ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ನೂತನ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು.

ಸದ್ಯಕ್ಕೆ ಕೇವಲ ಮೂರು ಮೆಟ್ರೋ ರೈಲುಗಳ ಮೂಲಕವೇ ಬಿಎಂಆರ್ಸಿಎಲ್ ಸೇವೆ ಆರಂಭಿಸಲು ನಿರ್ಧರಿಸಿದೆ. ಚಾಲಕರಿಲ್ಲದ (ಡ್ರೈವರ್‌ಲೆಸ್) ರೈಲುಗಳು ಇನ್ನೂ ಲಭ್ಯವಾಗದ ಕಾರಣ, ಹಳದಿ ಮಾರ್ಗದ ಸಂಪೂರ್ಣ ಸಾಮರ್ಥ್ಯದಲ್ಲಿ ಸಂಚಾರ ಪ್ರಾರಂಭಿಸಲು ಸಮಯ ಹಿಡಿಯಲಿದೆ.

ಬುಧವಾರದಿಂದ ಈ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಪ್ರಾರಂಭವಾಗಲಿದ್ದು, ಪ್ರಾರಂಭದಲ್ಲಿ 25 ನಿಮಿಷಕ್ಕೊಮ್ಮೆ ರೈಲು ಸಂಚಾರ ನಡೆಯಲಿದೆ.

ಆರ್‌.ವಿ. ರಸ್ತೆ-ಬೊಮ್ಮಸಂದ್ರ ಮಾರ್ಗದ ಒಟ್ಟು ಉದ್ದ 19.15 ಕಿಲೋಮೀಟರ್‌ ಆಗಿದ್ದು, 16 ನಿಲ್ದಾಣಗಳನ್ನು ಒಳಗೊಂಡಿದೆ. ಈ ಮಾರ್ಗಕ್ಕೆ ಅಗತ್ಯವಿರುವ 15 ರೈಲುಗಳ ಪೈಕಿ ಪ್ರಸ್ತುತ ಮೂರು ರೈಲುಗಳು ಮಾತ್ರ ಲಭ್ಯ. ಪ್ರಾರಂಭದಲ್ಲಿ ದಿನಕ್ಕೆ ಸುಮಾರು 25 ರಿಂದ 30 ಸಾವಿರ ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚರಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಹಳದಿ ಮೆಟ್ರೋ ದರ ಸ್ಟೇಜ್

ಪ್ರತೀ ನಿಲ್ದಾಣದ ಟಿಕೆಟ್‌ ದರ ಪಟ್ಟಿ



ಆರ್ ವಿ ರಸ್ತೆಯಿಂದ ರಾಗಿಗುಡ್ಡದ ವರೆಗೆ 10 ರೂಪಾಯಿ.


ಆರ್ ವಿ ರಸ್ತೆ-ಜಯದೇವ 10 ರೂಪಾಯಿ.
ಆರ್ ವಿ ರಸ್ತೆ- BTM ಲೇಔಟ್ 20 ರೂ.
ಆರ್ ವಿ ರಸ್ತೆ -ಬೊಮ್ಮನಹಳ್ಳಿ 30 ರೂ.
ಆರ್ ವಿ ರಸ್ತೆ -ಕೂಡ್ಲೂಗೇಟ್ 40 ರೂ.
ಆರ್ ವಿ ರಸ್ತೆ -ಸಿಂಗಸಂದ್ರ 50 ರೂ.
ಆರ್ ವಿ ರಸ್ತೆ -ಎಲೆಕ್ಟ್ರಾನಿಕ್ ಸಿಟಿ 60 ರೂ.
ಆರ್ ವಿ ರಸ್ತೆ -ಬೊಮ್ಮಸಂದ್ರ 60 ರೂ.
ಸಿಲ್ಕ್ ಬೋರ್ಡ್- ಬೊಮ್ಮಸಂದ್ರ 60 ರೂ

prajaprabhat

Recent Posts

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

3 hours ago

ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…

4 hours ago

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

9 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

9 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

11 hours ago

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

19 hours ago