ಹೆರಿಗೆ ನಂತರ ಮಗುವಿಗೆ ಆರು ತಿಂಗಳವರೆಗೆ ತಪ್ಪದೆಎದೆಹಾಲು ಮಾತ್ರ ನೀಡಿ: ಡಿಎಚ್‌ಓ ಡಾ.ಸುರೇಂದ್ರ ಬಾಬು ಸಲಹೆ

ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಚಾಲನೆ


ರಾಯಚೂರು.01.ಆಗಸ್ಟ್.25: ಬಾಲ್ಯದಲ್ಲಿ ಮಗುವಿನ ಆರೋಗ್ಯವನ್ನು ಸದೃಢ ಮಾಡಿದಾಗ ಭವಿಷ್ಯದಲ್ಲಿ ಸಶಕ್ತ ವ್ಯಕ್ತಿಯನ್ನು ರೂಪಿಸಲು ಸಾಧ್ಯ. ಇದಕ್ಕಾಗಿ ಹೆರಿಗೆ ನಂತರದಲ್ಲಿ ಮೊದಲ ಅರ್ಧ ಗಂಟೆಯೊಳಗೆ ತಕ್ಷಣವೇ ಸ್ತನ್ಯಪಾನ ಮಾಡಿಸಲು ಮರೆಯಬಾರದು. ಇದಕ್ಕಾಗಿ ಪಾಲಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ಮನವಿ ಮಾಡಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ರಾಯಚೂರು ರವರ ಸಂಯುಕ್ತಾಶ್ರಯದಲ್ಲಿ ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಆಗಸ್ಟ್ 1ರಂದು ನಡೆದ ವಿಶ್ವ ಸ್ತನ್ಯ ಪಾನ ಸಪ್ತಾಹ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.


ಅನಾದಿ ಕಾಲದಿಂದಲೂ ತಾಯಿಯ ಎದೆ ಹಾಲು ಅಮೃತಕ್ಕೆ ಸಮಾನ ಎನ್ನುವುದು ಜನಸಾಮಾನ್ಯರಲ್ಲಿ ಬೇರುಬಿಟ್ಟಿದ್ದರೂ ಕೆಲವರು ಮಗುವಿನ ಆರೋಗ್ಯಕ್ಕೆ ಹಾನಿ ಮಾಡಬಹುದಾದ ಸಕ್ಕರೆ ನೀರು, ಬೆಲ್ಲದ ನೀರು ಜೇನುತುಪ್ಪ ಕೊಡುತ್ತಾರೆ. ಕುಟುಂಬಕ್ಕೆ ಇಂತಹ ತಪ್ಪು ಮಾಹಿತಿಯನ್ನು ಯಾರಾದರೂ ನೀಡಿದರೆ ದಯವಿಟ್ಟು ಅದನ್ನು ತಿರಸ್ಕರಿಸಬೇಕು. ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರು ಕಾರ್ಯ ನಿರ್ವಹಿಸುತ್ತಿದ್ದು ಎಲ್ಲ ಖಾಯಿಲೆಗಳಿಗೆ ಅಗತ್ಯ ಚಿಕಿತ್ಸೆ ಔಷಧೋಪಚಾರ ನೀಡಲಾಗುತ್ತಿದ್ದು ಇದರ ಸದುಪಯೋಗ ಪಡೆಯಲು ವಿನಂತಿಸಿದರು.


ಎಮ್.ಎನ್, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಆರೋಗ್ಯ ಅಧಿಕಾರಿಗಳಾದ ಡಾ.ನಂದಿತಾ ಅವರು ಪ್ರಾಸ್ತಾವಿಕ ಮಾತನಾಡಿ, ತಾಯಿ ಎದೆ ಹಾಲು ನೀಡುವುದರಲ್ಲಿ ಹೂಡಿಕೆ ಮಾಡಿದರೆ ಮಕ್ಕಳ ಆರೋಗ್ಯಕರ ಭವಿಷ್ಯಕ್ಕಾಗಿ ಹೂಡಿಕೆ ಮಾಡಿದಂತೆ ಎಂಬುದು ಈ ವರ್ಷದ ಘೋಷಣೆಯಾಗಿದ್ದು, ಇದು ಮಗುವಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ. ಮಗುವಿನ ಆರೋಗ್ಯಕ್ಕಾಗಿ ಹಣ ವೆಚ್ಚ ಮಾಡುವುದನ್ನು ತಪ್ಪಿಸಲು ಹೆರಿಗೆ ನಂತರದಲ್ಲಿ ಮೊದಲ ಅರ್ಧ ಗಂಟೆಯೊಳಗೆ ತಕ್ಷಣವೇ ಸ್ತನ್ಯಪಾನ ಮಾಡಿಸಬೇಕು ಎಂಬುದನ್ನು ಅರಿಯಬೇಕು ಎಂದರು.


ಹೆರಿಗೆ ನಂತರದಲ್ಲಿ ತಕ್ಷಣ ಬರುವ ಹಳದಿ (ಕೊಲೆಸ್ಟ್ರಮ್) ಹಾಲು ಶಿಶುವಿಗೆ ಶಕ್ತಿವರ್ಧಕವಾಗಿದೆ. ಸ್ತನ್ಯಪಾನ ತಾಯಿಯ ಮಮತೆಯ ಪ್ರತೀಕವಾಗಿದೆ. ಪ್ರತಿಯೊಬ್ಬ ತಾಯಿಯಲ್ಲಿ ತನ್ನ ಮಗುವಿಗೆ ಸಾಕಾಗುವಷ್ಟು ಹಾಲನ್ನು ಉತ್ಪಾದಿಸುವ ಸಾಮರ್ಥ್ಯವಿದೆ. ಮಗು ಹಾಲುಂಡಷ್ಟು ಎದೆಹಾಲು ಹೆಚ್ಚು ಉತ್ಪತ್ತಿಯಾಗುವುದು. ಮಗುವಿಗೆ ಹಾಲು ಸಾಕಾಗಲ್ಲ ಎಂಬ ಮನೋಭಾವನೆಯನ್ನು ತೊಡೆದು ಹಾಕಿ ಮಗುವಿನ ಸಮರ್ಪಕವಾದ ಪೋಷಣೆಗೆ ತಾಯಿ ತನ್ನ ಸಾಮರ್ಥ್ಯ ಅರಿತು ಎದೆಹಾಲನ್ನು ಉಣಿಸಲು ಮುಂದಾಗಬೇಕು. ಎದೆಹಾಲು ಬರುತ್ತಿಲ್ಲವೆಂದು ಬಾಟಲಿ ಹಾಲು ಗ್ರೈಫ್ ವಾಟರ್ ಇನ್ನೀತರ ಬೇರೆ ಏನೂ ಕುಡಿಸಬಾರದು. ಮಗುವಿಗೆ ಎದೆಹಾಲಿನ ಜೊತೆಗೆ ಲಸಿಕೆಯನ್ನು ಹಾಕಿಸಬೇಕು ಎಂದು ತಾಯಿಂದಿರರಿಗೆ ತಿಳಿಸಿದರು. ಈ ದಿಶೆಯಲ್ಲಿ ಜಿಲ್ಲೆಯಾದ್ಯಂತ ನಿರಂತರವಾಗಿ ಎಲ್ಲ ತಾಲೂಕುಗಳಲ್ಲಿ ನೀಡುವ ಜಾಗೃತಿ ಶಿಬಿರಗಳ ಮೂಲಕ ಮಾಹಿತಿ ಪಡೆದುಕೊಳ್ಳುವಂತೆ ವಿನಂತಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹಮ್ಮದ್ ಶಾಕೀರ್, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ ಕುಮಾರ್, ರೆಡಿಯಾಲಾಜಿಸ್ಟ್ ಡಾ.ಇರ್ಮಾನ ಪರವೇಜ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸರೋಜಾ ಕೆ., ತಜ್ಞವೈದ್ಯರಾದ ಡಾ.ಭುವನೇಶ್ವರಿ, ಡಾ.ಬಸ್ಸಮ್ಮ, ಮಕ್ಕಳ ತಜ್ಞರು, ಶುಶ್ರೂಷಣಾಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ತಾಯಂದಿರು ಉಪಸ್ಥಿತರಿದ್ದರು.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

8 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago