ಚಾಮರಾಜನಗರ .02.ಏಪ್ರಿಲ್.25:-ಯಳಂದೂರು: ಹೊನ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಹೆಚ್. ಎಂ. ಗುರುಪ್ರಸಾದ್, ಉಪಾಧ್ಯಕ್ಷರಾಗಿ ನೇತ್ರಾವತಿ ಅವಿರೋಧವಾಗಿ ಆಯ್ಕೆ
ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಆರ್. ಪುಟ್ಟಬಸವಯ್ಯಹಾಗೂ ಉಪಾಧ್ಯಕ್ಷರಾಗಿದ ಭಾಗ್ಯಮ್ಮ ರವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಶುಕ್ರವಾರ ನಡೆದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಹೆಚ್. ಎಂ. ಗುರುಪ್ರಸಾದ್ ಒಬ್ಬರೇ ಹಾಗೂ ಉಪಾಧ್ಯಕ್ಷರಸ್ಥಾನಕ್ಕೆ ನೇತ್ರಾವತಿ ನಾಮಪತ್ರ ಸಲ್ಲಿಸಿದ್ದು ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ ರವರು ಚುನಾವಣೆ ಅಧಿಕಾರಿಯಾಗಿ ಭಾಗವಹಿಸಿ ಚುನಾವಣೆ ಪ್ರಕ್ರಿಯೆಗಳನ್ನು ಮುಗಿಸಿ ನಂತರ ಹೆಚ್. ಎಂ. ಗುರುಪ್ರಸಾದ್
ರವರು ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿಹಾಗೂ ಉಪಾಧ್ಯಕ್ಷರಾಗಿ ನೇತ್ರಾವತಿ ಅವಿರೋಧವಾಗಿ ಆಯ್ಕೆಯಾದರೆಂದು ಘೋಷಣೆ ಮಾಡಿದರು.
ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಹೆಚ್. ಎಂ. ಗುರುಪ್ರಸಾದ್ ಅವರು ಮಾತನಾಡಿ ನನಗೆ ದೊರಕಿರುವ ಅಲ್ಪ ಪ್ರಮಾಣದ ಅವಧಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಮಾಜಿ ಅಧ್ಯಕ್ಷ ಹ ಆರ್ ಪುಟ್ಟ ಬಸವಯ್ಯ, ಭಾಗ್ಯಮ್ಮ, ಇಂದಿರಾ, ಕೆ ಚಿನ್ನಸ್ವಾಮಿ,ಶಂಕರ್ ರೂಪೇಶ್, ಶಿವಪ್ರಕಾಶ್, ನಾಗರತ್ನಮ್ಮ, ಅನಿತ ನಿರಂಜನ್, ರಾಜೇಶ್, ಜಯಮ್ಮ, ಜಿ ನಾಗರಾಜು, ರಾಧ ಮಹದೇವಸ್ವಾಮಿ, ರಾಧ, ಕುಮಾರ್, ಮುಖಂಡರಾದ ರೇವಣ್ಣ, ತಾಪಂ ಸದಸ್ಯ ನಿರಂಜನ್, ರಾಜಶೇಖರ್, ಹೊನ್ನೂರು ಪ್ರಕಾಶ್, ಸುರೇಶ್,
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಿರಂಜನ್ ಕುಮಾರ್ , ಕಾರ್ಯದರ್ಶಿ ಲಕ್ಷ್ಮಿ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿಹಾಜರಿದ್ದರು.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…