ಹುಮನಾಬಾದ: ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷಾ ಅವಧಿ ಜೂನ್.30 ರವರೆಗೆ ವಿಸ್ತರಣ
ಬೀದರ.28.ಜೂನ್.25:- 2025-26ನೇ ಸಾಲಿನ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರಿಗೆ ಜೂ.23 ರಿಂದ ಜೂ.30 ರವರೆಗೆ ಕಾಲಾವಧಿಯನ್ನು ವಿಸ್ತರಿಸಿ ಆನ್ಲೈನ್ ಮೂಲಕವೂ ನೋಂದಾಯಿಸಲು ಅವಕಾಶ ನೀಡಲಾಗಿದೆ ಎಂದು ಹುಮನಾಬಾದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ನಿಂಗರಾಜ ಅರಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳು, ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸಮೀಕ್ಷೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ಇದಲ್ಲದೇ ಆನ್ಲೈನ್ https://schedulecastesurvey.karnataka.gov.in/selfdeclaration ಲಿಂಕ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವ ವಿಧಾನವನ್ನು ಜೂನ್.22 ರವರೆಗೆ ವಿಸ್ತರಿಸಲಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

