ಹೊಸ ದೆಹಲಿ.16.ಏಪ್ರಿಲ್.25:- ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೊಸ ಕಾನೂನಿನ ನಿಬಂಧನೆಗಳ ಬಗ್ಗೆ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ.ಕೇಂದ್ರೀಯ ವಕ್ಫ್ ಕೌನ್ಸಿಲ್ನಲ್ಲಿ ಮುಸ್ಲಿಮೇತರರನ್ನು ಸೇರಿಸುವ ನಿಬಂಧನೆಯನ್ನು ನ್ಯಾಯಾಲಯ ಪ್ರಶ್ನಿಸಿದ್ದು,
ಎಂದು ಪ್ರಶ್ನೆ ಮಾಡಿದೆ.
ಈ ಹೊಸ ವಕ್ಫ್ ಕಾಯ್ದೆಯನ್ನು ಪ್ರಶ್ನಿಸಿ 73 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನ ಪೀಠ ವಿಚಾರಣೆ ನಡೆಸುತ್ತಿದ್ದು,ಈ ತಿದ್ದುಪಡಿ ದೇಶದ ಹಲವಾರು ಭಾಗಗಳಲ್ಲಿ ಪ್ರತಿಭಟನೆಯನ್ನು ಹುಟ್ಟುಹಾಕಿದೆ.
ಇಂದು ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಹೊಸ ಕಾನೂನಿನಲ್ಲಿರುವ ಹಲವು ನಿಬಂಧನೆಗಳು ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವ ಸ್ವಾತಂತ್ರ್ಯ ನೀಡುವ ಸಂವಿಧಾನದ 26 ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.ಇನ್ನು ಜಿಲ್ಲಾಧಿಕಾರಿ ಸರ್ಕಾರದ ಭಾಗವಾಗಿದ್ದು, ಅವರು ವಕ್ಫ್ ಬೋರ್ಡ್ ನಲ್ಲಿ ನ್ಯಾಯಾಧೀಶರ ಪಾತ್ರವನ್ನು ನಿರ್ವಹಿಸಿದರೆ ಅದು ಅಸಾಂವಿಧಾನಿಕ ಎಂದು ಅವರು ವಾದಿಸಿದ್ದಾರೆ.