ಬೆಂಗಳೂರು.13.ಮೇ.25:- ರಾಜ್ಯ ಸರ್ಕಾರ ಉನ್ನತ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 999 ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸೆಲಿಂಗ್ ಮೂಲಕ ನೇಮಕ ಮಾಡಿದೆ.ಹೈಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ 2024-25ನೆ ಸಾಲಿಗೆ ಸಂಬಂಧಿಸಿದಂತೆ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸಲು ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದ್ದು, ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.
ಮೆರಿಟ್ ಲಿಸ್ಟ್ನಲ್ಲಿ ಸ್ಥಾನ ಪಡೆದವರು 3 ದಿನದೊಳಗೆ ನಿಗದಿತ ಕಾಲೇಜಿಗೆ ತೆರಳಿ ವರದಿ ಮಾಡಿಕೊಳ್ಳಬೇಕು. ಆ ಕಾಲೇಜಿನ ಪ್ರಾಂಶುಪಾಲರು ಕರ್ತವ್ಯವಕ್ಕೆ ಹಾಜರಾದ ಅತಿಥಿ ಉಪನ್ಯಾಸಕರ ಮಾಹಿತಿಯನ್ನು ಕಡ್ಡಾಯವಾಗಿ ಇಎಂಐಎಸ್ನಲ್ಲಿ ಅಪ್ಲೋಡ್ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ಅನಂತರ ಉಳಿಕೆಯಾಗುವ ಬೋಧನಾ ಕಾರ್ಯ ಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸೆಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದ್ದು ಮೆರಿಟ್ ಲಿಸ್ಟ್ ಅನ್ನು ಪ್ರಕಟಿಸಲಾಗಿದೆ.
ಈ ಕುರಿತು ಇಲಾಖೆಯು ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಅತಿಥಿ ಉಪನ್ಯಾಸಕರ ಆಯ್ಕೆಗೆ ಸಂಬಂಧಿಸಿದಂತೆ, ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅಭ್ಯರ್ಥಿಗಳು ಆನ್ಲೈನ್ ಅರ್ಜಿಗಳಲ್ಲಿ ನೀಡಿರುವ ವಿದ್ಯಾರ್ಹತೆ, ಸೇವಾ ಅನುಭವ ಮತ್ತಿತರೆ ವಿವರಗಳನ್ನು ಆಧರಿಸಿ ರಾಜ್ಯವ್ಯಾಪಿ ವಿಷಯವಾರು ಮೆರಿಟ್ ಪಟ್ಟಿಯನ್ನು ಅನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
2024-25ನೇ ಶೈಕ್ಷಣಿಕ ಸಾಲಿಗೆ ಆಯ್ಕೆಗೊಳ್ಳುವ ಅತಿಥಿ ಉಪನ್ಯಾಸಕರನ್ನು 2025ರ ಆಗಸ್ಟ್ 2ರವರೆಗೆ ಮಾತ್ರ ಮುಂದುವರೆಸಿ, ನಂತರ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗುವುದು. ಅತಿಥಿ ಉಪನ್ಯಾಸಕರಿಗೆ 15/19 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಲಭ್ಯವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನ ಪಾವತಿಸುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಸ್ತುತ ಸಾಲಿಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವ ಅತಿಥಿ ಉಪನ್ಯಾಸಕರು ಪ್ರಾಂಶುಪಾಲರ ಗಮನಕ್ಕೆ ತಾರದೆ ಸತತವಾಗಿ 8 ದಿನಗಳಿಗಿಂತಲೂ ಹೆಚ್ಚಿನ ಅವಧಿಗೆ ಗೈರು ಹಾಜರಾದಲ್ಲಿ ಅಂತಹ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಕೈಬಿಡಲು ಸಂಬಂಧಪಟ್ಟ ಪ್ರಾಂಶುಪಾಲರು ಕ್ರಮ ವಹಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.23.ಜೂನ್.25:- ಒಳಮೀಸಲಾತಿ ಜಾರಿಗಾಗಿ ವೈಜ್ಞಾನಿಕ ದತ್ತಾಂಶ ನೀಡಲು ನ್ಯಾ.ಎಚ್.ಎನ್. ನಾಗಮೋಹನ್ದಾಸ್ ಏಕ ಸದಸ್ಯ ಆಯೋಗದ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿಯ…
ಗ್ರೂಪ್ 'ಬಿ' ಮತ್ತು ಗ್ರೂಪ್ 'ಸಿ' ಕೇಂದ್ರ ಸರ್ಕಾರದ STAFF SALECTION COMMISSION ಸಿಬ್ಬಂದಿ ನೇಮಕಾತಿ ಆಯೋಗ (ಕರ್ನಾಟಕ-ಕೇರಳ ಪ್ರದೇಶ,…
ಬೆಂಗಳೂರು.23.ಜೂನ್.25:- ರಾಜ್ಯದ್ಯಂತ್ 6,598 ಗ್ರಾಮ ಪಂಚಾಯತ'ಗಳಲಿ ಗ್ರಾಮ ಗ್ರಂಥಾಲಯಗಳು ಮಂಜೂರು. ಕೇಂದ್ರ ಸರ್ಕಾರದ ನೆರವಿನೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯು…
ಬೆಂಗಳೂರು.23.ಜೂನ್.25:- 2025-26 ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಮಕ್ಕಳ ಹಾಜರಾತಿಗೆ ಅತ್ಯಾಧುನಿಕ (Face Recognition Attendance ) ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು,…
ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕದ ಪಾಲ್ಗೊಳ್ಳುವಿಕೆಯ ಬಗ್ಗೆ ನಿರ್ಧಾರವನ್ನು ಶ್ವೇತಭವನ ವಿಳಂಬ ಮಾಡಿದ ನಂತರ ಇಂದು ಕಚ್ಚಾ ತೈಲ ಬೆಲೆಗಳು ಕಡಿಮೆಯಾದವು.…
ದೇಶದ ಕೈಗಾರಿಕಾ ಉತ್ಪಾದನೆಯ ಸುಮಾರು ಐದನೇ ಎರಡರಷ್ಟು ಪಾಲನ್ನು ಹೊಂದಿರುವ ಭಾರತದ ಮೂಲಸೌಕರ್ಯ ಉತ್ಪಾದನೆಯು, ಒಂದು ವರ್ಷದ ಹಿಂದಿನ ಇದೇ…