ವತ್ತಿನ ಮಾಹಿತಿಯಲ್ಲಿ ತಿದ್ದು ಪಡಿಗಳಿದ್ದಲ್ಲಿ ಅಗತ್ಯ ದಾಖಲೆಗಳನ್ನು ನಗರ ಸ್ಥಳೀಯ ಸಂಸ್ಥೆಗೆ ಸಲ್ಲಿಸಿ ತಿದ್ದುಪಡಿ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ.
ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಸಹ ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಇದರಿಂದ ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ಸ್ವತ್ತಿನ ಕಂದಾಯವನ್ನು ಪಾವತಿಸಿ, ಇ-ಖಾತಾ ಪಡೆಯಬಹುದಾಗಿದೆ. ಇದರಿಂದ ಬಹಳ ದಿನಗಳಿಂದ ಇದ್ದ ಅನಧಿಕೃತ ಸ್ವತ್ತುಗಳ ಖಾತಾ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗಿದೆಂದರು.
ಸೆಪ್ಟೆಂಬರ 10, 2024 ರ ಕ್ಕಿಂತ ಮುಂಚಿನ ಆಸ್ತಿಗಳಿಗೆ ಸದರಿ ಕಾಯ್ದೆಯು ಅನ್ವಯವಾಗುತ್ತದೆ. ಸದರಿ ಅಭಿಯಾನವು ಒಂದು ಬಾರಿ ಪರಿಹಾರ ಕ್ರಮವಾಗಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಸದರಿ ಅಭಿಯಾನದ ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕರಿಗೆ ಈ ಸೌಲಭ್ಯದ ಮಾಹಿತಿ ತಲುಪುವಂತೆ ವ್ಯಾಪಕ ಪ್ರಚಾರ ಮಾಡಲಾಗುತ್ತದೆ. ಬೀದರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿ ಲಭ್ಯ ಮಾಹಿತಿಯನ್ನು ಜಾಲತಾಣ http://aasthikanaja.karnatakasmartcity.in/kmf24 ರಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಈ ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ಸ್ವತ್ತಿನ ಮಾಹಿತಿಯು ಸರಿಯಾಗಿರುವ ಕುರಿತು ಪರಿಶೀಲಿಸಬಹುದಾಗಿದೆ ಎಂದರು.
ಸ್ವತ್ತಿನ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ, ವಾರ್ಡವಾರು ಆಯೋಜಿಸಲಾಗುವ ಮೇಳಗಳಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ, 07 ದಿನಗಳ ಒಳಗಾಗಿ ಇ-ಖಾತಾ ಪಡೆಯಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಹಾಗೂ ಸಾರ್ವಜನಿಕರ ಸಹಾಯಕ್ಕಾಗಿ ಬೀದರ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿಗಳನ್ನು ಸ್ಥಾಪಿಸಲಾಗಿದೆ. ಇ-ಖಾತಾ ನೀಡಲು ಅಭಿಯಾನ ಕೈಗೊಂಡು ನಿಗದಿತ ಕಾರ್ಯವಿಧಾನವನ್ನು ಅನುಸರಿಸಲಾಗುತ್ತಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡಲು ಬಾಕಿಯಿರುವ ಆಸ್ತಿಗಳ ಗುರುತಿಸುವುದು. ಇ-ಖಾತಾ ಪಡೆಯಲು ಗುರುತಿಸಲಾದ ಆಸ್ತಿಗಳ ಮಾಲೀಕರು ಇ-ಖಾತಾ ಪಡೆಯಲು ಬೇಕಾದ ದಾಖಲೆಗಳನ್ನು ಸಲ್ಲಿಸಲು ಮಾಹಿತಿ ನೀಡಲಾಗುತ್ತದೆ ಎಂದರು.
ಇ-ಖಾತಾ ಅಭಿಯಾನದ ಕುರಿತು ಪ್ರಚಾರ ಮಾಡಲು ನಗರ ಸ್ಥಳೀಯ ಸಂಸ್ಥೆಗಳ ವಾಹನದಲ್ಲಿ ಮುದ್ರಿತ ಧ್ವನಿ (ಆಡಿಯೊ) ಪ್ರಚುರಪಡಿಸಲು, ಲಭ್ಯವಿರುವ ಮೊಬೈಲ್ ಸಂಖ್ಯೆಗಳಿಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡುವುದು ಮತ್ತು ಇ-ಖಾತಾ ಪಡೆಯಲು ಅವಶ್ಯವಿರುವ ದಾಖಲೆಗಳ ಪಟ್ಟಿಯನ್ನು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಚುರಪಡಿಸಲು ಸೂಚಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.
ಎ-ರಿಜಿಸ್ಟರ್ನಲ್ಲಿ ದಾಖಲಿರುವ ಆಸ್ತಿಗಳಿಗೆ ಇ-ಖಾತಾ ಪಡೆಯಲು ನೀಡಬೇಕಾದ ದಾಖಲೆಗಳು: ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೋಂದಾಯಿತ ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು, ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರ ಇತ್ಯಾದಿಗಳ ಪೈಕಿ ಒಂದು ಪ್ರಮಾಣ ಪತ್ರವನ್ನು, ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿಸಿ ಅಡಿ ನೀಡಲಾದ ಹಕ್ಕು ಪತ್ರ ಮತ್ತು ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ ಹಾಗೂ ಪ್ರಸಕ್ತ ಸಾಲಿನವರೆಗಿನ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಮಾಲೀಕರ ಫೋಟೋ ಮತ್ತು ಸ್ವತ್ತೀನ ಫೋಟೋ ಮತ್ತು ಮಾಲೀಕರ ಗುರುತಿನ ದಾಖಲೆ ಪ್ರತಿ ಸಲ್ಲಿಸಬೇಕು.
ಬಿ- ರಿಜಿಸ್ಟರ್ನಲ್ಲಿ ದಾಖಲಿರುವ ಆಸ್ತಿಗಳಿಗೆ ಇ-ಖಾತಾ ಪಡೆಯಲು ನೀಡಬೇಕಾದ ದಾಖಲೆಗಳು: ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತಪಡಿಸುವ ಸಪ್ಟೆಂಬರ 10, 2024 ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು, ಹಕ್ಕು ಖುಲಾಸೆ ಪತ್ರಗಳು ಹಾಗೂ ಪ್ರಸಕ್ತ ಸಾಲಿನ ವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ, ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸಬೇಕು.
ವ್ಯವಸ್ಥಿತವಾಗಿ ಮತ್ತು ಸಂಘಟಿತ ರೀತಿಯಲ್ಲಿ ಮೇಳಗಳ ಆಯೋಜನೆ: ಇ-ಖಾತಾ ಅಭಿಯಾನದ ಅಂಗವಾಗಿ ನಗರದ ವಾರ್ಡ್ ಅಥವಾ ಬೀದಿಗಳನ್ನು, ಅಪಾರ್ಟ್ಮೆಂಟ್, ಲೇಔಟ್ನ್ನು ಗುರುತಿಸಿ, ಆ ಭಾಗದಲ್ಲಿನ ಸಕ್ರಿಯ ನಾಗರೀಕ ಗುಂಪುಗಳು ಅಥವಾ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಕ್ರಿಯ ವ್ಯಕ್ತಿಗಳ ಸಹಾಯವನ್ನು ಪಡೆದುಕೊಂಡು, ಇ-ಖಾತಾ ಇಲ್ಲದಿರುವ ಸ್ವತ್ತುಗಳ ಪಟ್ಟಿಯನ್ನು ಅಗತ್ಯ ಸ್ಥಳಗಳಲ್ಲಿ ಪ್ರಚುರಪಡಿಸಲಾಗುವುದೆಂದರು.
ನಾಗರೀಕರಿಗೆ ಅನುಕೂಲವಾಗುವ ಸ್ಥಳಗಳಲ್ಲಿ ಇ-ಖಾತಾ ಮೇಳವನ್ನು ಆಯೋಜಿಸಿ, ಇ-ಖಾತಾ ಪಡೆಯಲು ನಾಗರೀಕರು ಸಲ್ಲಿಸಬೇಕಾದ ಮಾಹಿತಿ, ದಾಖಲೆಗಳ ವಿವರವನ್ನು ತಿಳಿಸಲಾಗುವುದು. ಅಧಿಕೃತ ಸ್ವತ್ತಿನ ಮಾಲೀಕರು ಸಲ್ಲಿಸಬೇಕಾದ ದಾಖಲೆಗಳು, ಮತ್ತು ಅನಧಿಕೃತ ಸ್ವತ್ತಾಗಿದ್ದಲ್ಲಿ ಸಲ್ಲಿಸಬೇಕಾದ ದಾಖಲೆಗಳ ಮಾಹಿತಿಯ ವಿವರವನ್ನು ನಾಗರೀಕರಿಗೆ ಮೇಳದಲ್ಲಿ ನೀಡಲಾಗುವುದು ಎಂದು ಹೇಳಿದರು.
ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಮಾತನಾಡಿ, ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ 46 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಎಲ್ಲಾ ಗ್ರಾಮ ಪಂಚಾಯತ ಪಿಡಿಓ ಹಾಗೂ ತಾಲ್ಲೂಕ ಪಂಚಾಯತ ಅಧಿಕಾರಿಗಳ ಸಭೆ ಜರುಗಿಸಿ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಸೂಕ್ತ ನಿರ್ದೇಶನ ನೀಡಲಾಗಿದೆಯೆಂದರು. ಕಳೆದ ವರ್ಷ 90 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗಿತ್ತು. 18 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ 72 ಬೋರವೆಲ್ಗಳ ಮೂಲಕ ನೀರು ಸರಬರಾಜು ಮಾಡಲಾಗಿತ್ತು ಎಂದರು. ಬಹುತೇಕ ಈ ಗ್ರಾಮಗಳು ಔರಾದ, ಭಾಲ್ಕಿ ಹಾಗೂ ಕಮಲನಗರ ತಾಲ್ಲೂಕುಗಳ ವ್ಯಾಪ್ತಿಗೊಳಪಡುತ್ತವೆ ಎಂದರು.
ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಮಾರ್ಚ.21 ರಿಂದ ಏಪ್ರಿಲ್ 4 ರವರೆಗೆ ಜರುಗಲಿದ್ದು, ಪಾರದರ್ಶಕ ಪರೀಕ್ಷೆ ನಡೆಸಲು ಎಲ್ಲ ಕೇಂದ್ರಗಳಲ್ಲಿ ಸಿಸಿ ಟಿವಿ ವ್ಯವಸ್ಥೆ ಮಾಡಲಾಗಿದ್ದು ವೆಬ್ ಕಾಸ್ಟಿಂಗ್ ಸಹ ನಡೆಯಲಿದೆ. ಕಳೆದ ವರ್ಷ 62% ಫಲಿತಾಂಶ ಹಾಗೂ 30ನೇ ರ್ಯಾಂಕ್ ಬಂದಿತ್ತು.
ಈ ಬಾರಿ ಫಲಿತಾಂಶ ಹಾಗೂ ರ್ಯಾಂಕ್ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. 20 ಅಂಶಗಳ ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳಿಗೆ ಸದುಪಯೋಗವಾಗಿದೆ.
ಬೆಳಿಗ್ಗೆ ಹಾಗೂ ಸಂಜೆ ವಿಶೇಷ ತರಗತಿ, ಘಟಕ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಸಕ್ತ ಸಾಲಿನ ಪಠ್ಯಕ್ರಮವು ಡಿಸೆಂಬರ್ ಒಳಗೆ ಪೂರ್ಣಗೊಳಿಸಲಾಗಿದ್ದು, 2 ಬಾರಿ ಪುನರಾವಲೋಕನ ನಡೆಸಲಾಗಿದೆ. ಇತರೆ ಕಲಿಕಾಶ್ರಯ ಪುಸ್ತಕ ನೀಡಲಾಗಿದೆ. ಡಯಟ್ನಿಂದ ಫೋನ್ ಮೂಲಕ ಮಾರ್ಗದರ್ಶನ ಮಾಡಲಾಗುತ್ತಿದೆ ಎಂದರು.
ಈ ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಚಂದ್ರಕಾಂತ ಪೂಜಾರ, ಬೀದರ ನಗರಾಭಿವೃದ್ಧಿ ಕೋಶದ ಮೋತಿಲಾಲ ಲಮಾಣಿ, ಸಹಕಾರ ಸಂಘಗಳ ಉಪನಿಬಂಧಕರಾದ ಮಂಜುಳಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…