ಬೀದರ.27.ಮೇ.25:-ಸಮಾಜ ಕಲ್ಯಾಣ ಇಲಾಖೆ ಹುಮನಾಬಾದ / ಚಿಟಗುಪ್ಪಾ ತಾಲೂಕಿನ ಅಡಿಯಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ/ನಂತರ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2025-26 ನೇ ಸಾಲಿನ ವಿದ್ಯಾರ್ಥಿಗಳ ಖಾಲಿ ಸ್ಥಾನಗಳು ಭರ್ತಿ ಮಾಡಲು ಪ.ಜಾತಿ/ ಪ.ಪಂ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಹುಮನಾಬಾದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುಮನಾಬಾದ ತಾಲ್ಲೂಕಿನ ವಸತಿ ನಿಲಯಗಳ ವಿವರ: ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಹುಮನಾಬಾದ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಹುಡಗಿ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಹಳ್ಳಿಖೇಡ್ (ಬಿ). ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಹಳ್ಳಿಖೇಡ್ (ಕೆ). ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ದುಬುಲಗುಂಡಿ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಹುಮನಾಬಾದ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ ಹುಮನಾಬಾದ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಹುಮನಾಬಾದ.
ಚಿಟಗುಪ್ಪಾ ತಾಲ್ಲೂಕಿನ ವಸತಿ ನಿಲಯಗಳ ವಿವರ: ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಚಿಟಗುಪ್ಪಾ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಮನ್ನಾಏಖೇಳ್ಳಿ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಮುತ್ತಂಗಿ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಬೇಮಳಖೇಡಾ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಚಿಟಗುಪ್ಪಾ.
ಆಸಕ್ತರು ಇಲಾಖೆಯ ವೆಬ್ಸೈಟ್ https://swdhmis.karnataka.gov.in/ ಮೂಲಕ ದಿನಾಂಕ: 31-08-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಿಂದಿನ ತರಗತಿಯಲ್ಲಿ ತೆರ್ಗಡೆಯಾದ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರಕಾರ್ಡ, ಬ್ಯಾಂಕ್ ಖಾತೆ ಸಂಖ್ಯೆ, ವಿದ್ಯಾರ್ಥಿ ಸ್ಯಾಟ್ಸ್ ಹಾಗೂ ಎಸ್.ಎಸ್.ಪಿ ವಿದ್ಯಾರ್ಥಿ ಐಡಿ ಸಂಖ್ಯೆಯೊAದಿಗೆ ಆನ್ಲೈನ್ ಅರ್ಜಿ ಭರ್ತಿ ಮಾಡಿ ಪ್ರಿಂಟ್ ಕಾಪಿ ಮತ್ತು ವಿದ್ಯಾರ್ಥಿಯ ಇತ್ತಿಚಿನ 4 ಭಾವ ಚಿತ್ರದೊಂದಿಗೆ ವಸತಿ ನಿಲಯ ಪಾಲಕರಿಗೆ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಂಗಳೂರು.09.ಆಗಸ್ಟ್.25:- 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಾತಿ-ಸಂದರ್ಶನ ದಿನಾಂಕ ಮತ್ತು ಸಮಯ ನಿಗದಿಪಡಿಸಲಾಗಿದ್ದು, ಆಯ್ಕೆಗೆ ಸಂಬಂಧಿಸಿ ಸಂದರ್ಶನವು ಮಂಗಳೂರು ವಿಶ್ವವಿದ್ಯಾನಿಲಯದ…
ಕೊಪ್ಪಳ.08.ಆಗಸ್ಟ್.25: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ…
ಕೊಪ್ಪಳ.08.ಆಗಸ್ಟ್.25: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಧನಂಜಯ ಮಠದ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ…
ಕೊಪ್ಪಳ.08.ಆಗಸ್ಟ್.25: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆಯ…
ಕೊಪ್ಪಳ.08.ಆಗಸ್ಟ್.25: ಕರ್ನಾಟಕ ಮುಕ್ತ ಶಾಲೆ–ಕೆ.ಓ.ಎಸ್ ಪೂರಕ ಪರೀಕ್ಷೆಗಳು ಆಗಸ್ಟ್ 11ರಿಂದ ಕೊಪ್ಪಳದ ಮುನಿರಾಬಾದ್ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ…
ಕೊಪ್ಪಳ.08.ಆಗಸ್ಟ್.25: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರು ಆಗಸ್ಟ್ 9 ರಂದು ಶನಿವಾರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ…